Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:2 - ಕನ್ನಡ ಸತ್ಯವೇದವು C.L. Bible (BSI)

2 ಅದರಂತೆಯೇ ಮೊದಲನೆಯ ದೇವದೂತನು ಹೋಗಿ ತನ್ನ ಪಾತ್ರೆಯಲ್ಲಿ ಇದ್ದುದನ್ನು ಭೂಮಿಯ ಮೇಲೆ ಸುರಿದನು. ಪರಿಣಾಮವಾಗಿ, ಮೊದಲನೆಯ ಮೃಗದ ಹಚ್ಚೆ ಚುಚ್ಚಿಸಿಕೊಂಡವರ ಮತ್ತು ಅದರ ವಿಗ್ರಹವನ್ನು ಪೂಜಿಸಿದವರ ಮೈಮೇಲೆಲ್ಲಾ ಭಯಂಕರವಾದ ಉರಿ ಹುಣ್ಣುಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಮೊದಲನೆಯವನು ಹೊರಟು ತನ್ನ ಪಾತ್ರೆಯಲ್ಲಿದ್ದದ್ದನ್ನು ಭೂವಿುಗೆ ಹೊಯ್ದನು; ಕೂಡಲೇ ಮೊದಲನೆಯ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ನಮಸ್ಕಾರಮಾಡುವ ಮನುಷ್ಯರ ಮೈಮೇಲೆ ಕೆಟ್ಟ ಉರಿಹುಣ್ಣು ಎದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೊದಲನೆಯ ದೇವದೂತನು ಹೊರಟನು. ಅವನು ತನ್ನ ಪಾತ್ರೆಯಲ್ಲಿದ್ದುದನ್ನು ಭೂಮಿಯ ಮೇಲೆ ಸುರಿದನು. ಆಗ ಮೃಗದ ಗುರುತನ್ನು ಹೊಂದಿದ್ದ ಮತ್ತು ಅದರ ವಿಗ್ರಹವನ್ನು ಆರಾಧಿಸುತ್ತಿದ್ದ ಜನರೆಲ್ಲರಿಗೂ ಅಸಹ್ಯವಾದ ಹಾಗೂ ನೋವಿನಿಂದ ಕೂಡಿದ ಹುಣ್ಣುಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೊದಲನೆಯ ದೂತನು ಹೋಗಿ ತನ್ನ ಬೋಗುಣಿಯೊಳಗಿರುವುದನ್ನು ಭೂಮಿಯ ಮೇಲೆ ಸುರಿಯಲು, ಮೃಗದ ಗುರುತನ್ನು ಹಾಕಿಸಿಕೊಂಡು ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪಯ್ಲೆಚೊ ದೆವಾಚೊ ದುತ್ ಗೆಲೊ, ಅನಿ ತೆನಿ ಅಪ್ನಾಕ್ಲ್ಯಾ ಕಟೊರ್‍ಯಾತ್ಲೆ ಜಗಾವರ್ತಿ ವೊತ್ಲ್ಯಾನ್. ತನ್ನಾ ಭಯಾನಕ್ ಜನಾವರ್ ಅನಿ ತ್ಯೆಚ್ಯಾ ಮುರ್ತಿಯಾಂಚೆ ಆರಾದನ್ ಕರಲ್ಲ್ಯಾಂಚ್ಯಾ ಅಂಗಾ ವೈನಿ ವಾಯ್ಟ್ ಬುರ್ಶಿ ದುಕ್ಕಾ ಉಟ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:2
22 ತಿಳಿವುಗಳ ಹೋಲಿಕೆ  

ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.


ತಮ್ಮ ನೋವು ಬಾಧೆಗಳ ನಿಮಿತ್ತವೂ ತಮ್ಮ ಉರಿ ಹುಣ್ಣುಗಳ ನಿಮಿತ್ತವೂ ಸ್ವರ್ಗದ ದೇವರನ್ನು ದೂಷಿಸಿದರು. ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ.


“ಈಜಿಪ್ಟರನ್ನು ಬಾಧಿಸಿದಂತೆ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಸರ್ವೇಶ್ವರ ನಿಮ್ಮನ್ನು ಬಾಧಿಸುವರು.


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ಒಡೆಯರಾದ ಸ್ವಾಮಿ ಅವರ ನಡುನೆತ್ತಿಯನ್ನು ಹುಣ್ಣಾಗಿಸಿ ಬೋಳುಮಾಡುವರು. ಅವರ ಮಾನವನ್ನು ಬಯಲುಮಾಡುವರು.


ಇಷ್ಟೆಲ್ಲಾ ಆದ ಮೇಲೆ, ಸರ್ವೇಶ್ವರ ಅವನ ಕರುಳುಗಳಲ್ಲಿ ವಾಸಿಯಾಗಲಾರದ ರೋಗವನ್ನು ಉಂಟುಮಾಡಿದರು.


ನಿನಗಾದರೋ ಕರುಳುಬೇನೆಯ ಕಠಿಣರೋಗ ಬರುವುದು. ಅದು ಬಹುದಿನಗಳವರೆಗೂ ವಾಸಿ ಆಗದು; ಕಡೆಯಲ್ಲಿ ನಿನ್ನ ಕರುಳುಗಳು ಹೊರಗೆ ಬೀಳುವುವು,” ಎಂದು ತಿಳಿಸಿದನು.


ಮಂಜೂಷವು ಅಲ್ಲಿ ಹೋದ ಮೇಲೆ ಸರ್ವೇಶ್ವರನ ಹಸ್ತ ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲ ಎದ್ದಿತು. ಸರ್ವೇಶ್ವರ ಆ ಊರಿನ ಚಿಕ್ಕವರಲ್ಲೂ ದೊಡ್ಡವರಲ್ಲೂ ಗಡ್ಡೆಗಳನ್ನು ಬರಮಾಡಿದರು.


ಸರ್ವೇಶ್ವರನ ಹಸ್ತ ಅಷ್ಡೋದಿನವರಿಗೆ ಬಾಧಕವಾಗಿತ್ತು. ಸರ್ವೇಶ್ವರ ಗಡ್ಡೆರೋಗವನ್ನು ಬರಮಾಡಿ ಅವರ ನಗರವನ್ನೂ ಅದರ ಗ್ರಾಮಗಳನ್ನೂ ಹಾಳುಮಾಡಿದರು.


ನಿಮಗೆ ಯಾವ ವ್ಯಾಧಿಯೂ ತಗಲದಂತೆ ಸರ್ವೇಶ್ವರ ನೋಡಿಕೊಳ್ಳುವರು. ನೀವೇ ಅನುಭವದಿಂದ ಅರಿತಿರುವಂತೆ ಈಜಿಪ್ಟ್ ದೇಶದಲ್ಲಿ ಪ್ರಬಲ ಆಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸಲಿಲ್ಲ; ಅವುಗಳನ್ನು ನಿಮ್ಮ ದ್ವೇಷಿಗಳ ಮೇಲೆ ಮಾತ್ರ ಬರಮಾಡುವರು.


ಇದಲ್ಲದೆ ಸುಗಂಧಕ್ಕೆ ಬದಲಾಗಿ ದುರ್ಗಂಧ, ನಡುಪಟ್ಟಿಗೆ ಬದಲಾಗಿ ಹುರಿಹಗ್ಗ, ಜಡೆದಲೆಗೆ ಬದಲಾಗಿ ಬೋಳುದಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಬೆಡಗಿಗೆ ಬದಲಾಗಿ ಬೆತ್ತಲೆ, ಇಂಥ ಗತಿ ಅವರಿಗೆ ಬಂದೊದಗುವುದು.


ಆಕಾಶದಲೆಬ್ಬಿಸಿದನು ಮೂಡಣ ಗಾಳಿಯನು I ಒಲುಮೆಯಿಂದ ಹೊರಡಿಸಿದನು ತೆಂಕಣ ಗಾಳಿಯನು II


ಆಗ ಮೋಡದ ಮೇಲೆ ಕುಳಿತಿದ್ದವನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿದನು. ಭೂಮಿಯ ಕೊಯಿಲು ಮುಗಿಯಿತು.


“ನಿಮ್ಮ ಮೊಣಕಾಲುಗಳಲ್ಲೂ ತೊಡೆಗಳಲ್ಲೂ ಮತ್ತು ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ವಾಸಿಯಾಗದ ಕೆಟ್ಟಕೆಟ್ಟ ಹುಣ್ಣುಗಳನ್ನು ಸರ್ವೇಶ್ವರ ಹುಟ್ಟಿಸಿ ಬಾಧಿಸುವರು;


ಈ ಮೃಗವು, ಮೊದಲನೆಯ ಮೃಗಕ್ಕಿದ್ದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲೇ ಚಲಾಯಿಸಿತು. ಮಾರಕವಾದ ಗಾಯದಿಂದ ಗುಣಹೊಂದಿದ ಆ ಮೊದಲನೆಯ ಮೃಗವನ್ನು ಭೂಲೋಕವು ಮತ್ತು ಅದರ ನಿವಾಸಿಗಳು ಆರಾಧಿಸುವಂತೆ ಮಾಡಿತು.


ಇದಾದ ಮೇಲೆ ಮೂರನೆಯ ದೇವದೂತನು ಬಂದನು. ಈತನು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಯಾರಾದರೂ ಮೊದಲನೆಯ ಮೃಗವನ್ನೂ ಅದರ ವಿಗ್ರಹವನ್ನೂ ಪೂಜಿಸಿದರೆ ಅಥವಾ ತನ್ನ ಹಣೆಯ ಮೇಲಾಗಲೀ ಕೈಯ ಮೇಲಾಗಲೀ ಗುರುತಿನ ಹಚ್ಚೆಯನ್ನು ಚುಚ್ಚಿಸಿಕೊಂಡರೆ,


ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು