Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:8 - ಕನ್ನಡ ಸತ್ಯವೇದವು C.L. Bible (BSI)

8 ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜಿವಾನಿ ಮಾರಲ್ಲ್ಯಾ ಬೊಕ್ಡಾಕ್ ಸಮಂದ್ ಪಡಲ್ಲ್ಯಾ ಜಿವಾಚ್ಯಾ ಪುಸ್ತಕಾತ್ ಜಗ್ ರಚುಚ್ಯಾ ಅದ್ದಿ ಕೊನಾಚಿ ನಾವಾ ಲಿವಲ್ಲಿ ನಾತ್, ತೆನಿ ಸಗ್ಳಿ ಜಿಮ್ನಿ ವೈಲಿ ಲೊಕಾ ತ್ಯಾ ಭಯಾನಕ್ ಜನಾವರಾಕ್ ಆರಾದನ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:8
25 ತಿಳಿವುಗಳ ಹೋಲಿಕೆ  

ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಅವರೆಲ್ಲರೂ ಉಚ್ಚಕಂಠದಿಂದ : “ವಧಿತ ಕುರಿಮರಿಯಾದಾತನು ಶಕ್ತಿಯನು, ಸಿರಿತನವನು ಗೌರವವನು, ಘನಮಾನವನು ಸ್ತುತಿಯನು, ಸುಜ್ಞಾನವನು ಹೊಂದಲು ಯೋಗ್ಯನು,” ಎಂದು ಹಾಡಿದರು.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ಇಲ್ಲವಾದರೆ ನೀವು ಬರೆದಿರುವ (ಜೀವಿತರ) ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಬಿಡಿಯೆಂದು ಕೇಳಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.


ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.


ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಆ ಘಟಸರ್ಪ ತನ್ನ ಬಾಯಿಂದ ನೀರನ್ನು ನದಿಯಂತೆ ಸುರಿಸುತ್ತಾ ಅದರಲ್ಲಿ ಆ ಮಹಿಳೆಯನ್ನು ಕೊಚ್ಚಿಕೊಂಡು ಹೋಗುವಂತೆ ಮಾಡಲು ಯತ್ನಿಸಿತು.


ಹೋಗುತ್ತಾ ಇದ್ದಾಗ ಇಸಾಕನು ತಂದೆ ಅಬ್ರಹಾಮನನ್ನು, “ಅಪ್ಪಾ” ಎಂದು ಕರೆದ; “ಏನು ಮಗನೇ?” ಎಂದ ಅಬ್ರಹಾಮ. ಇಸಾಕನು, “ಬೆಂಕಿ-ಕಟ್ಟಿಗೆಯೇನೋ ಇದೆ; ಆದರೆ ದಹನಬಲಿಗೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದ.


ಉಳಿಸಬೇಡವರನು ಜೀವಬಾಧ್ಯರ ಪಟ್ಟಿಯಲಿ I ಸೇರಿಸಬೇಡವರನು ಸಜ್ಜನರ ಸಂಖ್ಯೆಯಲಿ II


ಇದಲ್ಲದೆ, ಸ್ವರ್ಗ, ಭೂಮಿ, ಪಾತಾಳಗಳಲ್ಲೂ ಸಮುದ್ರದಲ್ಲೂ ಇರುವ ಸಮಸ್ತ ಸೃಷ್ಟಿಗಳು ಹೀಗೆ ಹಾಡುವುದನ್ನು ಕೇಳಿಸಿಕೊಂಡೆ : “ಸಿಂಹಾಸನದಲ್ಲಿ ಕುಳಿತವನಿಗೆ, ಯಜ್ಞಕುರಿಮರಿಯಾದಾತನಿಗೆ ಸಲ್ಲಲಿ ಯುಗಯುಗಾಂತರಕ್ಕೆ ಘನಮಾನ, ಗೌರವ, ಪರಾಕ್ರಮ, ಮತ್ತು ಮಹಿಮೆ.”


ಇದನ್ನೂ ನಾನು ಕಂಡೆ: ಯಜ್ಞದ ಕುರಿಮರಿಯಾದಾತನು ಏಳು ಮುದ್ರೆಗಳಲ್ಲಿ ಒಂದನ್ನು ಒಡೆದನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಗುಡುಗಿನಂತಿದ್ದ ಸ್ವರದಿಂದ, “ಇಲ್ಲಿ ಬಾ,” ಎಂದು ಕರೆಯುವುದನ್ನು ನಾನು ಕೇಳಿಸಿಕೊಂಡೆ.


ಈ ಮೃಗವು, ಮೊದಲನೆಯ ಮೃಗಕ್ಕಿದ್ದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲೇ ಚಲಾಯಿಸಿತು. ಮಾರಕವಾದ ಗಾಯದಿಂದ ಗುಣಹೊಂದಿದ ಆ ಮೊದಲನೆಯ ಮೃಗವನ್ನು ಭೂಲೋಕವು ಮತ್ತು ಅದರ ನಿವಾಸಿಗಳು ಆರಾಧಿಸುವಂತೆ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು