Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:4 - ಕನ್ನಡ ಸತ್ಯವೇದವು C.L. Bible (BSI)

4 ಆಗ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ನಾಲ್ಕು ಜೀವಿಗಳೂ ಸಿಂಹಾಸನಾರೂಢರಾದ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. “ಆಮೆನ್, ಅಲ್ಲೆಲೂಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕುಳಿತಿರುವ ದೇವರಿಗೆ ಆರಾಧನೆ ಮಾಡಿ, “ಆಮೆನ್, ಹಲ್ಲೆಲೂಯಾ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕೂತಿರುವ ದೇವರಿಗೆ ನಮಸ್ಕಾರ ಮಾಡಿ - ಆಮೆನ್; ಹಲ್ಲೆಲೂಯಾ, ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಂತರ ಇಪ್ಪತ್ತನಾಲ್ಕು ಮಂದಿ ಹಿರಿಯರು ಮತ್ತು ನಾಲ್ಕು ಜೀವಿಗಳು ಮೊಣಕಾಲೂರಿ ನಮಸ್ಕರಿಸಿದರು. ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿದರು. ಅವರು, “ಆಮೆನ್! ಹಲ್ಲೆಲೂಯಾ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು, ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿ: “ಆಮೆನ್, ಹಲ್ಲೆಲೂಯಾ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಇಸಾರ್-ಚಾರ್ ಜಾನ್ತ್ಯಾಲೊಕಾನಿ ಅನಿ ತ್ಯಾ ಚಾರ್ ಝಿತ್ತ್ಯಾ ಸಾವ್ಜಾನಿ ಡಬ್ ಪಡುನ್ ಸಿವಾಸನಾಚ್ಯಾ ವರ್ತಿ ಬಸಲ್ಲ್ಯಾ ದೆವಾಚೆ ಆರಾದನ್ ಕರ್ಲ್ಯಾನಿ. ಅನಿ, “ಆಮೆನ್! ದೆವಾಕ್ ಹೊಗ್ಳಾಪ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:4
20 ತಿಳಿವುಗಳ ಹೋಲಿಕೆ  

ಇದಕ್ಕುತ್ತರವಾಗಿ ಆ ನಾಲ್ಕು ಜೀವಿಗಳು, ‘ಆಮೆನ್’ ಎಂದು ಹೇಳಿದವು. ಸಭಾಪ್ರಮುಖರು ಸಾಷ್ಟಾಂಗವೆರಗಿ ನಮಸ್ಕಾರಮಾಡಿ ಆರಾಧಿಸಿದರು.


ಇಸ್ರಯೇಲಿನ ದೇವನಾದ ಪ್ರಭುವಿಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್’, ಪ್ರಭುವಿಗೆ ಸ್ತೋತ್ರ II


ಎಜ್ರನು ಪರಾತ್ಪರ ದೇವರಾದ ಸರ್ವೇಶ್ವರನನ್ನು ಸ್ತುತಿಸಿದಾಗ ಸರ್ವಜನರೂ ತಮ್ಮ ಕೈಗಳನ್ನೆತ್ತಿ ‘ಆಮೆನ್, ಆಮೆನ್’ ಎಂದು ಹೇಳಿ ನೆಲದಮಟ್ಟಿಗೂ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದರು.


ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಬಂದ ಒಂದು ಮಹಾಶಬ್ದವನ್ನು ಆಲಿಸಿದೆ. ಅದು ದೊಡ್ಡ ಜನಸಮೂಹದ ಆರ್ಭಟದಂತಿತ್ತು. “ಅಲ್ಲೆಲೂಯ ! ಜೀವೋದ್ಧಾರವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲುಂಟು.


ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ಮಂದಿ ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಆ ಪಾತ್ರೆಗಳಲ್ಲಿ ಯುಗಯುಗಾಂತರಕ್ಕೂ ಜೀವಿಸುವ ದೇವರ ರೋಷವು ತುಂಬಿತುಳುಕುತ್ತಿತ್ತು.


“ಆಮೆನ್! ಸರ್ವೇಶ್ವರ ಹಾಗೆಯೇ ಮಾಡಲಿ! ಸರ್ವೇಶ್ವರ ತಮ್ಮ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬಿಲೋನಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಲಿ. ನೀನು ನುಡಿದ ಮಾತುಗಳನ್ನು ನೆರವೇರಿಸಲಿ!


ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


ಇದಲ್ಲದೆ, ನನ್ನ ನಡುಪಟ್ಟಿಯನ್ನು ಝಾಡಿಸಿಬಿಟ್ಟು, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆ ಇಂದಲೂ ಆಸ್ತಿಪಾಸ್ತಿಯಿಂದಲೂ ಈ ಪ್ರಕಾರವೇ ಝಾಡಿಸಿಬಿಡಲಿ; ಅವನು ನಡುಪಟ್ಟಿಯಂತೆಯೇ ಝಾಡಿಸಲ್ಪಟ್ಟು ಬರಿದಾಗಲಿ,” ಎಂದೆ. ಕೂಡಲೆ ಸಭೆಯವರೆಲ್ಲರು ‘ಹಾಗೆಯೇ ಆಗಲಿ’ ಎಂದು ಹೇಳಿ ಸರ್ವೇಶ್ವರನನ್ನು ಕೊಂಡಾಡಿ ಕೊಟ್ಟಮಾತನ್ನು ಕೈಗೊಂಡರು.


ಇಸ್ರಯೇಲಿನ ದೇವನಾದ ಸರ್ವೇಶಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್,’ ಸರ್ವೇಶ್ವರನಿಗೆ ಸ್ತೋತ್ರ II


ಸಭೆಯಲ್ಲಿ ನೀನು ಆತ್ಮದಿಂದ ಮಾತ್ರ ದೇವರ ಸ್ತುತಿಮಾಡಿದರೆ ನಿನ್ನ ಹಾಗೆ ಪರವಶನಲ್ಲದವನು ನಿನ್ನ ಕೃತಜ್ಞತಾ ಸ್ತುತಿಗೆ ‘ಆಮೆನ್’ ಎಂದು ಹೇಗೆ ತಾನೇ ಹೇಳಬಲ್ಲನು? ನೀನು ಹೇಳುವುದೇ ಅವನಿಗೆ ತಿಳಿಯುವುದಿಲ್ಲವಲ್ಲಾ!


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ದಹಿಸಿಹೋಗಲಿ ಧರೆಯಿಂದ ದುಷ್ಟರು I ನಿರ್ಮೂಲವಾಗಲಿ ಸಕಲ ದುರುಳರು I ಪ್ರಭುವನು ನನ್ನ ಮನ ಸ್ತುತಿಸಲಿ I ಪ್ರಭುವಿಗೆ ಸ್ತುತಿಸ್ತೋತ್ರವಾಗಲಿ II


ಅವರು ಮತ್ತೊಮ್ಮೆ, “ಅಲ್ಲೆಲೂಯ ! ಅವಳ ದಹನದಿಂದ ಹೊಗೆ ಸತತ ಮೇಲೇರುತಿಹುದು ಒಂದೇಸಮನೆ,” ಎಂದು ಕೂಗಿದರು.


ತರುವಾಯ ನನಗೆ ಮತ್ತೊಂದು ಧ್ವನಿ ಕೇಳಿಸಿತು. ಅದು ದೊಡ್ಡ, ಜನಸಮೂಹದ ಆರ್ಭಟದಂತೆಯೂ ಭೋರ್ಗರೆಯುವ ಜಲಪ್ರವಾಹದ ಮೊರೆತದಂತೆಯೂ ಭಾರಿ ಗುಡುಗಿನ ಗರ್ಜನೆಯಂತೆಯೂ ಇತ್ತು. ಅದು ಇಂತೆಂದಿತು : “ಅಲ್ಲೆಲೂಯ ! ಸರ್ವಶಕ್ತ ನಮ್ಮ ಪ್ರಭು ದೇವ ರಾಜ್ಯವಾಳುತಿಹನಾತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು