Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:11 - ಕನ್ನಡ ಸತ್ಯವೇದವು C.L. Bible (BSI)

11 ತಮ್ಮ ನೋವು ಬಾಧೆಗಳ ನಿಮಿತ್ತವೂ ತಮ್ಮ ಉರಿ ಹುಣ್ಣುಗಳ ನಿಮಿತ್ತವೂ ಸ್ವರ್ಗದ ದೇವರನ್ನು ದೂಷಿಸಿದರು. ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರಮಾಡಿಕೊಳ್ಳದೆ ತಮ್ಮ ಕಷ್ಟಗಳ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕ ದೇವರನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜನರು ತಮಗಾದ ಹುಣ್ಣುಗಳಿಂದ ಮತ್ತು ನೋವಿನಿಂದ ಪರಲೋಕದ ದೇವರನ್ನು ದೂಷಿಸಿದರು. ಆದರೆ ಜನರು ತಾವು ಮಾಡುವ ಕೆಟ್ಟಕಾರ್ಯಗಳನ್ನು ತೊರೆದುಬಿಟ್ಟು ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಳ್ಳಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ತಮ್ಮ ನೋವುಗಳಿಗಾಗಿಯೂ ಹುಣ್ಣುಗಳಿಗಾಗಿಯೂ ಪರಲೋಕದ ದೇವರನ್ನು ದೂಷಿಸಿದರು. ಆದರೆ ಅವರು, ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅನಿ ತೆನಿ ತೆಂಚ್ಯಾ ತರಾಸಾಸಾಟ್ನಿ ಅನಿ ತ್ಯಾ ದುಕ್ಕಾಂಚ್ಯಾಸಾಟ್ನಿ ಸರ್ಗಾಚ್ಯಾ ದೆವಾಕ್ ಸರಾಪ್ಲ್ಯಾನಿ, ಖರೆ ತೆನಿ ಅಪ್ಲ್ಯಾ ಅಪ್ಲ್ಯಾ ಬುರ್ಶ್ಯಾ ವಾಟಾ ಸೊಡುಕ್‍ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:11
20 ತಿಳಿವುಗಳ ಹೋಲಿಕೆ  

ಮನುಷ್ಯರು ಆ ಕಡು ಕಾವಿನಲ್ಲಿ ಬೆಂದು ನರಳಿದರು. ಈ ಮಾರಕ ವ್ಯಾಧಿಗಳ ಮೇಲೆ ಅಧಿಕಾರ ಇದ್ದ ದೇವರನ್ನೂ ದೂಷಿಸಿದರು. ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾಗಲಿಲ್ಲ; ಅವರ ಮಹಿಮೆಯನ್ನು ಸ್ತುತಿಸಲಿಲ್ಲ.


ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು.


ಅದರಂತೆಯೇ ಮೊದಲನೆಯ ದೇವದೂತನು ಹೋಗಿ ತನ್ನ ಪಾತ್ರೆಯಲ್ಲಿ ಇದ್ದುದನ್ನು ಭೂಮಿಯ ಮೇಲೆ ಸುರಿದನು. ಪರಿಣಾಮವಾಗಿ, ಮೊದಲನೆಯ ಮೃಗದ ಹಚ್ಚೆ ಚುಚ್ಚಿಸಿಕೊಂಡವರ ಮತ್ತು ಅದರ ವಿಗ್ರಹವನ್ನು ಪೂಜಿಸಿದವರ ಮೈಮೇಲೆಲ್ಲಾ ಭಯಂಕರವಾದ ಉರಿ ಹುಣ್ಣುಗಳು ಎದ್ದವು.


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖಳಾಗುವಂತೆ ನಾನು ಅವಳಿಗೆ ಕಾಲಾವಕಾಶ ಕೊಟ್ಟೆ. ಆದರೆ ಅವಳು ತನ್ನ ಜಾರತ್ವವನ್ನು ತ್ಯಜಿಸಿ ದೇವರಿಗೆ ಅಭಿಮುಖಳಾಗಲು ನಿರಾಕರಿಸುತ್ತಾಳೆ.


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


ಪರಲೋಕದಲ್ಲಿರುವ ದೇವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು.


ಅವರಾದರೋ ಪರಲೋಕ ದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.


ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಆಗ ರಾಜ, “ನಿನ್ನ ಆಶೆಯೇನು?,” ಎಂದು ಕೇಳಿದನು. ನಾನು ಪರಲೋಕ ದೇವರನ್ನು ಪ್ರಾರ್ಥಿಸಿ, ಅವನಿಗೆ, “ರಾಜರ ಚಿತ್ತವಿರುವುದಾದರೆ,


ನಾನು ಈ ಸಮಾಚಾರವನ್ನು ಕೇಳಿದಾಗ ನೆಲಕಚ್ಚಿ ಕುಳಿತು ಅತ್ತೆ; ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.


:ಅರ್ತಷಸ್ತರಾಹನಾದ ನಾನು ನದಿ ಆಚೆಯ ಪ್ರಾಂತ್ಯಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ - ಯಾಜಕನೂ ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.


“ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕ ದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ,


"ಪರ್ಷಿಯದ ರಾಜ ಸೈರಸ್ ಎಂಬ ನನ್ನ ಮಾತಿಗೆ ಕಿವಿಗೊಡಿ; ಪರಲೋಕ ದೇವರಾದ ಸರ್ವೇಶ್ವರ ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿದ್ದಾರೆ; ತಮಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾರೆ; ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅವರು ಸ್ವಂತನಾಡಿಗೆ ಹೋಗಬಹುದು; ಅವರ ದೇವರಾದ ಸರ್ವೇಶ್ವರ ಅವರೊಂದಿಗೆ ಇರುತ್ತಾರೆ!” ಎಂದು ಪ್ರಕಟಿಸಿದನು.


ಅದಕ್ಕೆ ಯೋನನು: “ನಾನು ಹಿಬ್ರಿಯನು. ಸಮುದ್ರವನ್ನೂ ಭೂಮಿಯನ್ನೂ ಸೃಷ್ಟಿಸಿದ ಪರಲೋಕ ದೇವರಾದ ಸರ್ವೇಶ್ವರನ ಭಕ್ತನು ನಾನು,” ಎಂದು ಉತ್ತರಿಸಿದನು.


ಕಷ್ಟಬಂದಾಗ ಅರಸ ಅಹಾಜನು ಸರ್ವೇಶ್ವರನಿಗೆ ಮತ್ತಷ್ಟು ದ್ರೋಹಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು