Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:12 - ಕನ್ನಡ ಸತ್ಯವೇದವು C.L. Bible (BSI)

12 ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಪ್ರಾಕಾರವಿತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು; ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ನಗರಕ್ಕೆ ಹನ್ನೆರಡು ಬಾಗಿಲುಗಳುಳ್ಳ ಅತ್ಯಂತ ಎತ್ತರವಾದ ಗೋಡೆಯಿತ್ತು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಪ್ರತಿಯೊಂದು ಬಾಗಿಲಿನ ಮೇಲೂ ಇಸ್ರೇಲಿನ ಹನ್ನೆರಡು ಕುಲಗಳಲ್ಲಿ ಒಂದು ಕುಲದ ಹೆಸರನ್ನು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ ಪುತ್ರರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತ್ಯಾ ಶಾರಾಕ್ ಎಕ್ ಉಪ್ಪರ್ಲಿ ಮೊಟಿ ಭಿತ್ತ್ ಹೊತ್ತಿ ಅನಿ ಬಾರಾ ದಾರಾ ಹೊತ್ತಿ ಅನಿ ತ್ಯಾ ಹರಿಎಕ್ ದಾರಾನಿಕ್ನಿ ಎಕೆಕ್ ದೆವಾಚ್ಯಾ ದುತಾಕ್ನಿ ನೆಮಸಲ್ಲೆ ಹೊತ್ತೆ. ಬಾರಾ ದಾರಾ ವೈನಿ ಇಸ್ರಾಯೆಲಾಚ್ಯಾ ಲೊಕಾಂಚ್ಯಾ ಬಾರಾ ಘರಾನ್ಯಾಂಚಿ ನಾವಾ ಲಿವಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:12
21 ತಿಳಿವುಗಳ ಹೋಲಿಕೆ  

ಹಗಲಿನಲ್ಲಿ ಅದರ ಹೆಬ್ಬಾಗಿಲುಗಳನ್ನು ಮುಚ್ಚುವಂತಿಲ್ಲ. ರಾತ್ರಿಯೆಂಬುದು ಅಲ್ಲಿ ಇಲ್ಲವೇ ಇಲ್ಲ.


ನಿರ್ಮಿಸುವೆ ನಿನ್ನ ಗೋಪುರಗಳನು ಮಾಣಿಕ್ಯಗಳಿಂದ ನಿನ್ನ ಪೌಳಿಗೋಡೆಯನು ಅನರ್ಘ್ಯ ರತ್ನಗಳಿಂದ.


ಶುಭವಿರಲೀ ನಿನ್ನೀ - ಪೌಳಿಗೋಡೆಗಳೊಳಗೆ” II ಸಂರಕ್ಷಣೆ ಇರಲಿ ನಿನ್ನ ಅರಮನೆಗಳೊಳಗೆ” II


ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.


ಸಿಯೋನಿಗೆ ದೇವಾ, ಶುಭವನು ಕರುಣಿಸು I ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II


ಜೆರುಸಲೇಮಿನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ, ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಕರೆಯಿಸಲಾಯಿತು.


ಹನ್ನೆರಡು ಗೋತ್ರಗಳ ನಮ್ಮ ಜನರು, ಹಗಲಿರುಳು ದೇವರನ್ನು ಆರಾಧಿಸುತ್ತಾ, ಆ ವಾಗ್ದಾನ ಈಡೇರಿಯೇ ತೀರುವುದೆಂದು ನಂಬಿದ್ದಾರೆ. ಈ ನಂಬಿಕೆಗಾಗಿಯೇ, ಓ ರಾಜರೇ, ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡಿದ್ದಾರೆ.


ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕಾಗಿ, ನಮಗೆ ನವಜೀವನ ಪ್ರಾಪ್ತವಾಗುವಂತೆ ಹಾಗು ಜುದೇಯದಲ್ಲೂ ಜೆರುಸಲೇಮಿನಲ್ಲೂ ನಮಗೆ ಅಭಯಾಶ್ರಯ ಸಿಕ್ಕುವಂತೆ, ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದೀರಿ.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


“ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು.


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


ಇಸ್ರಯೇಲರ ಕುಲಗಳ ಸಂಖ್ಯಾನುಸಾರ ಹನ್ನೆರಡು ರತ್ನಗಳಿರಬೇಕು. ಮುದ್ರಾ ರತ್ನದಲ್ಲಿ ಕೆತ್ತುವಂತೆ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.


ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.


ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಆ ನಗರವನ್ನೂ ಅದರ ಹೆಬ್ಬಾಗಿಲುಗಳನ್ನೂ ಕೋಟೆಗಳನ್ನೂ ಅಳತೆಮಾಡುವುದಕ್ಕಾಗಿ ಒಂದು ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಆರು ಮೆಟ್ಟಿಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು