Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:10 - ಕನ್ನಡ ಸತ್ಯವೇದವು C.L. Bible (BSI)

10 ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ಆತ್ಮಗಳು, “ಪವಿತ್ರನಾದ ಮತ್ತು ಸತ್ಯವಂತನಾದ ಪ್ರಭುವೇ, ನಮ್ಮನ್ನು ಕೊಂದ ಜನರಿಗೆ ತೀರ್ಪು ನೀಡಲು ಮತ್ತು ಅವರನ್ನು ದಂಡಿಸಲು ನೀನು ಎಷ್ಟು ಕಾಲ ತೆಗೆದುಕೊಳ್ಳುವೆ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆನಿ,“ಸಗ್ಳ್ಯಾಚ್ಯಾನ್ಕಿ ಮೊಟ್ಯಾ ದೆವಾ, ತಿಯಾ ಪವಿತ್ರ್ ಅನಿ ಖರೊ! ಅಮ್ಕಾ ಜಿವಾನಿ ಮಾರಲ್ಲ್ಯಾ ಹ್ಯಾ ಲೊಕಾಂಚಿ ನ್ಯಾಯ್‍ ನಿರ್‍ನಯ್ ನಿತ್ ಕರಿನಸ್ತಾನಾ ಅನಿ ತೆಂಕಾ ಶಿಕ್ಷಾ ದಿ ನಸ್ತಾನಾ ಅನಿ ಕವ್ಡೆ ಪತರ್ ರ್‍ಹಾತೆಯ್?” ಮನುನ್ ಮೊಟ್ಯಾನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:10
33 ತಿಳಿವುಗಳ ಹೋಲಿಕೆ  

ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ಕೆರಳಿದವು ವಿಶ್ವ ರಾಷ್ಟ್ರಗಳು ಎರಗಿತು ನಿನ್ನ ಪ್ರಕೋಪವು ಸಮೀಪಿಸಿತು ಮೃತರ ನ್ಯಾಯತೀರ್ಪಿನ ದಿನವು ಬಂದಿದೆ ಸಮಯ ಸನ್ಮಾನಿಸಲು ನಿನ್ನ ದಾಸರನು, ಪ್ರವಾದಿಗಳನು, ದೇವಪ್ರಜೆಗಳನು ನಿನ್ನಲ್ಲಿ ಭಯಭಕುತಿಯುಳ್ಳ ಹಿರಿಯ ಕಿರಿಯರನು. ಇದಿಗೋ ಬಂದಿದೆ ಗಳಿಗೆಯು ಲೋಕನಾಶಕರನ್ನು ವಿನಾಶಗೊಳಿಸಲು", ಎಂದು ಹಾಡಿದರು.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ರಕ್ತಪಾತ ಲೆಕ್ಕಿಸಿ ಸೇಡು ತೀರಿಸುವಾತ I ದೀನದಲಿತರ ಮೊರೆಯನೆಂದಿಗು ಮರೆಯನಾತ II


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


ಏಕೆಂದರೆ, ದಂಡನೆಯ ಕಾಲ ಅದು. ಅದನ್ನು ಕುರಿತು ಪವಿತ್ರಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರವೇರಬೇಕು.


ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.”


“ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II


ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು.


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ಇವರಲ್ಲಿ ಒಬ್ಬನು, ನದಿಯ ನೀರಿನ ಮೇಲ್ಗಡೆ ನಾರಿನ ಹೊದಿಕೆಯನ್ನು ಹೊದ್ದು ನಿಂತಿದ್ದ ದೂತನನ್ನು ನೋಡಿ, “ಈ ಆಶ್ಚರ್ಯಕಾರ್ಯಗಳು ನೆರವೇರಲು ಎಷ್ಟುಕಾಲ ಹಿಡಿಯುವುದು?” ಎಂದು ಕೇಳಿದನು.


ಸರ್ವೇಶ್ವರ ಸ್ವಾಮಿಯ ಅನುಗ್ರಹದ ವರುಷವನು, ನಮ್ಮ ದೇವರು ಮುಯ್ಯಿತೀರಿಸುವಾ ದಿನವನು ಘೋಷಿಸಲೆಂದೆ.


ಇನ್ನೆಷ್ಟರವರೆಗೆ ಪ್ರಭು, ನೀ ಸುಮ್ಮನಿರುವೆ ನೋಡುತ? I ಬಿಡಿಸೆನ್ನ ಹಾವಳಿಯಿಂದ, ಸಿಂಹಗಳ ಬಾಯಿಂದ II


ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? I ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? II


ಆಗ ಸಂಸೋನನು ಸರ್ವೇಶ್ವರನಿಗೆ, “ಪ್ರಭು ಸರ್ವೇಶ್ವರಾ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡು ಕಣ್ಣುಗಳಲ್ಲಿ ಒಂದಕ್ಕಾದರು ನಾನು ಅವರಿಗೆ ಮುಯ್ಯಿ ತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸಿರಿ,” ಎಂದು ಮೊರೆಯಿಟ್ಟನು.


ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.


ನಿನ್ನ ದಾಸ ನಾನೆಷ್ಟು ದಿನ ಕಾದಿರಬೇಕಯ್ಯಾ I ನನ್ನ ಹಿಂಸಕರಿಗೆಂದು ಶಿಕ್ಷೆ ವಿಧಿಸುವೆಯಯ್ಯಾ? II


“ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


“ಹೇ, ಸರ್ವೇಶ್ವರಾ, ಅವರ ದುಷ್ಕೃತ್ಯಗಳಿಗೆ ತಕ್ಕ ಪ್ರತೀಕಾರ ನೀಡು ಅವರಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು