Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:13 - ಕನ್ನಡ ಸತ್ಯವೇದವು C.L. Bible (BSI)

13 ಅನಂತರ ಆಕಾಶಮಧ್ಯದಲ್ಲಿ ಒಂದು ಗರುಡ ಪಕ್ಷಿ ಹಾರಾಡುತ್ತಿರುವುದನ್ನು ನಾನು ಕಂಡೆ. ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು,” ಎಂದು ಗಟ್ಟಿಯಾಗಿ ಕೂಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಮೇಲೆ ನಾನು ನೋಡಲಾಗಿ ಇಗೋ, ಒಂದೇ ಗರುಡಪಕ್ಷಿಯು ಆಕಾಶಮಧ್ಯದಲ್ಲಿ ಹಾರಾಡುತ್ತಿತ್ತು. ಅದು - ಅಯ್ಯೋ, ಅಯ್ಯೋ, ಅಯ್ಯೋ, ಊದಬೇಕಾಗಿರುವ ಮೂವರು ದೇವದೂತರ ವಿುಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ ಎಂಥಾ ವಿಪತ್ತುಗಳು ಸಂಭವಿಸುವವು ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ನೋಡುತ್ತಿದ್ದಂತೆ, ವಾಯುಮಂಡಲದ ಅತಿ ಎತ್ತರದಲ್ಲಿ ಗರುಡ ಪಕ್ಷಿಯೊಂದು ಹಾರಾಡುತ್ತಿರುವುದನ್ನು ಕಂಡೆನು. ಆ ಪಕ್ಷಿಯು ಗಟ್ಟಿಯಾದ ಧ್ವನಿಯಲ್ಲಿ, “ತೊಂದರೆ! ತೊಂದರೆ! ಭೂಮಿಯ ಮೇಲೆ ವಾಸಿಸುವ ಜನರಿಗೆ ತೊಂದರೆ! ಇತರ ಮೂರು ಮಂದಿ ದೇವದೂತರು ತಮ್ಮ ತುತೂರಿಗಳನ್ನು ಊದಿದಾಗ ವಿಪತ್ತುಗಳು ಆರಂಭವಾಗುತ್ತವೆ” ಎಂದು ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ನೋಡಲಾಗಿ, ಆಕಾಶದ ಮಧ್ಯದಲ್ಲಿ ಹಾರುತ್ತಿರುವ ಒಂದು ಗರುಡ ಪಕ್ಷಿ ಮಹಾಧ್ವನಿಯಿಂದ: ಇನ್ನೂ ಊದಲಿರುವ ಮೂವರು ದೂತರ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ, “ಅಯ್ಯೋ! ಅಯ್ಯೋ! ಅಯ್ಯೋ!” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾನಾ ಎಕ್ ಘಾರ್ ಮಳ್ಬಾರ್ ವರ್ತಿ ಹುಡ್ತಲಿ ಬಗಟ್ಲೊ ಅನಿ ತ್ಯಾ ಘಾರೆನ್ ಮೊಟ್ಯಾನ್, “ಭಯಂಕರ್! ಹುರಲ್ಲಿ ತಿನ್ ದೆವ್‍ದುತಾ ಪಂವೆ ವಾಜ್ವುತಲೊ ಅವಾಜ್ ಯೆತಾನಾ ಜಿಮ್ನಿ ವರ್ತಿ ವಸ್ತಿ ಕರುನ್ ಅಸಲ್ಲ್ಯಾಂಚಿ ಗತ್ ಕಾಯ್ ಸಾಂಗು!” ಮನುನ್ ಬೊಬ್ ಮಾರ್ತಲೆ ಮಿಯಾ ಆಯಿಕ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:13
12 ತಿಳಿವುಗಳ ಹೋಲಿಕೆ  

ಹೀಗೆ ಎರಡನೆಯ ವಿಪತ್ತು ಮುಗಿಯಿತು. ಇಗೋ ಮೂರನೆಯ ವಿಪತ್ತು ಕೂಡಲೇ ಬಂದೆರಗುವುದು.


ಹೀಗೆ ಮೊದಲನೆಯ ವಿಪತ್ತು ಮುಗಿಯಿತು. ಇಗೋ, ಇನ್ನೆರಡು ವಿಪತ್ತುಗಳು ಬಂದೆರಗಲಿವೆ :


ಮತ್ತೊಬ್ಬ ದೇವದೂತನು ಆಕಾಶ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆ. ಸಕಲ ದೇಶ, ಭಾಷೆ, ಕುಲ, ಗೋತ್ರದ ಜನರಿಗೂ ಸಾರಬೇಕಾದ ಅಮರ ಸಂದೇಶ ಆತನಲ್ಲಿತ್ತು.


ಆ ಸುರುಳಿಯನ್ನು ನನ್ನೆದುರಿನಲ್ಲೆ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಬರೆದಿತ್ತು: ಅದು ಪ್ರಲಾಪ, ಶೋಕ, ಶಾಪ ಇವುಗಳ ಬರಹದಿಂದ ಕೂಡಿತ್ತು.


ಅನಂತರ ದೇವದೂತನೊಬ್ಬ ಸೂರ್ಯನ ಮೇಲೆ ನಿಂತಿರುವುದನ್ನು ಕಂಡೆ. ಆತನು ಗಟ್ಟಿಯಾದ ಧ್ವನಿಯಿಂದ ಮಧ್ಯಾಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಹೀಗೆ ಹೇಳಿದನು: “ದೇವರ ದೊಡ್ಡ ಔತಣಕ್ಕೆ ಕೂಡಿಬನ್ನಿ;


ಐದನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಆಕಾಶದಿಂದ ಭೂಮಿಗೆ ಬಿದ್ದಿದ್ದ ಒಂದು ನಕ್ಷತ್ರವನ್ನು ಕಂಡೆ. ಪಾತಾಳಕೂಪದ ಬೀಗದ ಕೈಯನ್ನು ಅವನಿಗೆ ಕೊಡಲಾಗಿತ್ತು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಭಜಿಸಿರಿ ಪ್ರಭುವನು ದೇವದೂತರುಗಳೇ I ಆತನ ಆಣತಿ ಪಾಲಿಪ ಪರಾಕ್ರಮಿಗಳೇ I ಆತನ ನುಡಿಯಂತೆಯೇ ನಡೆಯುವ ಜನಾಂಗಗಳೇ II


ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಬಳಿಕ ನಾನು, ದೇವರ ಸಾನ್ನಿಧ್ಯದಲ್ಲಿ ನಿಂತಿದ್ದ ಏಳು ದೇವದೂತರನ್ನು ಕಂಡೆ. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.


ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು