Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:9 - ಕನ್ನಡ ಸತ್ಯವೇದವು C.L. Bible (BSI)

9 ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸತ್ತವನಾಗಿದ್ದು ಜೀವಿತನಾಗಿ ಬಂದ ಆದ್ಯಂತನು ಹೇಳುವದೇನಂದರೆ - ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು; ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವದನ್ನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಮಾಜದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಜೊ ತರಾಸ್ ಮಾಕಾ ಗೊತ್ತ್ ಹಾಯ್.ತಿಯಾ ಗರಿಬ್ ಮನುನ್ ಮಾಕಾ ಗೊತ್ತ್ ಹಾಯ್. ಖರೆ ಮಟ್ಲ್ಯಾರ್ ತಿಯಾ ಸಾವ್ಕಾರ್! ಜುದೆವ್ ನ್ಹಯ್ ಹೊಲ್ಯಾರ್ಬಿ ಅಪ್ನಿ ಜುದೆವ್ ಮನುನ್ ಸಾಂಗ್ತಲ್ಯಾ ಲೊಕಾನಿ ತುಜ್ಯಾ ವಿರೊದ್ ಬೊಲಲ್ಲ್ಯಾ ಬುರ್ಶ್ಯಾ ವಿಶಯಾಂಚ್ಯಾ ವಿಶಯಾತ್ ಮಾಕಾ ಗೊತ್ತ್ ಹಾಯ್. ತೆನಿ ಸೈತಾನಾಕ್ ಸಮಂದ್ ಪಡಲ್ಲೊ ಎಕ್ ತಾಂಡೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:9
29 ತಿಳಿವುಗಳ ಹೋಲಿಕೆ  

ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ದೇವರ ವಾಗ್ದಾನ ವಿಫಲವಾಯಿತೆಂದು ನಾನು ಹೇಳುತ್ತಿಲ್ಲ. ಇಸ್ರಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ನಿಜವಾದ ಇಸ್ರಯೇಲರಲ್ಲ.


ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ಅವರು ಸದ್ಗುಣಶೀಲರಾಗಬೇಕು, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಶ್ರೀಮಂತರಾಗಿರಬೇಕು. ದಾನಶೀಲರೂ ಇತರರೊಂದಿಗೆ ಪಾಲು ಹಂಚಿಕೊಳ್ಳುವವರೂ ಪರೋಪಕಾರಿಗಳೂ ಆಗಿರಬೇಕು.


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ನಾನು ನಿನ್ನ ಸುಕೃತ್ಯಗಳನ್ನು ಬಲ್ಲೆ. ನಿನ್ನ ಶ್ರಮಜೀವನವನ್ನು ಅರಿತು ಇದ್ದೇನೆ. ನಿನ್ನ ಸಹನಾಶಕ್ತಿಯನ್ನು ಮನಗಂಡಿದ್ದೇನೆ. ದುರ್ಜನರನ್ನು ನೀನು ಸಹಿಸಲಾರೆ ಎಂಬುದು ನನಗೆ ಗೊತ್ತು. ಪ್ರೇಷಿತರಲ್ಲದಿದ್ದರೂ ಪ್ರೇಷಿತರೆಂದು ಹೇಳಿಕೊಳ್ಳುವವರನ್ನು ನೀನು ಪರಿಶೋಧಿಸಿರುವೆ. ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು.


ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಅಷ್ಟೇ ಅಲ್ಲ, ನಮಗೆ ಬಂದೊದಗುವ ಕಷ್ಟಸಂಕಟಗಳಲ್ಲೂ ಹೆಮ್ಮೆಪಡುತ್ತೇವೆ. ಏಕೆಂದರೆ, ಕಷ್ಟಸಂಕಟಗಳು ಸಹನೆಯನ್ನು,


ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


ನಾವು ನಿಮ್ಮೊಂದಿಗಿದ್ದಾಗ, ಇಂಥ ವಿಪತ್ತುಗಳು ಖಂಡಿತವಾಗಿ ತಲೆದೋರುವುವೆಂದು ನಿಮಗೆ ಮೊದಲೇ ತಿಳಿಸಿದ್ದೆವು. ಈಗ ಹಾಗೆಯೇ ಸಂಭವಿಸಿದೆ; ನಿಮ್ಮ ಅನುಭವಕ್ಕೂ ಬಂದಿದೆ.


ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ.


ಕ್ರಿಸ್ತಯೇಸುವಿನ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಯಾರಿಂದ ಸಾಧ್ಯ? ಕಷ್ಟಸಂಕಟ, ಇಕ್ಕಟ್ಟು-ಬಿಕ್ಕಟ್ಟು, ಹಿಂಸೆ ಬಾಧೆ ಇವುಗಳಿಂದ ಸಾಧ್ಯವೆ? ಇಲ್ಲ, ಹಸಿವು ನೀರಡಿಕೆ, ನಗ್ನಸ್ಥಿತಿ, ಆಪತ್ತು-ವಿಪತ್ತು, ಖಡ್ಗಕಠಾರಿಗಳಿಂದ ಸಾಧ್ಯವೆ? ಎಂದಿಗೂ ಇಲ್ಲ.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಹಲವಾರು ವಿಧದಲ್ಲಿ ಅವರನ್ನು ದೂಷಿಸಿ ನಿಂದಿಸುತ್ತಿದ್ದರು.


“ತನಗೋಸ್ಕರ ಸಂಪತ್ತನ್ನು ಶೇಖರಿಸಿ ಇಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು,” ಎಂದರು ಯೇಸು.


“ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರವನ್ನು ಆಧಾರವಾಗಿಟ್ಟುಕೊಂಡು ದೇವರಿಗೆ ಸೇರಿದವನೆಂದು ಕೊಚ್ಚಿಕೊಳ್ಳುತ್ತೀಯೆ;


ಅನೇಕ ಬಾರಿ ನಾನು ಅವರನ್ನು ಪ್ರಾರ್ಥನಾಮಂದಿರಗಳಲ್ಲೆಲ್ಲಾ ಬಾಧೆಪಡಿಸಿದೆ. ಹೀಗೆ, ವಿಶ್ವಾಸಭ್ರಷ್ಟರಾಗುವಂತೆ ಬಲಾತ್ಕರಿಸಿದೆ. ನನ್ನ ಕೋಪೋದ್ರೇಕಕ್ಕೆ ಎಲ್ಲೆ ಇರಲಿಲ್ಲ. ಹೊರನಾಡಿನ ಊರುಗಳಿಗೂ ಅವರನ್ನು ಬೆನ್ನಟ್ಟಿಹೋಗಿ ಹಿಂಸೆಪಡಿಸಿದೆ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


“ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ: ಈ ದುರ್ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ‘ಸೈತಾನನ ಗೂಢ ರಹಸ್ಯಗಳು’ ಎನ್ನಲಾಗುವ ಈ ವಿಷಯಗಳನ್ನು ನೀವು ಅರಿತುಕೊಳ್ಳಲಿಲ್ಲ. ನಿಮ್ಮ ಮೇಲೆ ಹೆಚ್ಚಿನ ಹೊರೆಯನ್ನು ಹೊರಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು