Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:10 - ಕನ್ನಡ ಸತ್ಯವೇದವು C.L. Bible (BSI)

10 ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10-11 ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಇಪ್ಪತ್ತುನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಾತನ ಪಾದಕ್ಕೆ ಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಪ್ಪತ್ತನಾಲ್ಕು ಮಂದಿ ಹಿರಿಯರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಮೊಣಕಾಲೂರಿ ನಮಸ್ಕರಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವ ಆತನನ್ನು ಆರಾಧಿಸುತ್ತಾ ಇಂತೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಇಸಾರ್-ಚಾರ್ ಸಿವಾಸನಾಂಚ್ಯಾ ವರ್ತಿ ಬಸಲ್ಲಿ ಜಾನ್ತಿ ಲೊಕಾ ತ್ಯಾ ಸಿವಾಸನಾರ್ ಬಸಲ್ಲ್ಯಾಚ್ಯಾ ಇದ್ರಾಕ್ ಡಬ್ ಪಡಿತ್ ಅನಿ ಸದಾ ಸರ್ವತಾಕ್ ಝಿತ್ತೊ ರ್‍ಹಾತಲ್ಯಾಚೆ ಆರಾದನ್ ಕರಿತ್. ತೆನಿ ತ್ಯಾ ಸಿವಾಸನಾಚ್ಯಾ ಇದ್ರಾಕ್ ಅಪ್ನಾಚಿ ಮುಕುಟ್ ಕಾಡುನ್ ಥೈತ್ ಅನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:10
28 ತಿಳಿವುಗಳ ಹೋಲಿಕೆ  

ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ಆಗ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ನಾಲ್ಕು ಜೀವಿಗಳೂ ಸಿಂಹಾಸನಾರೂಢರಾದ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. “ಆಮೆನ್, ಅಲ್ಲೆಲೂಯ,” ಎಂದರು.


ತರುವಾಯ ದೇವರ ಸಾನ್ನಿಧ್ಯದಲ್ಲಿ ತಮ್ಮ ತಮ್ಮ ಪೀಠಗಳಲ್ಲಿ ಕುಳಿತಿದ್ದ ಇಪ್ಪತ್ನಾಲ್ಕು ಸಭಾಪ್ರಮುಖರು ದೇವರಿಗೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ,


ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರಮಾಡಿ,


ಇದಕ್ಕುತ್ತರವಾಗಿ ಆ ನಾಲ್ಕು ಜೀವಿಗಳು, ‘ಆಮೆನ್’ ಎಂದು ಹೇಳಿದವು. ಸಭಾಪ್ರಮುಖರು ಸಾಷ್ಟಾಂಗವೆರಗಿ ನಮಸ್ಕಾರಮಾಡಿ ಆರಾಧಿಸಿದರು.


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II


ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.


ಶಿಷ್ಯರು (ಅವರನ್ನು ಆರಾಧಿಸಿ) ಅತ್ಯಾನಂದದಿಂದ ಜೆರುಸಲೇಮಿಗೆ ಹಿಂದಿರುಗಿದರು.


ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II


ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ, ತಲೆಯನ್ನು ಬೋಳಿಸಿಕೊಂಡ, ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ:


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಆಕಾಶದತ್ತ ಕೈಯೆತ್ತಿ ಪ್ರಮಾಣಮಾಡುವೆ, ಚಿರಂಜೀವಿಯಾದೆನ್ನ ಮೇಲೆ ಆಣೆಯಿಟ್ಟು ಹೇಳುವೆ:


ವಹಿಸಿಕೊಂಡನು ದೇವನು ಸರ್ವಾಧಿಪತ್ಯ I ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ II


ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಕೂಡಲೇ, ನಾನು ದೇವರಾತ್ಮವಶನಾದೆ. ಆಗ ಸ್ವರ್ಗದಲ್ಲಿ ಒಂದು ಸಿಂಹಾಸನ ಇರುವುದನ್ನೂ ಅದರಲ್ಲಿ ಒಬ್ಬರು ಆಸೀನರಾಗಿರುವುದನ್ನೂ ಕಂಡೆ.


ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು : “ಇನ್ನು ನಿಧಾನಿಸುವಂತಿಲ್ಲ;


ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ಮಂದಿ ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಆ ಪಾತ್ರೆಗಳಲ್ಲಿ ಯುಗಯುಗಾಂತರಕ್ಕೂ ಜೀವಿಸುವ ದೇವರ ರೋಷವು ತುಂಬಿತುಳುಕುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು