Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:6 - ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ, ಸಿಂಹಾಸನದ ಮುಂದೆ ಸ್ಫಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಂಡುಬಂದಿತು. ಸಿಂಹಾಸನದ ಸುತ್ತಲೂ ಅದರ ನಾಲ್ಕು ಪಾರ್ಶ್ವಗಳಲ್ಲಿ ನಾಲ್ಕು ಜೀವಿಗಳು ಇದ್ದವು. ಅವುಗಳಿಗೆ ಮುಂದೆಯೂ ಹಿಂದೆಯೂ ಅನೇಕ ಕಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ತೋಚಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಮುಂದೆ ತುಂಬಾ ಕಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇದಲ್ಲದೆ ಸಿಂಹಾಸನದ ಮುಂದೆ ಗಾಜಿನ ಸಮುದ್ರದಂತೆ ಕಾಣುವ ವಸ್ತುವೊಂದಿತ್ತು. ಅದು ಸ್ಫಟಿಕದಂತೆ ಸ್ಪಚ್ಛವಾಗಿತ್ತು. ಆ ಸಿಂಹಾಸನದ ಮುಂದೆ ಮತ್ತು ಅದರ ಪ್ರತಿಯೊಂದು ಮಗ್ಗುಲಿನಲ್ಲೂ ನಾಲ್ಕು ಜೀವಿಗಳಿದ್ದವು. ಈ ಜೀವಿಗಳ ಹಿಂಭಾಗದಲ್ಲೆಲ್ಲಾ ಮತ್ತು ಮುಂಭಾಗದಲ್ಲೆಲ್ಲಾ ಕಣ್ಣುಗಳು ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಸಿಂಹಾಸನದ ಮುಂದೆ ಸ್ಪಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ, ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಎವ್ಡೆಚ್ ನ್ಹಯ್ ಸಿವಾಸನಾಚ್ಯಾ ಇದ್ರಾಕ್ ಝಳ್‍ಝಳ್ತಲ್ಯಾ ಕಾಜೆಚೆ ಸಮುಂದರ್ ಅಸಲ್ಲ್ಯಾ ಸರ್ಕೆ ಹೊತ್ತೆ ತವ್ಡೆಚ್ ನ್ಹಯ್ ತೆಚ್ಯಾಫಿಡೆ ಸ್ಪಟಿಕ್ ಸಾರ್ಕೆ ಪವಿತ್ರ್ ಹೊತ್ತೆ. ಸಿವಾಸನಾಕ್ಡೆ ತೆಕಾ ಚಾರಿ ಬಾಜಿನಿ ಚಾರ್ ಸಾವ್ಜಾ ಹೊತ್ತಿ. ತೆಂಕಾ ಫಾಟಿಬಿ ಫಿಡೆಬಿ ಸಗ್ಳ್ಯಾಬರ್ ಡೊಳೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:6
25 ತಿಳಿವುಗಳ ಹೋಲಿಕೆ  

ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆ. ಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು. ಆ ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು.


ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.


ಆಗ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ನಾಲ್ಕು ಜೀವಿಗಳೂ ಸಿಂಹಾಸನಾರೂಢರಾದ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. “ಆಮೆನ್, ಅಲ್ಲೆಲೂಯ,” ಎಂದರು.


ಇದಕ್ಕುತ್ತರವಾಗಿ ಆ ನಾಲ್ಕು ಜೀವಿಗಳು, ‘ಆಮೆನ್’ ಎಂದು ಹೇಳಿದವು. ಸಭಾಪ್ರಮುಖರು ಸಾಷ್ಟಾಂಗವೆರಗಿ ನಮಸ್ಕಾರಮಾಡಿ ಆರಾಧಿಸಿದರು.


ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು; ಎರಡನೆಯದು ಮನುಷ್ಯನದು, ಮೂರನೆಯದು ಸಿಂಹನದು, ನಾಲ್ಕನೆಯದು ಗರುಡಪಕ್ಷಿಯದು.


ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಹಾಗು ಚಕ್ರಗಳಲ್ಲಿಯೂ ಕಣ್ಣುಗಳು ಸರ್ವತ್ರ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.


ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರಮಾಡಿ,


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.


ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ಮಂದಿ ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಆ ಪಾತ್ರೆಗಳಲ್ಲಿ ಯುಗಯುಗಾಂತರಕ್ಕೂ ಜೀವಿಸುವ ದೇವರ ರೋಷವು ತುಂಬಿತುಳುಕುತ್ತಿತ್ತು.


ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಹೆಬ್ಬಾಗಿಲನ್ನು ಒಂದೊಂದು ಮುತ್ತಿನಿಂದ ಮಾಡಲಾಗಿತ್ತು. ನಗರದ ಬೀದಿ ಸ್ವಚ್ಛವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.


ಆ ಕೋಟೆಯನ್ನು ಸೂರ್ಯಕಾಂತ ಶಿಲೆಯಿಂದ ನಿರ್ಮಿಸಲಾಗಿತ್ತು. ನಗರವು ಅಪ್ಪಟ ಬಂಗಾರದಂತೆ ಥಳಥಳಿಸುತ್ತಿತ್ತು.


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಅನಂತರ ಅವನು ‘ಕಡಲು’ ಎನಿಸಿಕೊಳ್ಳುವ ಎರಕದ ಒಂದು ಕೊಳವನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಉದ್ದ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,


ಹೊನ್ನಾಗಲಿ, ಗಾಜಾಗಲಿ ಅದಕ್ಕೆ ಸಮವಾದೀತೆ? ಚಿನ್ನಾಭರಣಗಳನ್ನು ಅದಕ್ಕೆ ಅದಲುಬದಲು ಮಾಡಿಕೊಡಲಾದೀತೆ?


ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆಮಾಡುತ್ತಿದ್ದ ಮಹಿಳೆಯರು ಕೊಟ್ಟ ತಾಮ್ರದ ದರ್ಪಣಗಳಿಂದ ನೀರಿನ ತೊಟ್ಟಿಯನ್ನೂ ಅದರ ಪೀಠವನ್ನೂ ಮಾಡಿದನು.


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ಅನಂತರ ಅವರ ಸಿಂಹಾಸನದ, ನಾಲ್ಕು ಜೀವಿಗಳ ಹಾಗೂ ಸಭಾಪ್ರಮುಖರ ಸುತ್ತಲೂ ನಿಂತಿದ್ದ ಬಹುಮಂದಿ ದೇವದೂತರ ಸ್ವರವನ್ನು ಕೇಳಿಸಿಕೊಂಡೆ. ಅವರ ಸಂಖ್ಯೆ ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


ಇದನ್ನೂ ನಾನು ಕಂಡೆ: ಯಜ್ಞದ ಕುರಿಮರಿಯಾದಾತನು ಏಳು ಮುದ್ರೆಗಳಲ್ಲಿ ಒಂದನ್ನು ಒಡೆದನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಗುಡುಗಿನಂತಿದ್ದ ಸ್ವರದಿಂದ, “ಇಲ್ಲಿ ಬಾ,” ಎಂದು ಕರೆಯುವುದನ್ನು ನಾನು ಕೇಳಿಸಿಕೊಂಡೆ.


ನಾಲ್ಕು ಜೀವಿಗಳ ಮಧ್ಯದಿಂದ ಹೊರಟಿತೋ ಎಂಬಂತೆ ಒಂದು ಧ್ವನಿ ನನಗೆ ಕೇಳಿಸಿತು. ಅದು, “ದಿನದ ಕೂಲಿಗೆ ಒಂದು ಕಿಲೋಗ್ರಾಂ ಗೋದಿ; ದಿನದ ಕೂಲಿಗೆ ಮೂರು ಕಿಲೋಗ್ರಾಂ ಜವೆಗೋದಿ; ಆದರೆ ಎಣ್ಣೆಯನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಕೆಡಿಸಬೇಡ,” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು