Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:11 - ಕನ್ನಡ ಸತ್ಯವೇದವು C.L. Bible (BSI)

11 ಆ ನಕ್ಷತ್ರದ ಹೆಸರು ‘ವಿಷಕನ್ಯೆ'. ನೀರಿನಲ್ಲಿ ಮೂರನೆಯ ಒಂದು ಭಾಗ ವಿಷವಾಯಿತು; ಇದರಿಂದಾಗಿ ಅನೇಕರು ನೀರನ್ನು ಕುಡಿದು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ನಕ್ಷತ್ರದ ಹೆಸರು ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನೊಳಗೆ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ಕಹಿಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಅನೇಕರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ನಕ್ಷತ್ರಕ್ಕೆ “ಕಹಿ ಮರ” ಎಂದು ಹೆಸರು. ನೀರಿನಲ್ಲಿ ಮೂರನೆಯ ಒಂದು ಭಾಗವು ಕಹಿಯಾಯಿತು. ಈ ಕಹಿಯಾದ ನೀರನ್ನು ಕುಡಿದು ಅನೇಕ ಜನರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ನಕ್ಷತ್ರದ ಹೆಸರು, ಮಾಚಿಪತ್ರೆ, ಆಗ ಮೂರರಲ್ಲಿ ಒಂದು ಭಾಗವು ಕಹಿಯಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತ್ಯಾ ಚಿಕ್ಕಿಚೆ ನಾಂವ್, ಕೊಡು ಪಾನಿಯಾಚೊ ತಿನಾತ್ಲೊ ಎಕ್ ಭಾಗ್ ಕೊಡು ಹೊವ್ನ್ ಬದಲ್ಲೊ, ಅನಿ ಹೆ ಪಾನಿ ಫಿಲ್ಲಿ ಸುಮಾರ್ ಲೊಕಾ ಮರುನ್ ಗೆಲಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಹೆ ಕೊಡು ಹೊಲ್ಲೆ ಪಾನಿ ಫಿಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:11
17 ತಿಳಿವುಗಳ ಹೋಲಿಕೆ  

ಆದಕಾರಣ ಸರ್ವಶಕ್ತ ಸರ್ವೇಶ್ವರ ಪ್ರವಾದಿಗಳ ವಿಷಯದಲ್ಲಿ ಹೇಳುವುದನ್ನು ಕೇಳಿ: “ಇವರು ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು. ವಿಷಬೆರೆತ ನೀರನ್ನು ಕುಡಿಯುವಂತೆ ಮಾಡುವೆನು ಜೆರುಸಲೇಮಿನ ಈ ಪ್ರವಾದಿಗಳಿಂದ ಭ್ರಷ್ಟತನ ನಾಡಿನಲ್ಲೆಲ್ಲೂ ಹರಡಿರುವುದು.”


ಆದುದರಿಂದ ಈ ಜನರು ಕಹಿಯಾದ ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು; ವಿಷ ಬೆರೆತ ನೀರನ್ನು ಕುಡಿಯುವಂತೆ ಮಾಡುವೆನು.


“ಎಚ್ಚರಿಕೆಯಿಂದಿರಿ! ನಮ್ಮ ದೇವರಾದ ಸರ್ವೇಶ್ವರನನ್ನು ಬಿಟ್ಟು, ಆ ಜನಾಂಗಗಳ ದೇವರುಗಳನ್ನು ಅವಲಂಬಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.


ಕಲ್ಲುಬಂಡೆಗಳ ಮೇಲೆ ಕುದುರೆಗಳು ಓಡಾಡುವುದುಂಟೋ? ಎತ್ತು ಹೋರಿಗಳಿಂದ ಕಡಲನ್ನು ಉಳುವುದುಂಟೋ? ನೀವೋ, ವಿಷವನ್ನಾಗಿಸಿದ್ದೀರಿ ನ್ಯಾಯನೀತಿಯನ್ನು, ಕಹಿಯಾಗಿಸಿದ್ದೀರಿ ಧರ್ಮದ ಸತ್ಫಲವನ್ನು.


ನ್ಯಾಯವನ್ನು ಕಹಿಯಾಗಿಸುವವರೇ, ಧರ್ಮವನ್ನು ಕಸವಾಗಿಸುವವರೇ, ನಿಮಗೆ ಧಿಕ್ಕಾರ!


ನಾನು ಪಟ್ಟ ಕಷ್ಟದುಃಖವನ್ನು ಮನಸ್ಸಿಗೆ ತಂದುಕೊಂಡಾಗ ಆಗುತ್ತಿದೆ ನನಗೆ ಕಹಿಯಾದ ಅನುಭವ.


ಕಡೆಗೆ ಅವಳು ಕಹಿ ಮಾಚಿಪತ್ರೆಯಂತೆ, ಹರಿತವಾದ ಇಬ್ಬಾಯಿ ಕತ್ತಿಯಂತೆ.


ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ನನ್ನನ್ನು ಹಿಡಿದು ಬಂದಿಸಿರುವನು ದಿಬ್ಬಗಳ ಮಧ್ಯೆ ಸುತ್ತುಗಟ್ಟಿರುವನು ಕಷ್ಟಸಂಕಟಗಳ ನಡುವೆ.


ಅದಕ್ಕೆ ಅವಳು, “ನನ್ನನ್ನು ‘ನವೊಮಿ’ ಎಂದು ಕರೆಯಬೇಡಿ; ‘ಮಾರಾ’ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತ ದೇವರು ನನ್ನನ್ನು ಬಹಳ ದುಃಖಪಡಿಸಿದ್ದಾರೆ.


ತರುವಾಯ ‘ಮಾರಾ’ ಎಂಬ ಸ್ಥಳವನ್ನು ತಲುಪಿದರು. ಅಲ್ಲಿ ನೀರು ಸಿಕ್ಕಿತಾದರೂ ಅದು ಕಹಿಯಾಗಿತ್ತು. ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದ ಆ ಸ್ಥಳಕ್ಕೆ ‘ಮಾರಾ’ ಎಂದು ಹೆಸರಾಯಿತು.


ಹತರಾಗುವರು ನಾಡಿನ ಮೂರರಲ್ಲೆರಡು ಭಾಗದವರು, ಮೂರನೆಯ ಭಾಗದವರು ಉಳಿಯುವರಲ್ಲಿ, ಸರ್ವೇಶ್ವರಸ್ವಾಮಿಯ ನುಡಿಯಿದು.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಮಾನವ ಜನಾಂಗದ ಮೂರನೆಯ ಒಂದು ಭಾಗವನ್ನು ಸಂಹರಿಸುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಾಗಿ ನಿಂತಿದ್ದ ಆ ನಾಲ್ಕು ದೇವದೂತರನ್ನು ಬಂಧಮುಕ್ತರನ್ನಾಗಿ ಮಾಡಲಾಯಿತು.


ಅವುಗಳ ಬಾಯಿಂದ ಬರುತ್ತಿದ್ದ ಇವುಗಳು ಮೂರು ವಿಪತ್ತುಗಳಾಗಿದ್ದವು. ಇವುಗಳಿಂದ ಮಾನವಜನಾಂಗದ ಮೂರನೆಯ ಒಂದು ಭಾಗ ಹತವಾಯಿತು.


ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು