Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 5:9 - ಕನ್ನಡ ಸತ್ಯವೇದವು C.L. Bible (BSI)

9 ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆನಿ ಎಕ್ ನ್ಹವಿ ಗಿತ್ ಗಾವ್ಲ್ಯಾನಿ, ಸುಳ್ಳಿ ಘೆವ್ನ್ ಛಪ್ಪೆ ಫೊಡುನ್ ತಿ ಉಗ್ಡುಕ್ ತಿಯಾಚ್ ಯೊಗ್ಯ್. ತುಕಾ ಅದ್ದಿ ಜಿವಾನಿ ಮಾರುನ್ ಹೊಲ್ಲೆ, ಅನಿ ತಿಯಾ ಬಲಿ ಹೊವ್ನ್ ಮರಲ್ಲ್ಯಾ ವೈನಾ. ತಿಯಾ ಹರಿಎಕ್ ಕುಳ್, ಬಾಶಾ, ದೆಶಾ, ಅನಿ ಜಾತಿಯಾನಿತ್ನಾ ಲೊಕಾಕ್ನಿ ದೆವಾಸಾಟಿ ಇಕಾತ್ ಘೆಟ್ಲೆಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 5:9
41 ತಿಳಿವುಗಳ ಹೋಲಿಕೆ  

ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II


ಮತ್ತೊಬ್ಬ ದೇವದೂತನು ಆಕಾಶ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆ. ಸಕಲ ದೇಶ, ಭಾಷೆ, ಕುಲ, ಗೋತ್ರದ ಜನರಿಗೂ ಸಾರಬೇಕಾದ ಅಮರ ಸಂದೇಶ ಆತನಲ್ಲಿತ್ತು.


ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.


ಅವರೆಲ್ಲರೂ ಉಚ್ಚಕಂಠದಿಂದ : “ವಧಿತ ಕುರಿಮರಿಯಾದಾತನು ಶಕ್ತಿಯನು, ಸಿರಿತನವನು ಗೌರವವನು, ಘನಮಾನವನು ಸ್ತುತಿಯನು, ಸುಜ್ಞಾನವನು ಹೊಂದಲು ಯೋಗ್ಯನು,” ಎಂದು ಹಾಡಿದರು.


ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆ. ಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು. ಆ ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ನಿಮ್ಮನ್ನು ಕ್ರಯಕ್ಕೆ ಕೊಳ್ಳಲಾಗಿದೆ. ಆದ್ದರಿಂದ ಮಾನವರಿಗೆ ದಾಸರಾಗಬೇಡಿ.


ಅಲ್ಲೆಲೂಯ! ಹಾಡಿರಿ ಪ್ರಭುವಿಗೆ ನೂತನ ಕೀರ್ತನೆಯನು I ಭಕ್ತರ ಸಭೆಯಲಿ ಸ್ತುತಿಮಾಡಿರಿ ಆತನನು II


ನೂತನ ಕೀರ್ತನೆಯನು ಆತನಿಗೆ ಹಾಡಿರಿ I ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ II


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಜನರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳ ತನಕ ದಿಟ್ಟಿಸಿ ನೋಡುವರು; ಅವುಗಳನ್ನು ಸಮಾಧಿಮಾಡಲು ಬಿಡಲೊಲ್ಲರು.


ಹಾಡುವೆ ದೇವಾ, ನಿನಗೆ ನೂತನ ಕೀರ್ತನೆಯನು I ಪಾಡುವೆ ನುಡಿಸುತ್ತಾ ದಶತಂತಿಯ ವೀಣೆಯನು II


ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II


ಹೊಸಗೀತೆಯನು ಹಾಡಿರಿ ಪ್ರಭುವಿಗೆ I ವಿಶ್ವವೆಲ್ಲವು ಹಾಡಲಿ ಆತನಿಗೆ II


ಆಗ, ಸಾರುವವರು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ-ಕುಲ-ಭಾಷೆಗಳವರೇ, ನಿಮಗೆ ಹೀಗೆಂದು ರಾಜಾಜ್ಞೆಯಾಗಿದೆ:


ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು.


ಹೀಗೆ ಒಪ್ಪಿಕೊಳ್ಳುವವರೇ ಸ್ವದೇಶವನ್ನು ಅರಸುವವರು ಎಂಬುದನ್ನು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!”


ಜಗದಲ್ಲಿ ವಾಸಿಸುವ ಎಲ್ಲಾ ಜನಾಂಗದವರಿಗೂ ಕುಲದವರಿಗೂ ಭಾಷೆಯವರಿಗೂ ರಾಜ ನೆಬೂಕದ್ನೆಚ್ಚರನು ಹೊರಡಿಸಿದ ಪ್ರಕಟಣೆ - “ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!


ಇಂಥ ಮಹತ್ವ ವರದ ನಿಮಿತ್ತ ಸಕಲ ದೇಶ-ಕುಲ-ಭಾಷೆಗಳವರು ಅವರ ಮುಂದೆ ಭಯದಿಂದ ನಡುಗುತ್ತಿದ್ದರು. ತಮಗೆ ಇಷ್ಟಬಂದ ಹಾಗೆ ಒಬ್ಬನನ್ನು ಬದುಕಿಸಿದರು, ಇನ್ನೊಬ್ಬನನ್ನು ಕೊಲ್ಲಿಸಿದರು. ಮನಸ್ಸಿಗೆ ಬಂದಹಾಗೆ ಒಬ್ಬನನ್ನು ಮೇಲೇರಿಸಿದರು, ಇನ್ನೊಬ್ಬನನ್ನು ಕೆಳಕ್ಕಿಳಿಸಿದರು.


ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ.


ಅನಂತರ, ದೇವದೂತನು ನನಗೆ, “ನೀನು ಇನ್ನೂ ಅನೇಕ ಜನರ, ಜನಾಂಗಗಳ, ಭಾಷೆಗಳನ್ನಾಡುವವರ ಹಾಗು ಅರಸರಾದವರ ವಿರುದ್ಧ ಪ್ರವಾದನೆಯನ್ನು ಸಾರಬೇಕು,” ಎಂದು ಆಜ್ಞಾಪಿಸಿದನು.


ಇದಲ್ಲದೆ, ದೇವಜನರ ವಿರುದ್ಧ ಯುದ್ಧಮಾಡಿ, ಜಯಗಳಿಸುವಂತೆ ಅದಕ್ಕೆ ಅವಕಾಶವನ್ನು ಕೊಡಲಾಯಿತು. ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಮೇಲೆ ಅದಕ್ಕೆ ಅಧಿಕಾರವನ್ನು ನೀಡಲಾಯಿತು.


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು