Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10-11 ದೇವರಾತ್ಮವಶನಾದ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ದೇವರ ತೇಜಸ್ಸುಳ್ಳದ್ದಾಗಿ ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುವದನ್ನು ನನಗೆ ತೋರಿಸಿದನು. ಪಟ್ಟಣದ ಪ್ರಕಾಶವು ಅಮೂಲ್ಯರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಥಳಥಳಿಸುವ ವಜ್ರವೋ ಎಂಬಂತೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಬಹಳ ದೊಡ್ಡದಾದ ಮತ್ತು ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದನು. ದೇವದೂತನು ನನಗೆ ಪವಿತ್ರ ನಗರವಾದ ಜೆರುಸಲೇಮನ್ನು ತೋರಿಸಿದನು. ಆ ನಗರವು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಪರಿಶುದ್ಧ ಪಟ್ಟಣವಾದ ಯೆರೂಸಲೇಮು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದು ಬರುವುದನ್ನು ನನಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪವಿತ್ರ್ ಆತ್ಮ್ಯಾನ್ ಮಾಕಾ ಅಪ್ನಾಚ್ಯಾ ತಾಬೆತ್ ಕರುನ್ ಘೆಟ್ಲ್ಯಾನ್, ಅನಿ ದೆವಾಚ್ಯಾ ದುತಾನ್ ಮಾಕಾ ಎಕ್ ಲೈ ಉಪ್ಪರ್ಲ್ಯಾ ಮಡ್ಡಿ ವರ್ತಿ ಘೆವ್ನ್ ಗೆಲ್ಯಾನ್ ತೆನಿ ಮಾಕಾ ಪವಿತ್ರ್ ಶಾರ್ ಜೆರುಜಲೆಮ್ ದೆವಾಕ್ನಾ ಸರ್‍ಗಾ ವೈನಾ ಉತ್ರುನ್ ಯೆತಲೆ ದಾಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:10
17 ತಿಳಿವುಗಳ ಹೋಲಿಕೆ  

ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ನಾನು ದೇವರಾತ್ಮ ವಶನಾದೆ. ಆಗ ದೇವದೂತನು ನನ್ನನ್ನು ಅಡವಿಗೆ ಕೊಂಡೊಯ್ದನು. ಅಲ್ಲಿ, ಒಂದು ಕಡುಗೆಂಪಾದ ಮೃಗದ ಮೇಲೆ ಕುಳಿತಿದ್ದ ಸ್ತ್ರೀಯೊಬ್ಬಳನ್ನು ಕಂಡೆ. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಮಾತುಗಳೇ ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.


ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು.


ಆಮೇಲೆ ದೇವರಾತ್ಮ ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಸರ್ವೇಶ್ವರನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು. ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು. ಅವರ ಮಧ್ಯೆ ಅಜ್ಜೂರನ ಮಗ ಯಾಜನ್ಯ, ಬೆನಾಯನ ಮಗ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.


ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು.


ಕೂಡಲೇ, ನಾನು ದೇವರಾತ್ಮವಶನಾದೆ. ಆಗ ಸ್ವರ್ಗದಲ್ಲಿ ಒಂದು ಸಿಂಹಾಸನ ಇರುವುದನ್ನೂ ಅದರಲ್ಲಿ ಒಬ್ಬರು ಆಸೀನರಾಗಿರುವುದನ್ನೂ ಕಂಡೆ.


ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.


ನಾನು ತಮ್ಮನ್ನು ಬಿಟ್ಟು ಹೊರಟ ಕೂಡಲೆ, ಸರ್ವೇಶ್ವರನ ಆತ್ಮ ತಮ್ಮನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ತಾವು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಚಿಕ್ಕಂದಿನಿಂದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ಅನಂತರ ಅವರು ಅವನಿಗೆ, “ನಿಮ್ಮ ಸೇವಕರಾದ ನಮ್ಮಲ್ಲಿ ಐವತ್ತುಮಂದಿ ಬಲಿಷ್ಠ ಜನರಿದ್ದಾರೆ; ನಿಮ್ಮ ಯಜಮಾನರನ್ನು ಹುಡುಕಲು ಹೋಗುವುದಕ್ಕೆ ಅವರಿಗೆ ಅಪ್ಪಣೆಯಾಗಲಿ. ಸರ್ವೇಶ್ವರನ ಆತ್ಮ ಅವರನ್ನು ಎತ್ತಿಕೊಂಡುಹೋಗಿ ಒಂದು ಬೆಟ್ಟದ ಮೇಲಾಗಲಿ, ತಗ್ಗಿನಲ್ಲಾಗಲಿ ಇಟ್ಟಿರಬಹುದು,” ಎಂದು ಹೇಳಿದರು. ಅವನು, “ನೀವು ಕಳುಹಿಸಬೇಡಿ,” ಎಂದನು.


ಆದರೆ ಸ್ವರ್ಗೀಯ ಜೆರುಸಲೇಮ್ ದಾಸಿ ಅಲ್ಲ, ಸ್ವತಂತ್ರಳು, ಈಕೆಯೇ ನಮ್ಮ ತಾಯಿ.


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು