Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:14 - ಕನ್ನಡ ಸತ್ಯವೇದವು C.L. Bible (BSI)

14 “ಬಾಬಿಲೋನೇ, ನೀ ಹಂಬಲಿಸಿದ ಫಲ ನಿನ್ನಿಂದ ದೂರ ಸರಿಯಿತು ನಿನ್ನೆಲ್ಲ ವಿಲಾಸ ವೈಭವಗಳು ನಂದಿಹೋದವು ಮರಳಿ ಕಾಣವವು ಇನ್ನೆಂದಿಗೂ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ‘ನೀನು ಬಯಸಿದ ನಿನ್ನ ಫಲಗಳು ನಿನ್ನನ್ನು ಬಿಟ್ಟು ಹೋದವು. ನಿನ್ನ ಎಲ್ಲಾ ವೈಭವವು ಹಾಗೂ ಶೋಭಾಯಮಾನವಾದ ಸೊಗಸುಗಳೆಲ್ಲ ನಿನ್ನಿಂದ ನಾಶವಾದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವುದೇ ಇಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಾಬೆಲೇ, ನಿನ್ನ ಜೀವವು ಅಪೇಕ್ಷಿಸಿದ ಹಣ್ಣುಹಂಪಲುಗಳು ನಿನ್ನನ್ನು ಬಿಟ್ಟುಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವದೆಲ್ಲವೂ ನಾಶವಾಗಿ ನಿನ್ನನ್ನು ಬಿಟ್ಟುಬಿಟ್ಟವು. ಅವು ಇನ್ನು ಮೇಲೆ ಜನರಿಗೆ ಸಿಕ್ಕುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ‘ಬಾಬಿಲೋನೇ, ನೀನು ಅಪೇಕ್ಷಿಸಿದ ಉತ್ತಮ ವಸ್ತುಗಳೆಲ್ಲವೂ ನಿನ್ನಿಂದ ಹೋಗಿಬಿಟ್ಟವು. ನಿನ್ನಲ್ಲಿದ್ದ ಶ್ರೀಮಂತಿಕೆಯ ಮತ್ತು ಅಲಂಕಾರಿಕ ವಸ್ತುಗಳೆಲ್ಲ ಅದೃಶ್ಯವಾಗಿಬಿಟ್ಟವು. ಅವುಗಳನ್ನು ಮತ್ತೆ ನೀನೆಂದಿಗೂ ಪಡೆಯುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನೀನು ಬಯಸಿದ ನಿನ್ನ ಪ್ರಾಣ ಫಲವು ನಿನ್ನಿಂದ ತೊಲಗಿಹೋಗಿದೆ. ನಿನ್ನ ಎಲ್ಲಾ ವೈಭವವು ಹಾಗೂ ನಿನ್ನ ಶೋಭೆಯ ಸೊಗಸುಗಳೆಲ್ಲಾ ನಿನ್ನಿಂದ ನಾಶವಾದವು. ಅವರು ಅವುಗಳನ್ನು ಇನ್ನೆಂದೂ ಕಾಣಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಯಾಪಾರಾಚಿ ಲೊಕಾ ತಿಕಾ,“ತಿಯಾ ಆಶ್ಯಾ ಕರಲ್ಲಿ ತುಜಿ ಸಗ್ಳಿ ಸಾಮಾನಾ ನಾ ಹೊವ್ನ್ ಗೆಲಿ, ಅನಿ ಸಗ್ಳೆ ತುಜೆ ಬದಿಕ್ ಅನಿ ಉಜ್ವೊಡ್ ಸಗ್ಳೆ ನಾಸ್ ಹೊವ್ನ್ ಗೆಲೆ, ಅನಿ ಫಿಡೆ ತಿ ತುಕಾ ಕನ್ನಾಬಿ ಗಾವಿನ್ಯಾತ್!” ಮನ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:14
12 ತಿಳಿವುಗಳ ಹೋಲಿಕೆ  

ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ. ಅವರಂತೆ ನಾವು ಕೆಟ್ಟದಾದವುಗಳನ್ನು ಆಶಿಸಬಾರದು.


ಪರರ ಆಸ್ತಿಪಾಸ್ತಿಗಳನ್ನು ಬಯಸುತ್ತೀರಿ; ಅವುಗಳು ಸಿಗದೆ ಇದ್ದಾಗ, ನೀವು ಕೊಲೆಮಾಡಲೂ ಹಿಂಜರಿಯುವುದಿಲ್ಲ. ದುರಾಶೆಗಳಿಗೆ ಬಲಿಯಾಗುತ್ತೀರಿ; ಅವುಗಳು ಈಡೇರದಾಗ ಜಗಳವಾಡುತ್ತೀರಿ, ಕಾದಾಡುತ್ತೀರಿ. ನಿಮಗೆ ಬೇಕಾದುದು ನಿಮ್ಮಲ್ಲಿಲ್ಲ. ಏಕೆಂದರೆ, ನೀವು ಅದಕ್ಕಾಗಿ ಬೇಡಿಕೊಳ್ಳಲಿಲ್ಲ.


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಆಶಾಪಾಶಗಳಿಗೆ ಈಡಾದರು ಅಡವಿಯೊಳು I ದೇವನನೇ ಪರಿಶೋಧಿಸಿದರು ಅರಣ್ಯದೊಳು II


ಇಸ್ರಯೇಲರೊಡನೆ ಪ್ರಯಾಣ ಮಾಡುತ್ತಿದ್ದ ಅನ್ಯಜನರು ಮಾಂಸಕ್ಕಾಗಿ ಹಂಬಲಿಸಿದರು. ಇಸ್ರಯೇಲರು ಕೂಡ, ಕಣ್ಣೀರಿಡುತ್ತಾ: “ಅಯ್ಯೋ, ನಮಗೆ ಮಾಂಸ ಕೊಡುವವರಾರು?


ಕೋರಿದರು ತಮಗಿಷ್ಟವಾದ ಆಹಾರವನೇ I ಪರೀಕ್ಷಿಸಿದರು ಮನದಲಿ ಆ ದೇವರನೇ II


ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು. ಏಕೆಂದರೆ ಅತ್ಯಾಸೆಪಟ್ಟವರು ಅಲ್ಲಿ ಸಮಾಧಿಯಾದರು.


ಇಲ್ಲವಾದರೆ, ಏಕೆ ಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿದ್ದ ವ್ಯಕ್ತಿಯನ್ನು ನೋಡಲು ಹೋದಿರೇನು? ಅಂತಹ ಉಡುಗೆ ತೊಡುಗೆ ಧರಿಸುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.


ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


ವ್ಯಾಪಾರ ಮಾಡಿ ಅವಳಿಂದ ಧನಿಕರಾದ ವರ್ತಕರು ಅವಳಿಗುಂಟಾದ ಚಿತ್ರಹಿಂಸೆಯನ್ನು ದೂರದಲ್ಲಿ ನಿಂತು ನೋಡಿ, ಭಯಭ್ರಾಂತರಾಗಿ ಅವಳನ್ನುದ್ದೇಶಿಸಿ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು