Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:8 - ಕನ್ನಡ ಸತ್ಯವೇದವು C.L. Bible (BSI)

8 ಆಗ ಬೂದು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು, ‘ಮೃತ್ಯು’ ಎಂದು. ಅವನನ್ನು ‘ಮೃತ್ಯುಲೋಕ’ ಎಂಬಾತನು ಹಿಂಬಾಲಿಸಿದನು. ಇವರಿಗೆ ಖಡ್ಗ, ಕ್ಷಾಮ, ಅಂಟುಜಾಡ್ಯ, ಕಾಡುಮೃಗ ಇವುಗಳಿಂದ ಭೂಲೋಕದ ಕಾಲುಭಾಗದ ಜನತೆಯನ್ನು ಕೊಂದುಹಾಕುವುದಕ್ಕೆ ಅಧಿಕಾರವನ್ನು ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ಅವನ ಹಿಂದೆ ಪಾತಾಳವೆಂಬವನು ಬಂದನು. ಅವರಿಗೆ ಭೂವಿುಯ ಕಾಲುಭಾಗದಲ್ಲಿ ಕತ್ತಿಯಿಂದಲೂ ಬರದಿಂದಲೂ ಅಂಟುರೋಗದಿಂದಲೂ ಕಾಡುಮೃಗಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ನೋಡಲು, ಒಂದು ನಸು ಹಸಿರು ಬಣ್ಣದ ಕುದುರೆ ಕಾಣಿಸಿತು. ಅದರ ಸವಾರನಿಗೆ ಮೃತ್ಯುವೆಂದು ಹೆಸರಿತ್ತು. ಪಾತಾಳವೆಂಬವನು ಅವನ ಹಿಂದೆ ಹೋಗುತ್ತಿದ್ದನು. ಅವರಿಗೆ ಭೂಮಿಯ ನಾಲ್ಕನೆಯ ಒಂದು ಭಾಗದ ಮೇಲೆ ಕತ್ತಿ, ಕ್ಷಾಮ, ಮರಣ ಮತ್ತು ಭೂಮಿಯ ಕ್ರೂರಮೃಗಗಳಿಂದ ಕೊಲ್ಲುವ ಅಧಿಕಾರಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಹಿರ್ವ್ಯಾ ಸರ್ಕ್ಯಾ ಬನ್ನಾಚೆ ಎಕ್ ಘೊಡ್ಕೆ ಮಾಕಾ ದಿಸ್ಲೆ. ಹೆಚ್ಯಾ ವರ್ತಿ ಸವಾರಿ ಕರ್ತಲ್ಯಾಕ್ ಮರಾನ್ ಮನುನ್ ನಾಂವ್ ದಿಲ್ಲೆ ಹೊತ್ತೆ, ಅನಿ ಪಾತಾಳ್ಬಿ ತ್ಯೆಚ್ಯಾ ಫಾಟ್ನಾಚ್ ಹೊತ್ತೆ. ಹ್ಯಾ ಜಿಮ್ನಿ ವೈಲೊ ರುಪೈತ್ಲೊ ಚಾರ್ ಆನೆ ಭಾಗ್ ಮಾರಾಮಾರಿಯಾನಿ, ಬರ್‍ಗಾಲಾನಿ, ರೊಗಾನಿ, ಅನಿ ಡಂಗ್ಳಿತ್ಲ್ಯಾ ಜನಾವರಾಂಚ್ಯಾ ಕಾರನಾನಿ ಜಿವಾನಿ ಮಾರುನ್ ಟಾಕುಕ್ ಮನುನ್ ಹೆಚ್ಯಾ ತಾಬೆತ್ ದಿಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:8
26 ತಿಳಿವುಗಳ ಹೋಲಿಕೆ  

ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಮೂರನೆಯ ರಥಕ್ಕೆ ಬಿಳೀ ಕುದುರೆಗಳು, ನಾಲ್ಕನೆಯ ರಥಕ್ಕೆ ಮಚ್ಚೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು.


ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”


ಅವುಗಳ ಬಾಯಿಂದ ಬರುತ್ತಿದ್ದ ಇವುಗಳು ಮೂರು ವಿಪತ್ತುಗಳಾಗಿದ್ದವು. ಇವುಗಳಿಂದ ಮಾನವಜನಾಂಗದ ಮೂರನೆಯ ಒಂದು ಭಾಗ ಹತವಾಯಿತು.


ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


ಮಾನವ ಜನಾಂಗದ ಮೂರನೆಯ ಒಂದು ಭಾಗವನ್ನು ಸಂಹರಿಸುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಾಗಿ ನಿಂತಿದ್ದ ಆ ನಾಲ್ಕು ದೇವದೂತರನ್ನು ಬಂಧಮುಕ್ತರನ್ನಾಗಿ ಮಾಡಲಾಯಿತು.


ಸಾವಿಗೆ ಸೋಲಾಯಿತು, ಜಯವು ಸಂಪೂರ್ಣವಾಯಿತು. ಎಲೈ ಸಾವೇ, ನಿನ್ನ ಜಯವೆಲ್ಲಿ? ಎಲೈ ಸಾವೇ, ನಿನ್ನ ವಿಷಕೊಂಡಿಯೆಲ್ಲಿ?


ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.


ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.


ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು.


ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.


ಅವಳ ಕಾಲುಗಳು ಮರಣದತ್ತ ಇಳಿಯುತ್ತವೆ, ಹೆಜ್ಜೆಗಳು ಪಾತಾಳದತ್ತ ಕೊಂಡೊಯ್ಯುತ್ತವೆ.


ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು.


ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು.


ಅವರಿಗೂ ಅವರ ಪೂರ್ವಜರಿಗೂ ನಾನು ಅನುಗ್ರಹಿಸಿದ ನಾಡಿನಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.”


‘ಇಗೋ, ನಾನು ಅವರ ಮೇಲೆ ಖಡ್ಗ-ಕ್ಷಾಮ-ವ್ಯಾಧಿಗಳನ್ನು ಬರಮಾಡುವೆನು. ಯಾರೂ ತಿನ್ನಲಾಗದಷ್ಟು ಕೆಟ್ಟು ಅಸಹ್ಯವಾದ ಅಂಜೂರದ ಹಣ್ಣಿನ ಗತಿಗೆ ಅವರನ್ನು ಇಳಿಸುವೆನು.


ನಿನ್ನನ್ನೂ ನಿನ್ನ ಎಲ್ಲ ಮೀನುಗಳನ್ನೂ ಕಾಡುಪಾಲು ಮಾಡುವೆನು; ನೀನು ಬಯಲಿನಲ್ಲಿ ಬಿದ್ದಿರುವೆ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಿನ್ನನ್ನು ಭೂಜಂತುಗಳಿಗೂ ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.


ಜನಾಂಗಕ್ಕೆ ವಿರುದ್ಧ ಜನಾಂಗವೂ ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರವೂ ಯುದ್ಧಕ್ಕಿಳಿಯುವುವು. ಅಲ್ಲಲ್ಲಿ ಕ್ಷಾಮಡಾಮರಗಳೂ ಭೂಕಂಪಗಳೂ ಸಂಭವಿಸುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು