Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:17 - ಕನ್ನಡ ಸತ್ಯವೇದವು C.L. Bible (BSI)

17 “ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 “ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:17
24 ತಿಳಿವುಗಳ ಹೋಲಿಕೆ  

ನೋಡುವರು ಜನಾಂಗಗಳು ನಿನ್ನ ಸದ್ಧರ್ಮವನು ಕಾಣುವರು ಸಕಲ ರಾಜರು ನಿನ್ನ ವೈಭವವನು ಪಡೆಯುವೆ ನೀನು ಸರ್ವೇಶ್ವರನೇ ಕೊಟ್ಟ ಹೊಸ ಹೆಸರನು.


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಯಾವ ಕೇಡೂ ಸಂಭವಿಸದು.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ!”


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಇಗೋ, ನನ್ನ ಭಕ್ತರು ಊಟಮಾಡುವರು, ನೀವಾದರೋ ಹಸಿದಿರುವಿರಿ. ನನ್ನ ಭಕ್ತರು ಪಾನಮಾಡುವರು, ನೀವಾದರೋ ದಾಹಗೊಳ್ಳುವಿರಿ. ನನ್ನ ಭಕ್ತರು ಉಲ್ಲಾಸಗೊಳ್ಳುವರು; ನೀವಾದರೋ ಲಜ್ಜೆಗೊಳ್ಳುವಿರಿ.


ವಕ್ರಬುದ್ಧಿಯವನು ಸರ್ವೇಶ್ವರನಿಗೆ ಅಸಹ್ಯನು, ಸತ್ಯಸಂಧರು ಆತನಿಗೆ ಪ್ರೀತಿಪಾತ್ರರು.


ಅವರ ತೃಪ್ತಿ ನಿನ್ನ ಮಂದಿರದ ಸಮೃದ್ಧಿಯಿಂದ I ಅವರ ಪಾನೀಯ ನಿನ್ನ ಸಂಭ್ರಮ ಪ್ರವಾಹದಿಂದ II


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಆಗ ಯೇಸು, “ನಿಮಗೆ ತಿಳಿಯದಂಥ ಆಹಾರ ನನ್ನಲ್ಲಿದೆ,” ಎಂದರು.


ಅಂಥವನಿಗೆ ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳು : “ಸಬ್ಬತ್‍ದಿನಗಳನ್ನು ನನ್ನ ದಿನಗಳೆಂದು ಆಚರಿಸಿ, ನನಗೆ ಮೆಚ್ಚುಗೆಯಾದುವನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸಿಕೊಂಡು ಬರುವ ನಪುಂಸಕರಿಗೆ,


ಆಯಾಯ ಹೃದಯಕ್ಕೆ ಗೊತ್ತು ಅದರ ಗೋಳು; ಅದರ ಸಂತೋಷದಲ್ಲೂ ಪಾಲುಗೊಳ್ಳಲಾಗದು ಬೇರೆಯವರು.


ಆದಕಾರಣ ಮೋಶೆ ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕೋಸ್ಕರ ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿಡು,” ಎಂದು ಹೇಳಿದನು.


ನನ್ನ ಆಲಯದಲ್ಲೆ, ಅದರ ಪ್ರಾಕಾರಗಳಲ್ಲೆ, ಅವರ ಸ್ಮಾರಕ ಶಿಲೆಗಳನ್ನು ಇಡುವೆನು. ಮಕ್ಕಳನ್ನು ಪಡೆದವರಿಗಿಂತಲು ಶ್ರೇಷ್ಠವಾದ ಹೆಸರನ್ನು ಅವರಿಗೆ ದಯಪಾಲಿಸುವೆನು. ಹೌದು, ಎಂದಿಗೂ ಅಳಿಯದ, ಶಾಶ್ವತವಾಗಿ ಉಳಿಯುವ, ಹೆಸರನ್ನು ಅವರಿಗೆ ದಯಪಾಲಿಸುವೆನು.


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಮನುಷ್ಯನ ಅಂತರಂಗದಿಂದ ಹೊರಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು