Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:19 - ಕನ್ನಡ ಸತ್ಯವೇದವು C.L. Bible (BSI)

19 ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಿಯಾ ಪ್ರೆಮ್ ಕರ್ತಲ್ಯಾಕ್ನಿ ಮಿಯಾ ಜೊರ್ ಕರ್ತಾ ಅನಿ ಶಿಕ್ಷಾ ದಿತಾ. ತಿಯಾ ಉಮ್ಮೆದಿಚೊ ಹೊವ್ಚೊ, ಅನಿ ತುಜೆ ಪಾಪಾಚೆ ಜಿವನ್ ಸೊಡುನ್ ಬರೊ ಹೊವ್ಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:19
31 ತಿಳಿವುಗಳ ಹೋಲಿಕೆ  

ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.


ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುತ್ತೇನೆ.


ದೇವರು ಯಾರನ್ನು ತಿದ್ದುತ್ತಾನೋ ಅವನು ಧನ್ಯನು ಅಲಕ್ಷ್ಯಮಾಡಬೇಡ ನೋಡು, ಸರ್ವಶಕ್ತನ ದಂಡನೆಯನು.


ದೇವರ ಚಿತ್ತಾನುಸಾರವಾದ ನಿಮ್ಮ ದುಃಖದಿಂದ ಎಂಥಾ ಶ್ರದ್ಧೆ ಉಂಟಾಗಿದೆ ಎಂಬುದನ್ನು ಗಮನಿಸಿನೋಡಿರಿ; ನಿಮ್ಮಲ್ಲಿ ಎಂಥ ಉತ್ಸಾಹ, ದೋಷವಿಮುಕ್ತರಾಗಲು ಎಂಥ ಪ್ರಯಾಸ, ಎಷ್ಟು ರೋಷ, ಎಷ್ಟು ಆವೇಶ, ಎಷ್ಟು ಎಚ್ಚರಿಕೆ, ಎಷ್ಟು ಹಂಬಲ, ತಪ್ಪಿತಸ್ಥರನ್ನು ಶಿಕ್ಷಿಸಲು ಎಷ್ಟು ಕಟ್ಟುನಿಟ್ಟು! ನೀವು ನಿರ್ದೋಷಿಗಳೆಂಬುದಕ್ಕೆ ಇವೆಲ್ಲವೂ ಸಾದೃಶ್ಯಗಳಾಗಿವೆ.


ಎಫ್ರಯಿಮಿನ ಈ ಪ್ರಲಾಪ ನನ್ನ ಕಿವಿಗೆ ಬಿದ್ದಿದೆ: ‘ನೀನು ನನಗೆ ಶಿಕ್ಷೆ ವಿಧಿಸಿದೆ ಪಳಗದ ಹೋರಿಯಂತೆ ನಾನು ಆ ಶಿಕ್ಷೆಯನ್ನು ಅನುಭವಿಸಿದೆ. ನೀನು ನನ್ನನ್ನು ತಿರುಗಿಸು, ನೀ ತಿರುಗಿಸಿದ ಹಾಗೆ ನಾನು ತಿರುಗುವೆ. ನೀನೆ ನನ್ನ ದೇವರಾದ ಸರ್ವೇಶ್ವರನಲ್ಲವೆ?


ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು !


ಆದಕಾರಣ ನೀನು ಅವರಿಗೆ - ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದುಹೋಗಿದೆ’ ಎಂದು ಹೇಳು.”


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ಮಂಕುತನ ಮಕ್ಕಳ ಮನಸ್ಸಿಗೆ ಸಹಜ; ಬೆತ್ತದ ಬಿಸಿಯಿಂದ ಅದನ್ನು ತೊಲಗಿಸಲು ಸಾಧ್ಯ.


ಶಿಸ್ತನ್ನು ನಿರಾಕರಿಸುವವನು ತನ್ನನ್ನೇ ತೃಣೀಕರಿಸುತ್ತಾನೆ; ಬುದ್ಧಿವಾದವನ್ನು ಅಂಗೀಕರಿಸುವವನು ಜ್ಞಾನ ಹೊಂದುತ್ತಾನೆ.


ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II


ಪಾಪದ ಪ್ರಯುಕ್ತ ಮಾನವನು ಶಿಕ್ಷಿಸುವಾಗ I ನುಸಿಹತ್ತಿದಂತೆ ನಾಶಪಡಿಸುವೆ ಅವನಾಸ್ಥೆಯನಾಗ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ II


ಒಬ್ಬ ತಂದೆ ತನ್ನ ಮಗನನ್ನು ಹೇಗೊ ಹಾಗೆಯೇ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಶಿಕ್ಷಿಸುತ್ತಾ ಬಂದರೆಂಬುದನ್ನು ನೀವು ಆಲೋಚಿಸಿ ನೋಡಬೇಕು.


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಪ್ರಭುವಿನ ಸೇವೆಯಲ್ಲಿ ಆಲಸಿಗಳಾಗದೆ ಅತ್ಯಾಸಕ್ತರಾಗಿರಿ.


ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”


ರಾಷ್ಟ್ರಗಳನು ಖಂಡಿಸುವವನು ದಂಡಿಸದಿರುವನೋ? I ಮನುಜರಿಗೆ ಬುದ್ಧಿಕಲಿಸುವವನು ಬುದ್ಧಿಹೀನನೋ? II


ಖಂಡಿಸಬೇಡೆನ್ನ ಪ್ರಭು, ರೋಷದಿಂದ I ದಂಡಿಸಬೇಡೆನ್ನನು ಕಡುಕೋಪದಿಂದ II


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು.


ಪ್ರಖ್ಯಾತರಾಗಿದ್ದರೂ ಖ್ಯಾತರಹಿತರಾಗಿದ್ದೇವೆ. ಬದುಕಿದ್ದರೂ ಸತ್ತವರೆನಿಸಿಕೊಂಡಿದ್ದೇವೆ. ಶಿಕ್ಷೆಗೆ ಗುರಿಯಾಗಿದ್ದರೂ ಇನ್ನೂ ಕೊಲೆಗೆ ಈಡಾಗದೆ ಇದ್ದೇವೆ.


‘ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು.


ಸನ್ಮಾರ್ಗವನ್ನು ತೊರೆದವನಿಗೆ ಬರುವ ಶಿಕ್ಷೆ ಕಠಿಣ ಬುದ್ಧಿವಾದವನ್ನು ಕೇಳಲೊಲ್ಲದವನಿಗೆ ಬರುವುದು ಮರಣ.


ನಾನು ನಿಮ್ಮ ಬಳಿ ಇರಲಿ, ಇಲ್ಲದಿರಲಿ, ಬೇರೆಯವರು ನಿಮ್ಮಲ್ಲಿ ಅಷ್ಟು ಆಸಕ್ತರಾಗಿರುವುದು ಒಳ್ಳೆಯದೇ. ಆದರೆ ಅಂಥ ಆಸಕ್ತಿ ಸದುದ್ದೇಶದಿಂದ ಕೂಡಿರಬೇಕು.


ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ. ಶಿಕ್ಷಣಕ್ಕೆ ಒಳಪಡಲಿಲ್ಲ. ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ, ತನ್ನ ದೇವರ ಸನ್ನಿಧಿಗೆ ಬರಲಿಲ್ಲ.


ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.


ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು