Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:24 - ಕನ್ನಡ ಸತ್ಯವೇದವು C.L. Bible (BSI)

24 ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಪ್ರವಾದಿಗಳ ರಕ್ತವೂ ದೇವಜನರ ರಕ್ತವೂ ಭೂವಿುಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವಳು ಪ್ರವಾದಿಗಳ, ದೇವರ ಪರಿಶುದ್ಧಜನರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವನ್ನು ಸುರಿಸಿ ಅಪರಾಧಿಯಾದಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಕೆಯಲ್ಲಿ ಪ್ರವಾದಿಗಳ ಮತ್ತು ಪರಿಶುದ್ಧರ ರಕ್ತವೂ ಮತ್ತು ಭೂಮಿಯ ಮೇಲೆ ಕೊಲೆಯಾದವರ ರಕ್ತವೂ ಸಿಕ್ಕಿತು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತ್ಯಾ ಶಾರಾತ್ ಗಾವಲ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ಅನಿ ಪ್ರವಾದ್ಯಾಂಚ್ಯಾ ರಗ್ತಾಸಾಟ್ನಿ ಅನಿ ಜಗಾತ್ ಜಿವಾನಿ ಮಾರಲ್ಲ್ಯಾ ಸಗ್ಳ್ಯಾಂಚ್ಯಾ ರಗ್ತಾಸಾಟಿ ಬಾಬಿಲೊನಾಕ್ ಶಿಕ್ಷಾ ದಿವ್ನ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:24
16 ತಿಳಿವುಗಳ ಹೋಲಿಕೆ  

ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ಹತರಾದ ಇಸ್ರಯೇಲರೇ, ಬಾಬಿಲೋನಿಯದ ಹಿತಕ್ಕಾಗಿ ಬಹುಜನ ಹತರಾದರು. ಅಂತೆಯೇ ಬಾಬಿಲೋನ್ ಹತವಾಗುವುದು. ಸರ್ವೇಶ್ವರನಾದ ನನ್ನ ನುಡಿ ಇದು.”


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ಇವರ ಸಾಕ್ಷ್ಯನೀಡಿಕೆ ಮುಗಿದ ನಂತರ ಪಾತಾಳಕೂಪದಿಂದ ಮೃಗವೊಂದು ಮೇಲೇರಿಬರುತ್ತದೆ; ಅದು ಇವರೊಡನೆ ಯುದ್ಧಮಾಡಿ, ಜಯಗಳಿಸಿ ಇವರನ್ನು ಕೊಂದುಹಾಕುತ್ತದೆ.


ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.


ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲೆ ಕಣ್ಣುಳ್ಳದ್ದಾಗಿ ಬಡಾಯಿ ಕೊಚ್ಚಿಕೊಳ್ಳುವ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇತ್ತೋ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನೂ ತಿಳಿದುಕೊಳ್ಳಬೇಕೆಂದು ವಿಚಾರಿಸಿದೆ.


ಆ ಯೆಹೂದ್ಯರೇ ಪ್ರಭು ಯೇಸುವನ್ನೂ ಪ್ರವಾದಿಗಳನ್ನೂ ಸಂಹರಿಸಿದವರು; ನಮ್ಮನ್ನೂ ಸಹ ಹೊರದಬ್ಬಿದರು. ಅವರು ದೇವರಿಗೆ ದ್ರೋಹವೆಸಗಿದರು; ಜನರೆಲ್ಲರಿಗೆ ವಿರೋಧಿಗಳಾದರು.


ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯೆ ದುರಾಚಾರಗಳನ್ನು ನಡೆಸಿದ್ದಾರೆ.


ಇದಲ್ಲದೆ, ನಿರ್ದೋಷಿಗಳಾದ ದೀನದಲಿತರ ಪ್ರಾಣರಕ್ತ ನಿಮ್ಮ ಬಟ್ಟೆಗೆ ಅಂಟಿಕೊಂಡಿದೆ! ‘ಇವರು ಕನ್ನ ಕೊರೆಯುವುದನ್ನು ಕಂಡೆವು’ ಎಂದು ನೀವು ನೆವ ಹೇಳುವಂತಿಲ್ಲ. ನಿಮ್ಮ ಈ ಎಲ್ಲ ದುರಭ್ಯಾಸಗಳ ನಿಮಿತ್ತ ದಂಡಿಸುವೆನು.


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು