Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:12 - ಕನ್ನಡ ಸತ್ಯವೇದವು C.L. Bible (BSI)

12 ಆದ್ದರಿಂದ ದೇವರ ಆಜ್ಞೆಗಳನ್ನು ಕೈಗೊಂಡು ಯೇಸುಸ್ವಾಮಿಯಲ್ಲಿ ವಿಶ್ವಾಸವಿಟ್ಟು ನಡೆಯುವ ದೇವಜನರಲ್ಲಿ ಸಹನೆ, ಸಹಿಷ್ಣುತೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ತೋರಿಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ಪರಿಸ್ಥಿತಿಯಲ್ಲಿ, ದೇವರ ಪರಿಶುದ್ಧ ಜನರು ತಾಳ್ಮೆಯಿಂದಿರಬೇಕು. ಅವರು ದೇವರ ಆಜ್ಞೆಗಳಿಗೆ ವಿಧೇಯರಾಗಿರಬೇಕು ಮತ್ತು ಯೇಸುವಿನಲ್ಲಿ ನಂಬಿಕೆಯನ್ನಿಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಕ್ಕಾಗಿಯೇ ದೇವರ ಆಜ್ಞೆಗಳನ್ನೂ ಯೇಸುವಿನಲ್ಲಿ ನಂಬಿಕೆಯನ್ನೂ ಕಾಪಾಡುವ ದೇವಜನರ ತಾಳ್ಮೆಯ ಸಹಿಷ್ಣುತೆ ಇದರಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆ ದೆವಾಚ್ಯಾ ಲೊಕಾಕ್ನಿ ದೆವಾಚ್ಯಾ ಖಾಯ್ದ್ಯಾಕ್ನಿ ಖಾಲ್ತಿ ಹೊವ್ನ್ ಚಲ್ತಲ್ಯಾಕ್ನಿ ಅನಿ ಜೆಜುಕ್ ವಿಶ್ವಾಸುನ್ ಹೊತ್ತ್ಯಾಕ್ನಿ ಸಂಬಾಳುನ್ ಘೆವ್ನ್ ರ್‍ಹಾವ್ಕ್ ಬಲ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:12
7 ತಿಳಿವುಗಳ ಹೋಲಿಕೆ  

ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.


ಇದರಿಂದಾಗಿ ಘಟಸರ್ಪಕ್ಕೆ ಆ ಮಹಿಳೆಯ ಮೇಲೆ ತೀವ್ರತರ ರೋಷವುಂಟಾಯಿತು. ಆಕೆಯ ಇನ್ನುಳಿದ ಸಂತತಿಯವರ ಮೇಲೆ, ಅಂದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವವರ ಮೇಲೆ ಹಾಗೂ ಯೇಸುಸ್ವಾಮಿಯ ಪರವಾಗಿ ಸಾಕ್ಷಿನೀಡುವವರ ಮೇಲೆ, ಯುದ್ಧಮಾಡಲು ಹೊರಟುಹೋಯಿತು.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ನಾನು ನಿನ್ನ ಕೃತ್ಯಗಳನ್ನು ಬಲ್ಲೆ. ನಿನ್ನ ಎದುರಿನಲ್ಲಿ ಬಾಗಿಲೊಂದನ್ನು ತೆರೆದಿಟ್ಟಿದ್ದೇನೆ. ಅದನ್ನು ಮುಚ್ಚಲು ಯಾರಿಂದಲೂ ಸಾಧ್ಯವಾಗದು. ನಿನ್ನ ಶಕ್ತಿ ಅಲ್ಪವೆಂದು ನನಗೆ ಗೊತ್ತು. ಆದರೂ ನೀನು ನನ್ನನ್ನು ನಿರಾಕರಿಸದೆ ನನ್ನ ಉಪದೇಶವನ್ನು ಅನುಸರಿಸಿ ನಡೆದಿರುವೆ.


ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು