Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:4 - ಕನ್ನಡ ಸತ್ಯವೇದವು C.L. Bible (BSI)

4 ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಸಿವಾಸನಾಂಚ್ಯಾ ವರ್ತಿ ಬಸಲ್ಲ್ಯಾಕ್ನಿ ಝಡ್ತಿ ಕರ್ತಲೊ ಅಧಿಕಾರ್ ದಿವ್ನ್ ಹೊಲ್ಲೆ ಮಿಯಾ ಬಗಟ್ಲೊ, ಅನಿ ಜೆಜುನ್ ದಾಕ್ವುನ್ ದಿಲ್ಲೆ ಅನಿ ದೆವಾಚ್ಯಾ ಗೊಸ್ಟಿಯಾನಿ ದಾಕ್ವುನ್ ದಿಲ್ಲೆ ಖರೆ ಲೊಕಾಕ್ನಿ ಸಾಂಗಲ್ಲ್ಯಾಸಾಟ್ನಿ ಚೆಂಡಾ ತೊಡುನ್ ಹೊಲ್ಲ್ಯಾಂಚೆ ಆತ್ಮೆಬಿ ಮಿಯಾ ಬಗಟ್ಲೊ, ತೆನಿ ತ್ಯಾ ಭಯಾನಕ್ ಜನಾವಾರಾಚೆ ಹೊಂವ್ದಿತ್, ತ್ಯೆಚ್ಯಾ ಮುರ್ತಿಚೆ ಹೊಂವ್ದಿತ್ ಆರಾದನ್ ಕರುಕ್ನ್ಯಾತ್, ನಾಹೊಲ್ಯಾರ್ ತೆಂಚ್ಯಾ ಕಪಾಳಾ ವೈನಿ ಹೊಂವ್ದಿತ್, ಹಾತಾ ವೈನಿ ಹೊಂವ್ದಿತ್ ತ್ಯಾ ಭಯಾನಕ್ ಜನಾವಾರಾಚಿ ವಳಕ್ ಕರುನ್ ಘೆವನಸಲ್ಲ್ಯಾನಿ. ತೆನಿ ಝಿತ್ತೆ ಹೊವ್ನ್ ಉಟ್ಲೆ, ಅನಿ ಎಕ್ ಹಜಾರ್ ವರ್ಸಾ ಕ್ರಿಸ್ತಾಚ್ಯಾ ವಾಂಗ್ಡಾ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:4
40 ತಿಳಿವುಗಳ ಹೋಲಿಕೆ  

ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.


ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ.


ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.


ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.


ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು.


ಅಂಥವರ ನರಳಾಟದ ಹೊಗೆ ಸತತ ಮೇಲೇರುತ್ತಿರುತ್ತದೆ. ಮೃಗಕ್ಕೂ ಅದರ ವಿಗ್ರಹಕ್ಕೂ ಪೂಜೆಸಲ್ಲಿಸುವವರು ಮತ್ತು ಅದರ ಹೆಸರನ್ನು ಸೂಚಿಸುವ ಹಚ್ಚೆಯನ್ನು ಚುಚ್ಚಿಸಿಕೊಂಡವರು ಹಗಲಿರುಳೂ ಬಿಡುವಿಲ್ಲದೆ ಸಂಕಟಪಡುವರು,” ಎಂದು ಹೇಳಿದನು.


ಇವರ ಸಾಕ್ಷ್ಯನೀಡಿಕೆ ಮುಗಿದ ನಂತರ ಪಾತಾಳಕೂಪದಿಂದ ಮೃಗವೊಂದು ಮೇಲೇರಿಬರುತ್ತದೆ; ಅದು ಇವರೊಡನೆ ಯುದ್ಧಮಾಡಿ, ಜಯಗಳಿಸಿ ಇವರನ್ನು ಕೊಂದುಹಾಕುತ್ತದೆ.


ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವದಾಯಕ ಉಸಿರು ಬಂದು ಆ ಶವಗಳನ್ನು ಹೊಕ್ಕಾಗ ಅವರು ಎದ್ದುನಿಂತರು. ಇದನ್ನು ಕಂಡವರೆಲ್ಲರೂ ಭಯದಿಂದ ನಡುಗಿದರು.


ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.”


ಇಸ್ರಯೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾಗುವಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವಕ್ಕೆ ಎದ್ದುಬಂದಂತಾಗುವುದಲ್ಲವೆ?


ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ-ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು.


“ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.


ಅನಂತರ, “ಎಲೀಯನು ಮೊದಲು ಬರಬೇಕಾದುದು ಅಗತ್ಯವೆಂದು ಶಾಸ್ತ್ರಜ್ಞರು ಹೇಳುತ್ತಾರಲ್ಲಾ, ಅದು ಹೇಗೆ?” ಎಂದು ಶಿಷ್ಯರು ಯೇಸುವನ್ನು ಕೇಳಿದರು.


ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ಞೆಮಾಡಿ ಕಳುಹಿಸಿದನು.


ಇದನ್ನೆಲ್ಲಾ ಕೇಳಿದ ಹೆರೋದನು, “ಹೌದು, ನಾನು ಶಿರಚ್ಛೇದನಮಾಡಿದ ಯೊವಾನ್ನನೇ ಮರಳಿ ಜೀವಂತನಾಗಿ ಬಂದಿದ್ದಾನೆ,” ಎಂದನು.


ಆ ದಿನಗಳಲ್ಲಿ ಬಹುಮಂದಿ ವಿಶ್ವಾಸಭ್ರಷ್ಟರಾಗುವರು, ಒಬ್ಬರಿಗೊಬ್ಬರು ದ್ರೋಹ ಬಗೆಯುವರು. ಒಬ್ಬರನ್ನೊಬ್ಬರು ದ್ವೇಷಿಸುವರು.


ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು,” ಎಂದರು.


ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.


ನಾನು ನನ್ನ ಪಿತನಿಂದ ಅಧಿಕಾರ ಪಡೆದಿರುವಂತೆಯೇ, ಜಯಹೊಂದುವವನಿಗೆ ಹಾಗು ನಾನು ಮೆಚ್ಚುವ ಕಾರ್ಯಗಳನ್ನು ಕೊನೆಯವರೆಗೂ ಮುಂದುವರಿಸಿಕೊಂಡು ಹೋಗುವವನಿಗೆ, ‘ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು ಅವನು ಅವುಗಳನ್ನು ಕಬ್ಬಿಣದ ದಂಡದಿಂದ ಆಳುವನು ಮಣ್ಣಿನ ಮಡಕೆಯಂತೆ ಅವುಗಳನ್ನು ನುಚ್ಚುನೂರು ಮಾಡುವನು.’ ಅಂಥವನಿಗೆ ಉದಯ ತಾರೆಯನ್ನು ನೀಡುವೆನು.


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


“ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು