Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:4 - ಕನ್ನಡ ಸತ್ಯವೇದವು C.L. Bible (BSI)

4 ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ತೆಂಚ್ಯಾ ಡೊಳ್ಯಾನಿತ್ಲಿ ದುಕ್ಕಾ ಪುಸುನ್ ಕಾಡ್ತಾ. ಅನಿಫಿಡೆ ಮರಾನ್ ಹೊಂವ್ದಿತ್, ಕಸ್ಟ್ ಹೊಂವ್ದಿತ್ ರಡ್ತಲೆ ಹೊಂವ್ದಿತ್, ದುಕ್ತಲೆ ಹೊಂವ್ದಿತ್ ರ್‍ಹಾಯ್ನಾ, ಅದ್ದಿ ಹೊತ್ತೆ ಸಗ್ಳೆ ನಾಪತ್ತೊ ಹೊವ್ನ್ ಜಾತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:4
26 ತಿಳಿವುಗಳ ಹೋಲಿಕೆ  

ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಕಟ್ಟಕಡೆಗೆ ನಿರ್ಮೂಲವಾಗುವ ಶತ್ರುವೆಂದರೆ ಮೃತ್ಯುವೇ.


ನಿನ್ನ ಸೂರ್ಯನು ಇನ್ನು ತೊಲಗನು. ನಿನ್ನ ಚಂದ್ರನು ಬಿಟ್ಟು ತೊಲಗನು. ಸರ್ವೇಶ್ವರನೇ ನಿನಗೆ ನಿತ್ಯಜ್ಯೋತಿ ನಿನ್ನ ದುಃಖ ದಿನಗಳಿಗಿದೆ ಸಮಾಪ್ತಿ.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಲೋಕವೂ ಅದರ ವ್ಯಾಮೋಹವೂ ಗತಿಸಿಹೋಗುವುವು. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಚಿರಂಜೀವಿಯಾಗಿ ಬಾಳುವನು.


ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.


ಆಗ ನಾಟ್ಯವಾಡಿ ನಲಿವಳು ಯುವತಿ ಹರ್ಷಿಸುವರು ಯುವಕರು ಮುದುಕರು ಜೊತೆಯಾಗಿ. ಅವರ ದುಃಖವನ್ನು ಸಂತೋಷವಾಗಿಸುವೆನು ವ್ಯಸನ ತೊರೆದು ಆನಂದಿಸುವಂತೆ ಅವರನ್ನು ಸಂತೈಸುವೆನು.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.


ತರುವಾಯ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆ. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಕಣ್ಮರೆಯಾಗಿ ಹೋದವು. ಸಮುದ್ರವು ಇನ್ನಿಲ್ಲವಾಯಿತು.


ಅನಂತರ ಮೃತ್ಯುವನ್ನೂ ಪಾತಾಳವನ್ನೂ ಅಗ್ನಿಸರೋವರಕ್ಕೆ ಎಸೆಯಲಾಯಿತು. ಆ ಅಗ್ನಿಸರೋವರವೇ ಎರಡನೆಯ ಮರಣ.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು.


ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.


ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ.


ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.


ಮಾನವನು ಕೇವಲ ಉಸಿರಿಗೆ ಸಮಾನ I ಮರೆಯಾಗುವ ನೆರಳು ಅವನ ಜೀವನ II


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


“ಇನ್ನೂ ಒಂದು ಸಾರಿ,” ಎಂಬ ಈ ಮಾತು ಸೃಷ್ಟಿಸಲಾದ ವಸ್ತುಗಳನ್ನು ಕದಲಿಸಿ ಕಿತ್ತುಹಾಕಲಾಗುವುದು ಎಂಬುದನ್ನು ಸೂಚಿಸುತ್ತದೆ. ಆಗ, ಕದಲಿಸಲಾಗದ ವಸ್ತುಗಳೆಲ್ಲಾ ಸ್ಥಿರವಾಗಿ ಉಳಿಯುತ್ತವೆ.


ಸಮುದ್ರವು ತನ್ನಲ್ಲಿದ್ದ ಮೃತರನ್ನು ಒಪ್ಪಿಸಿತು; ಮೃತ್ಯುವು ಪಾತಾಳವೂ ತಮ್ಮ ವಶದಲ್ಲಿದ್ದ ಮೃತರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು