Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:16 - ಕನ್ನಡ ಸತ್ಯವೇದವು C.L. Bible (BSI)

16 ಅವರು ಆ ಬೆಟ್ಟಗಳನ್ನೂ ಬಂಡೆಗಳನ್ನೂ ಉದ್ದೇಶಿಸಿ, “ನಮ್ಮ ಮೇಲೆ ಬೀಳಿ; ಸಿಂಹಾಸನದಲ್ಲಿ ಆಸೀನರಾಗಿರುವವರ ಸಮ್ಮುಖದಿಂದಲೂ ಯಜ್ಞದ ಕುರಿಮರಿಯಾದಾತನ ಕೋಪಾಗ್ನಿಯಿಂದಲೂ ನಮ್ಮನ್ನು ಮರೆಮಾಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬೆಟ್ಟಗಳಿಗೂ ಬಂಡೆಗಳಿಗೂ - ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿರುವಾತನ ಮುಖಕ್ಕೂ ಯಜ್ಞದ ಕುರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಜನರು ಬೆಟ್ಟಗಳಿಗೆ ಮತ್ತು ಬಂಡೆಗಳಿಗೆ, “ನಮ್ಮ ಮೇಲೆ ಬೀಳಿರಿ. ಸಿಂಹಾಸನದ ಮೇಲೆ ಕುಳಿತಿರುವಾತನ ದೃಷ್ಟಿಯಿಂದ ನಮ್ಮನ್ನು ಮರೆಮಾಡಿ; ಕುರಿಮರಿಯಾದಾತನ ಕೋಪದಿಂದ ನಮ್ಮನ್ನು ಮರೆಮಾಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬೆಟ್ಟಗುಡ್ಡಗಳಿಗೆ, “ನಮ್ಮ ಮೇಲೆ ಬಿದ್ದು ಸಿಂಹಾಸನದ ಮೇಲೆ ಕುಳಿತಿರುವವನ ಮುಖದಿಂದ ಮತ್ತು ಕುರಿಮರಿ ಆಗಿರುವವರ ಕೋಪಾಗ್ನಿಯಿಂದ ನಮ್ಮನ್ನು ಮರೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆನಿ ಮಡ್ಡಿಯಾಕ್ನಿ ಅನಿ ಗುಂಡ್ಯಾಕ್ನಿ ಬಲ್ವುನ್, ಅಮ್ಚ್ಯಾ ವೈನಿ ಯೆವ್ನ್ ಪಡಾ ಅನಿ ಸಿವಾಸನಾ ವರ್ತಿ ಬಸಲ್ಲ್ಯಾಚ್ಯಾ ನದ್ರೆತ್ನಾ ಅನಿ ಬೊಕ್ಡಾಚ್ಯಾ ರಾಗಾತ್ನಾ ಅಮ್ಕಾ ಧಾಪುನ್ ಸೊಡಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:16
21 ತಿಳಿವುಗಳ ಹೋಲಿಕೆ  

ಅದೇ ಸಮಯದಲ್ಲಿ ‘ಪರ್ವತಗಳೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ, ನಮ್ಮನ್ನು ನುಂಗಿಬಿಡಿ,’ ಎಂದು ಕೂಗಿಕೊಳ್ಳುವರು.


ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”


ಕೂಡಲೇ, ನಾನು ದೇವರಾತ್ಮವಶನಾದೆ. ಆಗ ಸ್ವರ್ಗದಲ್ಲಿ ಒಂದು ಸಿಂಹಾಸನ ಇರುವುದನ್ನೂ ಅದರಲ್ಲಿ ಒಬ್ಬರು ಆಸೀನರಾಗಿರುವುದನ್ನೂ ಕಂಡೆ.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.


ಈ ಕೆಟ್ಟ ವಂಶದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು : “ಇನ್ನು ನಿಧಾನಿಸುವಂತಿಲ್ಲ;


ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.


ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರಹೊಮ್ಮುತ್ತಿದ್ದವು. ಆ ಸಿಂಹಾಸನದ ಮುಂದೆ ದೇವರ ಸಪ್ತ ಆತ್ಮಗಳನ್ನು ಸೂಚಿಸುವ ಸಪ್ತದೀಪಗಳು ಬೆಳಗುತ್ತಿದ್ದವು.


ಸಜ್ಜನರ ಸಂಗದೊಳು ದೇವನಿರಲು I ದುರ್ಜನರಿದೋ ದಿಗ್ಭ್ರಾಂತರಾಗುವರು II


ಸ್ವಾಮಿಯ ಭಯಂಕರ ಕೋಪಕ್ಕೆ ಅಂಜಿ, ಆ ಮಹೋನ್ನತನ ವೈಭವಕ್ಕೆ ಹೆದರಿ ಬಂಡೆಯ ಗುಹೆಗಳೊಳಗೆ ನುಗ್ಗಿರಿ, ನೆಲದ ಬಿಲಗಳಲ್ಲಿ ಅವಿತುಕೊಳ್ಳಿರಿ.


ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.


ನಾನು ಈ ದೃಶ್ಯವನ್ನು ಸಹ ಕಂಡೆ : ಸಿಂಹಾಸನದಲ್ಲಿ ಆಸೀನರಾಗಿರುವವರ ಬಲಗೈಯಲ್ಲಿ ಒಂದು ಸುರುಳಿ ಇತ್ತು. ಅದರ ಒಳಭಾಗದಲ್ಲೂ ಹೊರಭಾಗದಲ್ಲೂ ಬರೆಯಲಾಗಿತ್ತು. ಅದನ್ನು ಏಳು ಮುದ್ರೆಗಳಿಂದ ಮುದ್ರಿಸಲಾಗಿತ್ತು.


ಆಂಥ ದಿನಗಳಲ್ಲಿ ಮನುಷ್ಯರು ಮರಣವನ್ನು ಅಪೇಕ್ಷಿಸುವರು. ಆದರೆ ಅದು ಅವರಿಗೆ ಪ್ರಾಪ್ತವಾಗುವುದಿಲ್ಲ. ಸತ್ತರೆ ಸಾಕೆಂದು ಬಯಸುವರು; ಪ್ರಯತ್ನಿಸುವರು. ಆದರೆ ಮೃತ್ಯು ಅವರಿಂದ ದೂರ ಸರಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು