Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:4 - ಕನ್ನಡ ಸತ್ಯವೇದವು C.L. Bible (BSI)

4 ಜನರು ಆ ಮೃಗವನ್ನು ಮಾತ್ರವಲ್ಲ, ಅದಕ್ಕೆ ಅಧಿಕಾರವನ್ನು ಕೊಟ್ಟ ಘಟಸರ್ಪವನ್ನೂ ಆರಾಧಿಸಿದರು. ಮೃಗವನ್ನು ಕುರಿತು, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ನಮಸ್ಕಾರ ಮಾಡುವವರಾದರು. ಇದಲ್ಲದೆ ಆ ಮೃಗಕ್ಕೂ ನಮಸ್ಕಾರ ಮಾಡಿ - ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧಮಾಡುವದಕ್ಕೆ ಯಾರು ಶಕ್ತರು? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಘಟಸರ್ಪವು ತನ್ನ ಶಕ್ತಿಯನ್ನೆಲ್ಲಾ ಆ ಮೃಗಕ್ಕೆ ನೀಡಿದ್ದರಿಂದ ಜನರೆಲ್ಲರೂ ಆ ಸರ್ಪವನ್ನೂ ಆ ಮೃಗವನ್ನೂ ಆರಾಧಿಸಿ, “ಮೃಗಕ್ಕಿಂತಲೂ ಅಧಿಕ ಬಲಶಾಲಿಗಳು ಯಾರಿದ್ದಾರೆ? ಅದರ ವಿರುದ್ಧ ಯಾರು ಹೋರಾಡಬಲ್ಲರು?” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜನರು ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟಿದ್ದರಿಂದ, ಆ ಘಟಸರ್ಪನನ್ನು ಆರಾಧಿಸಿದರು. ಇದಲ್ಲದೆ ಆ ಮೃಗವನ್ನೂ ಆರಾಧಿಸಿ, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸಗ್ಳೆಜಾನಾನಿ ಭಯಾನಕ್ ಸಾಪಾಚೆ ಆರಾದಾನ್ ಕರ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಅಪ್ನಾಚೊ ಸಗ್ಳೊ ಅದಿಕಾರ್ ತ್ಯಾ ಭಯಾನಕ್ ಸಾಪ್ ದಿಲ್ಲ್ಯಾನ್. ತೆನಿ, ಹ್ಯಾ ಭಯಾನಕ್ ಸಾಪ್ ಸರ್ಕೆ ಕೊನ್ ಹಾಯ್? ಹೆಚ್ಯಾ ವಾಂಗ್ಡಾ ಕುಸ್ತಿ ಧರುನ್ ಕೊನಾಕ್ ಹೊತಾ? ಮನುನ್ಗೆತ್ ಭಯಾನಕ್ ಸಾಪ್‍ಬಿ ಆರಾದನ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:4
18 ತಿಳಿವುಗಳ ಹೋಲಿಕೆ  

ನಾನು ಕಂಡ ಆ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತಿದ್ದವು. ಬಾಯಿಯು, ಸಿಂಹದ ಬಾಯಂತೆ ಇತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಅಪಾರ ಅಧಿಕಾರವನ್ನೂ ಕೊಟ್ಟಿತು.


ಅವರು ಅವಳನ್ನು ದಹಿಸಿದ ಬೆಂಕಿಯ ದಟ್ಟ ಹೊಗೆಯನ್ನು ಕಂಡು, “ಈ ಮಹಾನಗರಿಗೆ ಸರಿಸಮನಾದ ನಗರವೊಂದುಂಟೇ?” ಎಂದು ಉದ್ಗರಿಸಿದರು.


ಆ ಮೃಗದ ವಿಗ್ರಹಕ್ಕೆ ಜೀವಶ್ವಾಸವನ್ನೂದಿ ಮಾತಾಡುವಂತೆಯೂ ಆ ವಿಗ್ರಹವನ್ನು ಆರಾಧಿಸದವರನ್ನು ಕೊಲ್ಲುವಂತೆಯೂ ಎರಡನೆಯ ಮೃಗಕ್ಕೆ ಅನುಮತಿಯನ್ನು ಕೊಡಲಾಯಿತು.


ಆಕಾಶದಲ್ಲಿ ಮತ್ತೊಂದು ಚಿಹ್ನೆ ಕಾಣಿಸಿಕೊಂಡಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳಿದ್ದವು, ಹತ್ತು ಕೊಂಬುಗಳಿದ್ದವು; ಅದರ ಏಳು ತಲೆಗಳ ಮೇಲೆ ಏಳು ಮುಕುಟಗಳಿದ್ದವು.


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಇಸ್ರಯೇಲರು ಅವನನ್ನು ನೋಡಿ ಭಯಭೀತಿಯಿಂದ ಓಡತೊಡಗಿದರು.


ಆ ನಾಡಿನವರು ಅನಾಕ್ಯರೆಂಬ ಬಲಿಷ್ಠರಾದ ಎತ್ತರದ ಜನರು. ಅವರ ವಿಷಯ ನಿಮಗೆ ತಿಳಿದೇ ಇದೆ; ‘ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ’ ಎಂಬ ಮಾತನ್ನು ಕೇಳಿದ್ದೀರಷ್ಟೆ.


ನನ್ನನ್ನು ಯಾರಿಗೆ ಸರಿಹೋಲಿಸಬಲ್ಲಿರಿ? ನನ್ನನ್ನು ಯಾರಿಗೆ ಸಾಟಿಮಾಡಬಲ್ಲಿರಿ?


ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು.


ಬಳಿಕ ನಾನು ಮತ್ತೊಂದು ಮೃಗವನ್ನು ಕಂಡೆ. ಅದು ಭೂಮಿಯಿಂದ ಮೇಲೇರಿ ಬಂದಿತು. ಅದಕ್ಕೆ ಟಗರಿಗಿರುವಂಥ ಎರಡು ಕೊಂಬುಗಳು ಇದ್ದವು. ಆದರೆ ಅದು ಘಟಸರ್ಪದಂತೆಯೇ ಮಾತನಾಡುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು