Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:27 - ಕನ್ನಡ ಸತ್ಯವೇದವು C.L. Bible (BSI)

27 ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಪವಿತ್ರ್ ನಸಲ್ಲೆ ಕಾಯ್ಬಿ, ನಾಹೊಲ್ಯಾರ್ ಅಬ್ರುಗೆಡಿ ಕಾಮಾ ಕರಲ್ಲೆ ಹೊಂವ್ದಿತ್, ಝುಟೆ ಬೊಲ್ತಲೆ ಹೊಂವ್ದಿತ್, ಶಾರಾತ್ ಭುತ್ತುರ್ ಗುಸಿನ್ಯಾತ್. ಖಾಲಿ ಬೊಕ್ಡಾಚ್ಯಾ ಝಿತ್ತ್ಯಾಂಚ್ಯಾ ಪುಸ್ತಕಾತ್ ಕೊನಾಚಿ ನಾವಾ ಲಿವಲ್ಲಿ ಹಾತ್, ತೆನಿ ಎವ್ಡೆಚ್ ಶಾರಾತ್ ಭುತ್ತುರ್ ಗುಸ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:27
28 ತಿಳಿವುಗಳ ಹೋಲಿಕೆ  

ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ


“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಸ್ರಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.”


ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.


ಇಲ್ಲಮಾಡುವೆನು ಕೆಡುಕರನು ಪ್ರಭುವಿನಾ ನಗರದೊಳಗೆ I ನಾಶಮಾಡುವೆನು ನಾಡಿನ ದುರುಳರನು ದಿನದಿನಗಳೊಳಗೆ II


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ಜೆರುಸಲೇಮಿನಲ್ಲಿಯೂ ಜುದೇಯದಲ್ಲಿಯೂ ಇರುವ ಸಕಲ ಅಡಿಗೆಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಸಮರ್ಪಿತವಾಗಿರುವುವು. ಬಲಿಯನ್ನರ್ಪಿಸಲು ಬರುವವರೆಲ್ಲರೂ ಬಲಿಪಶುವಿನ ಮಾಂಸವನ್ನು ಬೇಯಿಸಲು ಈ ಪಾತ್ರೆಗಳನ್ನು ಬಳಸುವರು. ಆ ದಿನ ಬಂದಾಗ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಯಾವ ವರ್ತಕನೂ ಇರನು.


ಹೀಗೆ ಮಿರ್ಯಾಮಳು ಏಳು ದಿವಸ ಪಾಳೆಯದ ಹೊರಗೆ ಇರಬೇಕಾಯಿತು. ಅವಳನ್ನು ಮರಳಿ ಸೇರಿಸಿಕೊಳ್ಳುವವರೆಗೆ ಇಸ್ರಯೇಲರು ಪ್ರಯಾಣ ಮಾಡಲಿಲ್ಲ.


ಅಂಥವರು ಗಂಡಸರೇ ಆಗಿರಲಿ, ಹೆಂಗಸರೇ ಆಗಿರಲಿ, ಅವರೆಲ್ಲರನ್ನು ಪಾಳೆಯದಿಂದ ಹೊರಡಿಸಬೇಕು. ನಾನೇ ವಾಸವಾಗಿರುವ ಪಾಳೆಯವನ್ನು ಅವರು ಅಪವಿತ್ರಗೊಳಿಸಬಾರದು.


ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸ ಪಾಳೆಯದ ಹೊರಗೆ ಇರಬೇಕು.


ಇಲ್ಲವಾದರೆ ನೀವು ಬರೆದಿರುವ (ಜೀವಿತರ) ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಬಿಡಿಯೆಂದು ಕೇಳಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.


ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಅವರು ನೋಡಿದರು.


ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.


ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.


ನಾವಾದರೋ, ದೇವರ ವಾಗ್ದಾನದ ಪ್ರಕಾರ ನೀತಿಯ ನೆಲೆಯಾಗಿರುವ ನೂತನ ಆಕಾಶಮಂಡಲವೂ ನೂತನ ಭೂಮಂಡಲವೂ ಬರುವುದನ್ನು ಎದುರು ನೋಡುತ್ತಿರುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು