Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:14 - ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಮಿಯಾ,“ಸಾಯ್ಬಾ ಮಾಕಾ ಗೊತ್ತ್ ನಾ, ತುಕಾಚ್ ತೆ ಗೊತ್ತ್ ಹಾಯ್.” ಮನುನ್ ಜಬಾಬ್ ದಿಲೊ. ತೆನಿ ಮಾಕಾ,“ಮೊಟ್ಯಾ ತರಾಸಾತ್ನಾ ಸುರಕ್ಷಿತ್ ಪಾರ್ ಹೊವ್ನ್ ಯೆಲ್ಲಿ ಲೊಕಾ ಹಿ. ತೆನಿ ಅಪ್ನಾಚೆ ಝಗೆ ಬೊಕ್ಡಾಚ್ಯಾ ರಗ್ತಾನ್ ಧುವ್ನ್ ಫಾಂಡ್ರೆ ಕರುನ್ ಘೆಟ್ಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:14
30 ತಿಳಿವುಗಳ ಹೋಲಿಕೆ  

ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಯೇಸುಸ್ವಾಮಿ ಕೂಡ ತಮ್ಮ ರಕ್ತದಿಂದ ಜನರನ್ನು ಪರಿಶುದ್ಧಗೊಳಿಸುವುದಕ್ಕೋಸ್ಕರ, ನಗರದ್ವಾರದ ಹೊರಗಡೆ ಮರಣಕ್ಕೆ ಈಡಾದರು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಏಕೆಂದರೆ ಆಗ ಬರಲಿರುವ ಸಂಕಷ್ಟಗಳು ಸೃಷ್ಟಿಯ ಆದಿಯಿಂದ ಇಂದಿನವರೆಗೂ ಇರಲಿಲ್ಲ; ಇನ್ನು ಮುಂದಕ್ಕೂ ಇರುವುದಿಲ್ಲ.


ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ಅಷ್ಟೇ ಅಲ್ಲ, ನಮಗೆ ಬಂದೊದಗುವ ಕಷ್ಟಸಂಕಟಗಳಲ್ಲೂ ಹೆಮ್ಮೆಪಡುತ್ತೇವೆ. ಏಕೆಂದರೆ, ಕಷ್ಟಸಂಕಟಗಳು ಸಹನೆಯನ್ನು,


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು.


ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.


ಯಾವಾಗಲೂ ಸಹನೆಯಿಂದಲೂ ಸ್ಥಿರ ವಿಶ್ವಾಸದಿಂದಲೂ ನಿಮಗೆ ಬಂದೊದಗಿರುವ ಕಷ್ಟಸಂಕಟಗಳನ್ನೂ ಚಿತ್ರಹಿಂಸೆಗಳನ್ನೂ ಅನುಭವಿಸುತ್ತಿದ್ದೀರಿ. ಅದಕ್ಕಾಗಿ ದೇವರ ಸಭೆಗಳಲ್ಲಿ ನಿಮ್ಮನ್ನು ಕುರಿತು ನಾವು ಹೆಮ್ಮೆಯಿಂದ ಮಾತನಾಡುತ್ತೇವೆ.


ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ, ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು.


ಹತ್ತಿರದಲ್ಲೆ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸರಿಯಾದ ಅರ್ಥ ಏನೆಂದು ವಿಚಾರಿಸಿದೆ.


ಅಂತ್ಯಕಾಲದವರೆಗೆ ಬುದ್ಧಿವಂತ ನಾಯಕರಲ್ಲಿ ಕೆಲವರು ಸಾವಿಗೆ ತುತ್ತಾಗುವರು. ಇದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ಕ್ಲುಪ್ತಕಾಲದಲ್ಲೇ ಬರುವುದು.


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಆಗ ಬರಲಿರುವ ಸಂಕಷ್ಟಗಳು ದೈವಸೃಷ್ಟಿಯ ಆದಿಯಿಂದ ಇರಲಿಲ್ಲ. ಇನ್ನು ಮುಂದಕ್ಕೂ ಇರುವುದಿಲ್ಲ.


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಮರೆತುಬಿಡುವೆ ಆಗ ನಿನ್ನ ಕಷ್ಟದುಃಖವನ್ನು ನಿನ್ನ ನೆನಪಿಗೆ ಅದು ಹರಿದುಹೋದ ನೀರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು