Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:4 - ಕನ್ನಡ ಸತ್ಯವೇದವು C.L. Bible (BSI)

4 ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಮಂದಿ. ಅವರ ಬಿಡಿ ಸಂಖ್ಯೆ ಹೀಗಿತ್ತು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ನಾನು ಕೇಳಿದೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಒತ್ತಿಸಿಕೊಂಡರು. ಅವರ ಸಂಖ್ಯೆ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಂತರ, ಮುದ್ರೆ ಒತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಅವರ ಒಟ್ಟು ಸಂಖ್ಯೆ 1,44,000 ಮಂದಿ. ಅವರು ಇಸ್ರೇಲರ ಹನ್ನೆರಡು ಕುಲಗಳಿಗೆ ಸೇರಿದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಮುದ್ರೆ ಹೊಂದಿರುವವರ ಸಂಖ್ಯೆಯು ನನಗೆ ಕೇಳಿಸಿತು. ಇಸ್ರಾಯೇಲಿನ ಎಲ್ಲಾ ಕುಲಗಳಿಂದ ಮುದ್ರೆಹಾಕಿಸಿಕೊಂಡವರು 1,44,000 ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕಪಾಳಾ ವೈನಿ ದೆವಾಚೊ ಛಪ್ಪೊ ಮಾರುನ್ ವಳಕ್ ಕರಲ್ಲಿ ಲೊಕಾ ಎಕ್ ಲಾಕ್ ಚಾಳಿಸಾರ್ ಚಾರ್ ಹಜಾರ್ ಲೊಕಾ ಮನುನ್ ಮಾಕಾ ಸಾಂಗಟ್ಲ್ಯಾನಿ. ತಿ ಲೊಕಾ ಇಸ್ರಾಯೆಲಾಚ್ಯಾ ಬಾರಾ ಘರಾನ್ಯಾನಿತ್ಲಿ ಲೊಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:4
17 ತಿಳಿವುಗಳ ಹೋಲಿಕೆ  

ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು.


ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಹನ್ನೆರಡು ಗೋತ್ರಗಳ ನಮ್ಮ ಜನರು, ಹಗಲಿರುಳು ದೇವರನ್ನು ಆರಾಧಿಸುತ್ತಾ, ಆ ವಾಗ್ದಾನ ಈಡೇರಿಯೇ ತೀರುವುದೆಂದು ನಂಬಿದ್ದಾರೆ. ಈ ನಂಬಿಕೆಗಾಗಿಯೇ, ಓ ರಾಜರೇ, ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡಿದ್ದಾರೆ.


ಕುದುರೆ ಸೈನ್ಯದ ಸಂಖ್ಯೆ ಇಪ್ಪತ್ತು ಕೋಟಿ ಎಂದು ಹೇಳಿದುದು ನನಗೆ ಕೇಳಿಸಿತು.


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.”


ಪಟ್ಟಣದ ಬಾಗಿಲುಗಳಿಗೆ ಇಸ್ರಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಉತ್ತರದಲ್ಲಿ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ್ಯ ಬಾಗಿಲು, ಮತ್ತೊಂದು ಲೇವಿ ಬಾಗಿಲು.


ಹದ್ರಾಕ್ ನಾಡಿಗೂ ದಮಸ್ಕಪಟ್ಟಣಕ್ಕೂ ವಿರುದ್ಧ ಸರ್ವೇಶ್ವರ ನುಡಿದ ದೈವೋಕ್ತಿ: ಸರ್ವೇಶ್ವರಸ್ವಾಮಿ ನರಮಾನವರ ಮೇಲೆ ಕಣ್ಣಿಟ್ಟಿದ್ದಾರೆ. ಹೌದು ಇಸ್ರಯೇಲಿನ ಸಕಲ ಕುಲಗಳ ಮೇಲೆ ಕಣ್ಣಿಟ್ಟಿದ್ದಾರೆ.


ಅವರು ಇಸ್ರಯೇಲಿನ ಯಾವ ಕುಲಕ್ಕೆ ಸೇರಿದ್ದರೂ ಪುರದಲ್ಲಿ ವಾಸಿಸುತ್ತಾ ಆ ಭೂಮಿಯನ್ನು ಕೃಷಿಮಾಡುವರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ಇಸ್ರಯೇಲಿನ ಹನ್ನೆರಡು ಕುಲಗಳಿಗೆ ನಾಡನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಜೋಸೆಫಿಗೆ ಎರಡು ಪಾಲು ಸೇರಲಿ.


ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.


ಇಸ್ರಯೇಲರ ಕುಲಗಳ ಸಂಖ್ಯಾನುಸಾರ ಹನ್ನೆರಡು ರತ್ನಗಳಿರಬೇಕು. ಮುದ್ರಾ ರತ್ನದಲ್ಲಿ ಕೆತ್ತುವಂತೆ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.


ಯೂದನ ಕುಲದಿಂದ ಹನ್ನೆರಡು ಸಾವಿರ ರೂಬೇನನ ಕುಲದಿಂದ ಹನ್ನೆರಡು ಸಾವಿರ ಗಾದನ ಕುಲದಿಂದ ಹನ್ನೆರಡು ಸಾವಿರ


ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ,’ ಎಂದು ಆಜ್ಞೆಮಾಡಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು