Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 15:1 - ಕನ್ನಡ ಸತ್ಯವೇದವು C.L. Bible (BSI)

1 ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾಲಕ್ಷಣವು ನನಗೆ ಕಾಣಿಸಿತು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು; ಇವು ಕಡೇ ಉಪದ್ರವಗಳು; ಇವುಗಳಲ್ಲಿ ದೇವರ ರೌದ್ರವು ಮುಗಿದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಮಳ್ಬಾರ್ ಅನಿಎಕ್ ಮೊಟಿ ಅನಿ ವಿಚಿತ್ರ್ ವಳಕ್ ಮಿಯಾ ಬಗಟ್ಲೊ. ಸಾತ್ ದೆವ್‍ದುತಾ ಸಾತ್ ಆಕ್ರಿಚಿ ತರಾಸಾ ಘೆವ್ನ್ ಇಬೆ ಹೊತ್ತಿ ಕಶ್ಯಾಕ್ ಮಟ್ಲ್ಯಾರ್ ಹಿ ತರಾಸಾ ದೆವಾಚ್ಯಾ ರಾಗಾಚಿ ಆಕ್ರಿಚಿ ಫಿಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 15:1
21 ತಿಳಿವುಗಳ ಹೋಲಿಕೆ  

“ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಿಮ್ಮ ಪಾಪದ ನಿಮಿತ್ತ ಇನ್ನೂ ಏಳುಪಟ್ಟು ಹೆಚ್ಚಾಗಿ ಬಾಧಿಸುವೆನು.


ಏಳು ಅಂತಿಮ ವಿಪತ್ತುಗಳಿಂದ ತುಂಬಿದ್ದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ದೇವದೂತರುಗಳಲ್ಲಿ ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.


ಆ ದೇವದೂತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದನು; ಅವುಗಳನ್ನು ದೇವರ ರೋಷವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಎಸೆದನು.


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


ಆತ ಉದ್ಧರಿಸುವಂಥವನು, ರಕ್ಷಿಸುವಂಥವನು ಭೂಮ್ಯಾಕಾಶಗಳಲ್ಲಿ ಅದ್ಭುತ ಮಹತ್ವಗಳನ್ನು ನಡೆಸುವಂಥವನು! ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದವನು!


ಹೀಗೆ ಎರಡನೆಯ ವಿಪತ್ತು ಮುಗಿಯಿತು. ಇಗೋ ಮೂರನೆಯ ವಿಪತ್ತು ಕೂಡಲೇ ಬಂದೆರಗುವುದು.


ಅವನು ಗಟ್ಟಿಯಾದ ಸ್ವರದಿಂದ ಕೂಗಿದನು. ಅದು ಸಿಂಹದ ಗರ್ಜನೆಯಂತಿತ್ತು. ಅವನು ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಮಾರ್ದನಿಸಿದವು.


ಏಳು ತುತೂರಿಗಳನ್ನು ಹಿಡಿದಿದ್ದ ಏಳುಮಂದಿ ದೇವದೂತರು ತಮ್ಮ ತಮ್ಮ ತುತೂರಿಗಳನ್ನು ಊದಲು ಸಿದ್ಧರಾದರು.


ಅನಂತರ ಆಕಾಶಮಧ್ಯದಲ್ಲಿ ಒಂದು ಗರುಡ ಪಕ್ಷಿ ಹಾರಾಡುತ್ತಿರುವುದನ್ನು ನಾನು ಕಂಡೆ. ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು,” ಎಂದು ಗಟ್ಟಿಯಾಗಿ ಕೂಗುತ್ತಿತ್ತು.


ಬಳಿಕ ನಾನು, ದೇವರ ಸಾನ್ನಿಧ್ಯದಲ್ಲಿ ನಿಂತಿದ್ದ ಏಳು ದೇವದೂತರನ್ನು ಕಂಡೆ. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.


ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು