Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:8 - ಕನ್ನಡ ಸತ್ಯವೇದವು C.L. Bible (BSI)

8 ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳುವದರಿಂದ ಅವಳಿಗೆ ಕೊಲೆ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿಸುವವು; ಅವಳು ಬೆಂಕಿಯಿಂದ ಸುಟ್ಟುಹೋಗುವಳು; ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ಅವಳಿಗೆ ಮರಣ, ಗೋಳಾಟ, ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ. ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ಒಂದೇ ದಿನದಲ್ಲಿ ಆಕೆಯ ಉಪದ್ರವಗಳಾಗಿರುವ ಮರಣ, ಗೋಳಾಟ ಮತ್ತು ಕ್ಷಾಮವು ಬರುವುವು. ಆಕೆಯನ್ನು ತೀರ್ಪುಮಾಡುವ ಕರ್ತದೇವರು ಶಕ್ತರಾಗಿರುವುದರಿಂದ ಆಕೆಯು ಬೆಂಕಿಯಿಂದ ನಾಶವಾಗುವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹೆಕಾ ಲಾಗುನ್ ತರಾಸ್, ರೊಗ್, ಕಸ್ಟ್ ಅನಿ ಬರ್‍ಗಾಲ್ ಸಗ್ಳೆ ಎಕುಚ್ ದಿಸಿ ತಿಚೆ ವರ್ತಿ ಯೆತಾ. ಅನಿ ತಿ ಆಗಿತ್ ಜಳುನ್ ಜಾತಾ, ಕಶ್ಯಾಕ್ ಮಟ್ಲ್ಯಾರ್ ತಿಚಿ ನಿರ್ನಯ್ ಕರ್ತಲೊ ಸರ್ವೆಸ್ವರ್ ದೆವ್ ಲೈ ಮೊಟೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:8
18 ತಿಳಿವುಗಳ ಹೋಲಿಕೆ  

ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”


ಸೇನಾಧೀಶ್ವರ ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: “ಎಲೈ ಅಹಂಕಾರಿಯೇ, ನಾನು ನಿನಗೆ ವಿರುದ್ಧನು. ನಿನಗೆ ಹೊತ್ತು ಬಂದಿದೆ. ನಿನ್ನನ್ನು ದಂಡಿಸತಕ್ಕ ಕಾಲ ಸಮೀಪಿಸಿದೆ.


ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.


ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ಬಾಬಿಲೋನಿನ ದೊಡ್ಡ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತ ದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವುವು ರಾಷ್ಟ್ರಗಳು ದುಡಿದದ್ದು ಬೆಂಕಿಗೆ ತುತ್ತಾಗುವುದು.”


ನೀವು ಬಾಬಿಲೋನಿನಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿ, ಅದಕ್ಕೆ ಉಂಟಾಗುವ ದಂಡನೆಗೆ ನೀವು ಒಳಗಾಗಬೇಡಿ. ಸರ್ವೇಶ್ವರನಾದ ನಾನು ಮುಯ್ಯಿತೀರಿಸುವ ಕಾಲಬಂದಿದೆ. ಬಾಬಿಲೋನಿಗೆ ತಕ್ಕ ಪ್ರತೀಕಾರ ಮಾಡುವೆನು.


ಅವರು ಮತ್ತೊಮ್ಮೆ, “ಅಲ್ಲೆಲೂಯ ! ಅವಳ ದಹನದಿಂದ ಹೊಗೆ ಸತತ ಮೇಲೇರುತಿಹುದು ಒಂದೇಸಮನೆ,” ಎಂದು ಕೂಗಿದರು.


ಆಗ ಹಡಗುಗಳ ಮಾಲೀಕರೆಲ್ಲರೂ ಸಮುದ್ರದ ಪ್ರಯಾಣಿಕರೂ ನಾವಿಕರೂ ಸಮುದ್ರದ ದುಡಿಮೆಗಾರರೂ ದೂರದಲ್ಲಿ ನಿಂತಿದ್ದರು.


ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರವುಳ್ಳ ಮಹಾನಗರದ ಸೂಚನೆಯಾಗಿದ್ದಾಳೆ.”


“ಪ್ರಭುವೇ, ದೇವನೇ, ಸರ್ವಶಕ್ತನೇ, ಇರುವಾತನೂ ಇದ್ದಾತನೂ ನೀನೇ ಘನಾಧಿಕಾರವನ್ನು ತೋರಿ ನೀ ಆಳುತ್ತಿರುವೆ ಧನ್ಯವಾದಗಳನ್ನು ನಿನಗೆ ಸಲ್ಲಿಸುವೆ.


ದೇವನೊಮ್ಮೆ ನುಡಿದೀಮಾತು ನನಗಿಮ್ಮಡಿ ಕೇಳಿಸಿತು I ಸರ್ವಾಧಿಕಾರವು ದೇವನಿಗೇ ಸೇರಿದ ಸೊತ್ತು II


ಶಕ್ತಿಪ್ರಯೋಗದ ಮಾತೆತ್ತಿದರೆ, ‘ಇಗೋ, ನಾನೇ ಶಕ್ತಿಸ್ವರೂಪ’ ಎನ್ನುತ್ತಾನೆ. ನ್ಯಾಯವಿಚಾರಣೆ ಆಗಲಿಯೆಂದರೆ, ‘ನನ್ನನ್ನು ಕರೆಯಿಸುವವನಾರು?’ ಎನ್ನುತ್ತಾನೆ.


ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


ಆದಕಾರಣ, ಇಸ್ರಯೇಲಿನ ತಲೆಬಾಲಗಳನ್ನೂ ತುದಿಬುಡವನ್ನೂ ಹುಲ್ಲಿನಂತೆ ಸ್ವಾಮಿ ಒಂದೇ ದಿನದಲ್ಲಿ ಕಡಿದುಬಿಡುವರು; ಅಂದರೆ ಸನ್ಮಾನ್ಯ ಹಿರಿಯರನ್ನು, ಸುಳ್ಳುಬೋಧನೆ ಮಾಡುವ ಪ್ರವಾದಿಗಳನ್ನು ಸಂಹರಿಸಿಬಿಡುವರು.


ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು