ಪ್ರಕಟನೆ 14:13 - ಕನ್ನಡ ಸತ್ಯವೇದವು C.L. Bible (BSI)13 ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಂತರ ನಾನು ಪರಲೋಕದಿಂದ ಒಂದು ಧ್ವನಿಯನ್ನು ಕೇಳಿದೆನು. ಆ ಧ್ವನಿಯು ಹೀಗೆ ಹೇಳಿತು: “ಇದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿದ್ದು ಸಾಯುವಂತಹ ಜನರು ಧನ್ಯರು.” “ಹೌದು, ಇದು ನಿಜ. ಆ ಜನರು ತಮ್ಮ ಪ್ರಯಾಸದ ಕೆಲಸವನ್ನು ಮುಗಿಸಿದವರಾಗಿ ವಿಶ್ರಾಂತಿ ಪಡೆಯುತ್ತಾರೆ. ಅವರು ಮಾಡಿದುದೆಲ್ಲವೂ ಅವರೊಂದಿಗೇ ಇರುತ್ತದೆ” ಎಂದು ಪವಿತ್ರಾತ್ಮನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಮಾನಾ ಸರ್ಗಾ ವೈನಾ ಎಕ್ ಅವಾಜ್,“ ಹೆ ಲಿವ್ ಹಿತ್ನಾ ಫಿಡೆ ಧನಿಯಾಚ್ಯಾ ಕಾಮಾತ್ ರಾವ್ನ್ ಮರಲ್ಲೆ ಕವ್ಡೆ ಸುಖಿ!” ಮನ್ತಲೆ ಮಿಯಾ ಆಯಿಕ್ಲೊ, ತನ್ನಾ ಪವಿತ್ರ್ ಆತ್ಮ್ಯಾನ್,“ಹೊಯ್ ಖರೆಚ್ ತೆ! ತೆನಿ ತೆಂಚ್ಯಾ ಮೊಟ್ಯಾ ರಾಬ್ನುಕಿತ್ನಾ ಆರಾಮ್ ಘೆವ್ನ್ ಖುಶಿ ಕರ್ತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತೆಂಚಿ ಬರಿ ಕಾಮಾ ತೆಂಚ್ಯಾ ಬರ್ಯಾ ಕಾಮಾಚೆ ಪ್ರತಿಫಳ್ ತೆಚ್ಯಾ ವಾಂಗ್ಡಾಚ್ ಜಾತಾ”. ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |