Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:24 - ಕನ್ನಡ ಸತ್ಯವೇದವು C.L. Bible (BSI)

24 “ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ: ಈ ದುರ್ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ‘ಸೈತಾನನ ಗೂಢ ರಹಸ್ಯಗಳು’ ಎನ್ನಲಾಗುವ ಈ ವಿಷಯಗಳನ್ನು ನೀವು ಅರಿತುಕೊಳ್ಳಲಿಲ್ಲ. ನಿಮ್ಮ ಮೇಲೆ ಹೆಚ್ಚಿನ ಹೊರೆಯನ್ನು ಹೊರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಅಗಾಧ ಬೋಧೆಯೆಂದು ಹೇಳಿಸಿಕೊಂಡಿರುವ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯನ್ನು ನಿಮ್ಮಲ್ಲಿ ಯಾರಾರು ತಿಳಿಯದೆಯೂ ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ, ನೀವು ಆಕೆಯ ಬೋಧನೆಗಳನ್ನು ಅನುಸರಿಸಲಿಲ್ಲ, ‘ಸೈತಾನನ ಅಗಾಧವಾದ ರಹಸ್ಯಗಳು’ ಎಂದು ಅವರು ಹೇಳುವ ಸಂಗತಿಗಳನ್ನು ನೀವು ಕಲಿತುಕೊಂಡಿಲ್ಲ. ಆದ್ದರಿಂದ ನಾನು ಬೇರೊಂದು ಹೊರೆಯನ್ನು ನಿಮ್ಮ ಮೇಲೆ ಹೊರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಥುವತೈರದಲ್ಲಿರುವ ಉಳಿದವರಿಗೆ ನಾನು ಹೇಳುವುದೇನಂದರೆ: ಅವಳ ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ಸೈತಾನನ ಆಳವಾದ ರಹಸ್ಯ ಬೋಧನೆಗಳು ಎಂದು ಹೇಳುವ ಬೋಧನೆಯನ್ನು ನೀವು ಅವಲಂಬಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತಸೆ ಹೊಲ್ಯಾರ್ ಥೈಟಿರಾತ್ಲ್ಯಾ ಲೊಕಾಕ್ನಿ ಮಿಯಾ ಸಾಂಗ್ತಲೆ ಕಾಯ್ ಮಟ್ಲ್ಯಾರ್ ತುಮಿ ತಿಚಿ ಶಿಕ್ಪಾ ಸಾರ್ಕೆ ಚಲುಕ್ನಾಸಿ ಸೈತಾನಾಚ್ಯಾ ಖೊಲ್ ಹೊತ್ತಿ ಗುಟ್ ಅನಿ ತೆನಿ ಸಾಂಗಲ್ಲಿ ಸಂಗ್ತಿಯಾ ತುಮಿ ಆಯ್ಕಿನ್ಯಾಸಿ , ತಸೆ ಹೊವ್ನ್ ಅನಿಎಕ್ ವಜ್ಜೆ ಮಿಯಾ ತುಮ್ಚ್ಯಾ ವೈರ್ ಘಾಲಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:24
15 ತಿಳಿವುಗಳ ಹೋಲಿಕೆ  

ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಸೈತಾನನ ಕುತಂತ್ರಗಳನ್ನು ನಾವು ಅರಿಯದವರಲ್ಲ; ಅವನ ಕೈ ಮೇಲಾಗದಂತೆ ನಾವು ನೋಡಿಕೊಳ್ಳಬೇಕು.


ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!”


ಮೊದಲನೆಯ ಮೃಗದ ಎದುರಿನಲ್ಲಿ ಪವಾಡಗಳನ್ನೆಸಗುವ ಅನುಮತಿ ಇದ್ದುದರಿಂದ ಅದು ಭೂನಿವಾಸಿಗಳನ್ನು ಮರುಳುಗೊಳಿಸಿತು. ಖಡ್ಗದಿಂದ ಗಾಯಗೊಂಡಿದ್ದರೂ ಸಾಯದೆ ಬದುಕಿದ್ದ ಮೃಗದ ಗೌರವಾರ್ಥ ಒಂದು ವಿಗ್ರಹವನ್ನು ನಿರ್ಮಿಸಬೇಕೆಂದು ಭೂನಿವಾಸಿಗಳಿಗೆ ಅದು ವಿಧಿಸಿತು.


ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.


ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.


ಅಂಥ ಜ್ಞಾನ ದೇವರಿಂದ ಬಂದ ಜ್ಞಾನವಲ್ಲ; ಅದು ಪ್ರಾಪಂಚಿಕವಾದುದು, ಪ್ರಾಕೃತವಾದುದು, ಪೈಶಾಚಿಕವಾದುದು.


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


“ಥುವತೈರದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಪ್ರಜ್ವಲಿಸುವ ಬೆಂಕಿಯ ಕೆಂಡದಂಥ ಕಣ್ಣುಗಳುಳ್ಳವನೂ ತಾಮ್ರದಂತಿರುವ ಪಾದಗಳುಳ್ಳವನೂ ಆದ ದೇವಪುತ್ರನ ಸಂದೇಶವಿದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು