Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:18 - ಕನ್ನಡ ಸತ್ಯವೇದವು C.L. Bible (BSI)

18 ಇದನ್ನು ಅರ್ಥಮಾಡಿಕೊಳ್ಳಲು ಜ್ಞಾನ ಬೇಕು. ಬುದ್ಧಿವಂತನು ಮೃಗದ ಸಂಖ್ಯೆಯನ್ನು ಎಣಿಸಲಿ. ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆ. ಆ ಸಂಖ್ಯೆಯು 666.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದರಲ್ಲಿ ಜ್ಞಾನವು ಅಡಕವಾಗಿದೆ. ಬುದ್ಧಿವಂತನು ಆ ಮೃಗದ ಅಂಕೆಯನ್ನು ಎಣಿಸಲಿ; ಅದು ಒಬ್ಬ ಮನುಷ್ಯನನ್ನು ಸೂಚಿಸುವ ಅಂಕೆಯಾಗಿದೆ; ಅದರ ಅಂಕೆಯು ಆರುನೂರ ಅರುವತ್ತಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ತಿಳುವಳಿಕೆಯುಳ್ಳ ಮನುಷ್ಯನು ಮೃಗದ ಸಂಖ್ಯೆಯ ಅರ್ಥವನ್ನು ಕಂಡುಕೊಳ್ಳಲು ಸಾಧ್ಯ. ಇಲ್ಲಿ ಜ್ಞಾನದ ಅಗತ್ಯವಿದೆ. ಈ ಸಂಖ್ಯೆಯು ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆ 666.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದರಲ್ಲಿ ಜ್ಞಾನವಿದೆ. ಬುದ್ಧಿಯುಳ್ಳವನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆಯು 666.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಶಾನೊ ಹೊತ್ತೊ ತೆ ಕಳ್ವುನ್ ಘೆಂವ್ದಿತ್, ಅನಿ ಬುದ್ದ್ ಹೊತ್ತೊ ತ್ಯಾ ಭಯಾನಕ್ ಸಾಪಾಚೆ ಅಂಕೆ ಮೆಜುಂದಿ. ತೆ ಎಕ್ ಮಾನ್ಸಾಚೆ ನಾಂವ್ ದಾಕ್ವುನ್ ದಿತಾ. ತೆ ಅಂಕೆ ಸಾಸೆ ಸಾಟಾರ್ ಸಾ. 666.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:18
10 ತಿಳಿವುಗಳ ಹೋಲಿಕೆ  

ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು.


“ಇದನ್ನು ಗ್ರಹಿಸಿಕೊಳ್ಳಲು ಬುದ್ಧಿ ಸಾಮರ್ಥ್ಯವಿರಬೇಕು. ಏಳು ತಲೆಗಳು ಆ ಸ್ತ್ರೀ ಕುಳಿತಿರುವ ಏಳು ಬೆಟ್ಟಗಳನ್ನೂ ಏಳು ರಾಜರನ್ನೂ ಸೂಚಿಸುತ್ತವೆ.


ಅನಂತರ, ಆತನು ನಗರದ ಕೋಟೆಯನ್ನು ಅಳೆದನು. ಅದು ಆತನು ಅಳೆದ ಆಳತೆಯ ಪ್ರಮಾಣದಲ್ಲಿ ಅರವತ್ತು ಮೀಟರಿನಷ್ಟು ಎತ್ತರವಾಗಿತ್ತು.


ಈ ಪ್ರವಾದನಾ ಸಂದೇಶವನ್ನು ಓದುವವನು ಧನ್ಯನು: ಓದಿದ್ದನ್ನು ಕೇಳಿಸಿಕೊಳ್ಳುವವರೂ ಧನ್ಯರು ಮತ್ತು ಈ ಪ್ರವಾದನೆಯಲ್ಲಿ ಲಿಖಿತವಾಗಿರುವುದನ್ನು ಕೈಗೊಂಡು ನಡೆಯುವವರು ಸಹ ಧನ್ಯರು! ಏಕೆಂದರೆ, ಕಾಲ ಸನ್ನಿಹಿತವಾಯಿತು.


“ವಿನಾಶಕಾರಿಯಾದ ವಿಕಟಮೂರ್ತಿಯು ಇರಬಾರದ ಸ್ಥಾನದಲ್ಲಿ ಇರುವುದನ್ನು ನೀವು ನೋಡುವಾಗ (ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ) ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ;


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಪರ್ಯಾಲೋಚಿಸಲಿವುಗಳನು ಬುದ್ಧಿವಂತರು I ಗ್ರಹಿಸಲಿ ಪ್ರಭುವಿನಚಲ ಪ್ರೀತಿಯನಾ ಜನರು II


(ರೆಫಾಯರೊಳಗೆ ಬಾಷಾನಿನ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)


ನಮ್ಮ ಅಕ್ರಮ ನಡತೆ ದೇವರ ನ್ಯಾಯನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮವಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು