Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:16 - ಕನ್ನಡ ಸತ್ಯವೇದವು C.L. Bible (BSI)

16 ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಹತ್ತು ಕೊಂಬುಗಳನ್ನೂ ಮೃಗವನ್ನೂ ಕಂಡಿಯಲ್ಲ? ಇವುಗಳಿಂದ ಸೂಚಿತರಾದವರು ಆ ಜಾರಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀನು ಕಂಡ ಆ ಮೃಗ ಮತ್ತು ಹತ್ತು ಕೊಂಬುಗಳು ಆ ಜಾರಸ್ತ್ರೀಯನ್ನು ದ್ವೇಷಿಸಿ, ಆಕೆಯನ್ನು ಗತಿಯಿಲ್ಲದವಳನ್ನಾಗಿಯೂ ಆಕೆಯನ್ನು ಬಟ್ಟೆ ಇಲ್ಲದವಳನ್ನಾಗಿಯೂ ಆಕೆಯ ಮಾಂಸವನ್ನು ತಿಂದು, ಆಕೆಯನ್ನು ಬೆಂಕಿಯಲ್ಲಿ ಸುಟ್ಟುಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತಿಯಾ ಬಗಟಲ್ಲಿ ಧಾ ಶಿಂಗಾ ಅನಿ ತೆ ಭಯಾನಕ್ ಜನಾವರ್ ತ್ಯಾ ವ್ಯೆಭಿಚಾರ್ ಕರ್ತಲಿಚೊ ದ್ವೆಸ್ ಕರ್‍ತ್ಯಾತ್; ತೆನಿ ತಿಚೆಕ್ಡೆ ಹೊತ್ತೆ ಸಗ್ಳೆ ಕಾಡುನ್ ಘೆವ್ನ್ ತಿಕಾ ನಾಗ್ಡೆಚ್ ಸೊಡ್ತ್ಯಾತ್, ತೆನಿ ತಿಚೆ ಮಾಸ್ ಖಾತ್ಯಾತ್ ಅನಿ ತಿಕಾ ಆಗಿನ್‍ ನಾಸ್ ಕರುನ್ ಟಾಕ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:16
17 ತಿಳಿವುಗಳ ಹೋಲಿಕೆ  

ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”


ಯಾಜಕನ ಮಗಳು ಸೂಳೆತನದಿಂದ ನಿಂದೆಗೆ ಒಳಗಾದರೆ ತನ್ನ ತಂದೆಯನ್ನೂ ನಿಂದೆಗೆ ಒಳಪಡಿಸಿದವಳಾದಳು; ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.


ರಾಜರುಗಳ ಮಾಂಸವನ್ನು, ಸೇನಾಧಿಪತಿಗಳ ಮಾಂಸವನ್ನು ಮತ್ತು ಪರಾಕ್ರಮಶಾಲಿಗಳ ಮಾಂಸವನ್ನು ತಿನ್ನ ಬನ್ನಿ; ಕುದುರೆಗಳ ಮಾಂಸವನ್ನೂ ರಾವುತರ ಮಾಂಸವನ್ನೂ ಉಣ ಬನ್ನಿ; ಯಜಮಾನರ, ಗುಲಾಮರ, ಚಿಕ್ಕವರ, ದೊಡ್ಡವರ ಈ ಎಲ್ಲಾ ನರಮಾನವರ ಮಾಂಸವನ್ನು ರುಚಿಸ ಬನ್ನಿ,” ಎಂದನು.


ಈ ಏಳು ರಾಜರಲ್ಲಿ ಈಗಾಗಲೇ ಐದುಮಂದಿ ಪತನಹೊಂದಿದ್ದಾರೆ. ಒಬ್ಬ ರಾಜನು ಈಗ ಆಳುತ್ತಿದ್ದಾನೆ. ಮತ್ತೊಬ್ಬನು ಇನ್ನೂ ತಲೆದೋರಿಲ್ಲ. ಅವನು ಬಂದಾಗ ಕೊಂಚಕಾಲ ಮಾತ್ರ ರಾಜ್ಯವಾಳುತ್ತಾನೆ.


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.


ಬಳಿಕ ಎರಡನೆಯ ಇನ್ನೊಂದು ಮೃಗವನ್ನು ಕಂಡೆ. ಅದು ಕರಡಿಯ ಹಾಗಿತ್ತು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿನ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. “ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು,” ಎಂದು ಅದಕ್ಕೆ ಹೇಳಲಾಯಿತು.


ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II


‘ಆತ ಬಡಿಸಿದ ಭೋಜನದಿಂದ ತೃಪ್ತರಾಗದವರು ಎಲ್ಲಾದರೂ ಉಂಟೆ?’ ಎಂದು ನನ್ನ ಗುಡಾರದ ಆಳುಗಳೇ ಹೇಳಿಕೊಳ್ಳುತ್ತಿದ್ದರಲ್ಲವೆ?


ಆಕಾಶದಲ್ಲಿ ಮತ್ತೊಂದು ಚಿಹ್ನೆ ಕಾಣಿಸಿಕೊಂಡಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳಿದ್ದವು, ಹತ್ತು ಕೊಂಬುಗಳಿದ್ದವು; ಅದರ ಏಳು ತಲೆಗಳ ಮೇಲೆ ಏಳು ಮುಕುಟಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು