Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:3 - ಕನ್ನಡ ಸತ್ಯವೇದವು C.L. Bible (BSI)

3 ನಾನು ದೇವರಾತ್ಮ ವಶನಾದೆ. ಆಗ ದೇವದೂತನು ನನ್ನನ್ನು ಅಡವಿಗೆ ಕೊಂಡೊಯ್ದನು. ಅಲ್ಲಿ, ಒಂದು ಕಡುಗೆಂಪಾದ ಮೃಗದ ಮೇಲೆ ಕುಳಿತಿದ್ದ ಸ್ತ್ರೀಯೊಬ್ಬಳನ್ನು ಕಂಡೆ. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಮಾತುಗಳೇ ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು. ಅಲ್ಲಿ ನಾನು ರಕ್ತವರ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು; ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬಳಿಕ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರಳುಗಾಡಿಗೆ ಹೋದನು. ಅಲ್ಲಿ ಒಬ್ಬ ಸ್ತ್ರೀಯು ಕೆಂಪು ಮೃಗದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ಬರೆದಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅನಂತರ ಅವನು ನನ್ನನ್ನು ಆತ್ಮನಲ್ಲಿ ಅರಣ್ಯಕ್ಕೆ ಒಯ್ದನು. ಅಲ್ಲಿ ಒಬ್ಬ ಸ್ತ್ರೀಯು, ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದು, ದೇವದೂಷಣೆಯ ಹೆಸರುಗಳಿಂದ ತುಂಬಿರುವ ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಪವಿತ್ರ್ ಆತ್ಮ್ಯಾನುಚ್ ಮಾಕಾ ಚಾಲ್ವುನ್ ನ್ಹೆಲ್ಯಾನ್ ಅನಿ ದೆವಾಚ್ಯಾ ದುತಾನ್ ಮಾಕಾ ಡಂಗ್ಳಿತ್ ಉಕ್ಲುನ್ ನ್ಹೆಲ್ಯಾನ್, ಥೈ ಎಕ್ ತಾಂಬ್ಡ್ಯಾ ಭಯಾನಕ್ ಜನಾವಾರಾಚ್ಯಾ ವರ್ತಿ ಬಸಲ್ಲಿ ಬಾಯ್ಕೊಮನುಸ್ ಹೊತ್ತಿ, ತ್ಯಾ ಭಯಾನಕ್ ಜನಾವಾರಾಚ್ಯಾ ವರ್ತಿ ದೆವಾಕ್ ಅವ್ಮಾನ್ ಕರ್ತಲಿ ನಾವಾ ಲಿವಲ್ಲಿ ಹೊತ್ತಿ; ತ್ಯಾ ಭಯಾನಕ್ ಜನಾವಾರಾಚಿ ಸಾತ್ ಟಕ್ಲಿ ಅನಿ ಧಾ ಶಿಂಗಾ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:3
26 ತಿಳಿವುಗಳ ಹೋಲಿಕೆ  

ಆಕಾಶದಲ್ಲಿ ಮತ್ತೊಂದು ಚಿಹ್ನೆ ಕಾಣಿಸಿಕೊಂಡಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳಿದ್ದವು, ಹತ್ತು ಕೊಂಬುಗಳಿದ್ದವು; ಅದರ ಏಳು ತಲೆಗಳ ಮೇಲೆ ಏಳು ಮುಕುಟಗಳಿದ್ದವು.


ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರವುಳ್ಳ ಮಹಾನಗರದ ಸೂಚನೆಯಾಗಿದ್ದಾಳೆ.”


ಆ ಮಹಿಳೆ ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಆಕೆಗೆ ಶುಶ್ರೂಷೆಯಾಗಬೇಕೆಂದು ದೇವರೇ ಆ ಸ್ಥಳವನ್ನು ಸಜ್ಜುಗೊಳಿಸಿದ್ದರು.


ಆ ಸ್ತ್ರೀ ಕೆನ್ನೀಲಿಯ ಹಾಗೂ ಕಡುಗೆಂಪಾದ ಬಟ್ಟೆಯನ್ನು ಧರಿಸಿದ್ದಳು; ಚಿನ್ನ, ಮುತ್ತು, ರತ್ನಾಭರಣಗಳಿಂದ ಅಲಂಕೃತಳಾಗಿದ್ದಳು. ಕೈಯಲ್ಲಿ ಚಿನ್ನದ ಪಾತ್ರೆಯನ್ನೂ ಹಿಡಿದಿದ್ದಳು. ಅವಳ ಹಾದರದ ಅಸಹ್ಯಗಳಿಂದಲೂ ಕಳಂಕಗಳಿಂದಲೂ ಅದು ತುಂಬಿತ್ತು.


ಆಗ ಆ ಮಹಿಳೆ ಅರಣ್ಯದಲ್ಲಿರುವ ತನ್ನ ಸ್ಥಳಕ್ಕೆ ಹಾರಿಹೋಗುವಂತೆ ದೊಡ್ಡ ಗರುಡಪಕ್ಷಿಗಿರುವಂಥ ಎರಡು ರೆಕ್ಕೆಗಳನ್ನು ಆಕೆಗೆ ಕೊಡಲಾಯಿತು. ಅಲ್ಲಿ ಘಟಸರ್ಪದ ಕಣ್ಣಿಗೆ ಬೀಳದೆ ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುವಂತಾಯಿತು.


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


ಅದರ ತಲೆಯ ಮೇಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ,


ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಾಗಲೆ ಅವುಗಳ ನಡುವೆ ಇಗೋ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದಕ್ಕೆ ಎಡೆಮಾಡಿಕೊಡಲು ಮುಂಚಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಆಶ್ಚರ್ಯವೆಂದರೆ, ಆ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳಿದ್ದವು. ಬಡಾಯಿ ಕೊಚ್ಚಿಕೊಳ್ಳುವ ಬಾಯೂ ಇತ್ತು.


ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;


ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು.


ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.


ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಈಕೆ ಯಾರು? ನಲ್ಲೆ : ಎಬ್ಬಿಸಿದೆ ನಿನ್ನನ್ನು ಸೇಬುಮರದ ಅಡಿಯಲಿ ನಿನ್ನ ತಾಯಿ ಪ್ರಸವವೇದನೆಯಿಂದ ಹಡೆದಾ ಸ್ಥಳದಲಿ ನಿನ್ನನ್ನು ಆಕೆ ಗರ್ಭಧರಿಸಿದಾ ಜಾಗದಲಿ.


ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ಅನಂತರ ಅವರು ಅವನಿಗೆ, “ನಿಮ್ಮ ಸೇವಕರಾದ ನಮ್ಮಲ್ಲಿ ಐವತ್ತುಮಂದಿ ಬಲಿಷ್ಠ ಜನರಿದ್ದಾರೆ; ನಿಮ್ಮ ಯಜಮಾನರನ್ನು ಹುಡುಕಲು ಹೋಗುವುದಕ್ಕೆ ಅವರಿಗೆ ಅಪ್ಪಣೆಯಾಗಲಿ. ಸರ್ವೇಶ್ವರನ ಆತ್ಮ ಅವರನ್ನು ಎತ್ತಿಕೊಂಡುಹೋಗಿ ಒಂದು ಬೆಟ್ಟದ ಮೇಲಾಗಲಿ, ತಗ್ಗಿನಲ್ಲಾಗಲಿ ಇಟ್ಟಿರಬಹುದು,” ಎಂದು ಹೇಳಿದರು. ಅವನು, “ನೀವು ಕಳುಹಿಸಬೇಡಿ,” ಎಂದನು.


ನಾನು ತಮ್ಮನ್ನು ಬಿಟ್ಟು ಹೊರಟ ಕೂಡಲೆ, ಸರ್ವೇಶ್ವರನ ಆತ್ಮ ತಮ್ಮನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ತಾವು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಚಿಕ್ಕಂದಿನಿಂದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ಕೂಡಲೇ, ನಾನು ದೇವರಾತ್ಮವಶನಾದೆ. ಆಗ ಸ್ವರ್ಗದಲ್ಲಿ ಒಂದು ಸಿಂಹಾಸನ ಇರುವುದನ್ನೂ ಅದರಲ್ಲಿ ಒಬ್ಬರು ಆಸೀನರಾಗಿರುವುದನ್ನೂ ಕಂಡೆ.


ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು.


ಸೈನಿಕರು ಅವರ ಉಡುಪನ್ನು ಸುಲಿದು, ಕಡುಗೆಂಪು ಮೇಲಂಗಿಯೊಂದನ್ನು ಅವರಿಗೆ ಹೊದಿಸಿದರು.


ಇವರು ಚಿನ್ನ, ಬೆಳ್ಳಿ, ಮುತ್ತು ರತ್ನಾಭರಣಗಳನ್ನೂ ನಯವಾದ ನಾರುಮಡಿ, ಕೆನ್ನೀಲಿಯ ವಸ್ತ್ರ, ರೇಷ್ಮೆ ಬಟ್ಟೆ ಮತ್ತು ಕಡುಗೆಂಪು ಉಡುಪುಗಳನ್ನೂ ಎಲ್ಲಾ ಬಗೆಯ ಗಂಧಕ ಚಕ್ಕೆಗಳನ್ನೂ ಎಲ್ಲಾ ವಿಧದ ದಂತದ ಸಾಮಾನುಗಳನ್ನೂ ಬಹು ಬೆಲೆಬಾಳುವ ಮರದ, ಕಂಚಿನ, ಕಬ್ಬಿಣದ, ಚಂದ್ರಕಾಂತ ಶಿಲೆಯ ಸಾಮಾನುಗಳನ್ನೂ ಅವಳಿಗೆ ಮಾರುತ್ತಿದ್ದರು.


“ಅಯ್ಯೋ ! ಅಯ್ಯೋ ! ಮಹಾನಗರಿ ನಿನಗೆಂಥಾ ದುರ್ಗತಿ ! ಕೆನ್ನೀಲಿಯ ಕಡುಗೆಂಪಿನ ನಯವಸ್ತ್ರಗಳನುಟ್ಟವಳೇ, ಹೊನ್ನ ತೊಟ್ಟವಳೇ, ಮತ್ತು ರತ್ನಾಭರಣಗಳನು ಧರಿಸಿದವಳೇ, ತಾಸೊಂದರಲೇ ನಿನ್ನ ಐಸಿರಿಯೆಲ್ಲಾ ವ್ಯರ್ಥವಾಯಿತೇ!” ಎಂದು ದುಃಖಿಸಿ ಅತ್ತು ಗೋಳಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು