Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:2 - ಕನ್ನಡ ಸತ್ಯವೇದವು C.L. Bible (BSI)

2 ಅವನು ಆ ಕೂಪದ ಮುಚ್ಚಳವನ್ನು ತೆರೆದನು. ಅದರೊಳಗಿಂದ ದಟ್ಟಹೊಗೆ ದೊಡ್ಡ ಕುಲುಮೆ ಒಂದರಿಂದ ಬರುತ್ತಿರುವಂತೆ ಮೇಲೇರಿತು. ಇದರಿಂದಾಗಿ ಸೂರ್ಯನೂ ವಾಯುಮಂಡಲವೂ ಕಪ್ಪಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು; ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕತ್ತಲಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಂತರ ಆ ನಕ್ಷತ್ರವು ತಳವಿಲ್ಲದ ಆಳವಾದ ಕೂಪವನ್ನು ತೆರೆಯಿತು. ದೊಡ್ಡ ಕುಲುಮೆಯಿಂದ ಹೊಗೆಯು ಬರುವಂತೆ ಆ ಕೂಪದಿಂದ ಹೊಗೆ ಮೇಲಕ್ಕೆ ಬಂದಿತು. ಆ ಕೂಪದಿಂದ ಬಂದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆತನು ಆ ಪಾತಾಳವನ್ನು ತೆರೆಯಲು, ಅದರೊಳಗಿಂದ ಹೊಗೆಯು ಮಹಾ ಕುಲುಮೆಯಿಂದ ಬರುವ ಹೊಗೆಯಂತೆ ಏರಿತು. ಪಾತಾಳದ ಆ ಹೊಗೆಯಿಂದ ಸೂರ್ಯ ಮತ್ತು ಆಕಾಶಕ್ಕೆ ಕತ್ತಲು ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತ್ಯಾ ಚಿಕ್ಕಿನ್ ಪಾತಾಳ್ ಉಗಡಲ್ಲ್ಯಾ ತನ್ನಾ ಎಕ್ ಮೊಟ್ಯಾ ಪಂಪಾತ್ನಾ ಯೆಲ್ಯಾ ಸರ್ಕೊ ಡುಕೊಟ್ ಭಾಯ್ರ್ ಪಡ್ಲೊ; ಹ್ಯಾ ಪಾತಾಳಾತ್ಲ್ಯಾ ಡುಕ್ಟಾನ್ ದಿಸಾಚೊ ಉಜ್ವೊಡ್ ಅನಿ ಸಗ್ಳೊ ಮಳಬ್ ಕಾಳೊ ಹೊವ್ನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:2
16 ತಿಳಿವುಗಳ ಹೋಲಿಕೆ  

ಅವುಗಳ ಮುಂದೆ ಭೂಮಂಡಲ ಕಂಪಿಸುತ್ತದೆ, ಆಕಾಶಮಂಡಲ ನಡುಗುತ್ತದೆ. ಸೂರ್ಯಚಂದ್ರಗಳು ಮಂಕಾಗುತ್ತವೆ, ನಕ್ಷತ್ರಗಳು ಕಾಂತಿಗುಂದುತ್ತವೆ.


ಸೊದೋಮ್ - ಗೊಮೋರ ಹಾಗೂ ಆ ಬಯಲುಸೀಮೆಯತ್ತ ಅವನು ಕಣ್ಣುಹಾಯಿಸಿದಾಗ, ಇಗೋ, ಆ ಪ್ರದೇಶದಿಂದ ಹೊಗೆ, ದೊಡ್ಡ ಆವಿಗೆಯ ಹೊಗೆಯಂತೆ ಭುಗಿಲೇರುತ್ತಿತ್ತು.


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


ಎಸಗುವೆನು ಆಗಸದಲಿ ಅದ್ಭುತಗಳನು, ಮಾಡುವೆನು ಭುವಿಯಲಿ ಮಹತ್ಕಾರ್ಯಗಳನು; ಕಾಣುವುದಾಗ ಕಿಚ್ಚು, ಕಪ್ಪೊಗೆ, ನೆತ್ತರು,


ಭೂಮ್ಯಾಕಾಶಗಳಲ್ಲಿ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತಧಾರೆ, ಅಗ್ನಿಪ್ರಳಯ, ಧೂಮಕೇತು ಕಾಣಿಸುವಂತೆ ಮಾಡುವೆನು.


ಪುರದ್ವಾರವೇ, ಗೋಳಾಡು; ಪಟ್ಟಣವೇ, ಬೊಬ್ಬೆಯಿಡು, ಫಿಲಿಷ್ಟಿಯವೇ, ಕರಗಿಹೋಗು, ಉತ್ತರದಿಂದ ಬರುತ್ತಿದೆ ಧೂಮಧೂಳಿ ಆ ದಂಡಿನಲ್ಲಿಲ್ಲ ನೋಡು, ಯಾವ ಹೇಡಿ.


ಅಂಥವರ ನರಳಾಟದ ಹೊಗೆ ಸತತ ಮೇಲೇರುತ್ತಿರುತ್ತದೆ. ಮೃಗಕ್ಕೂ ಅದರ ವಿಗ್ರಹಕ್ಕೂ ಪೂಜೆಸಲ್ಲಿಸುವವರು ಮತ್ತು ಅದರ ಹೆಸರನ್ನು ಸೂಚಿಸುವ ಹಚ್ಚೆಯನ್ನು ಚುಚ್ಚಿಸಿಕೊಂಡವರು ಹಗಲಿರುಳೂ ಬಿಡುವಿಲ್ಲದೆ ಸಂಕಟಪಡುವರು,” ಎಂದು ಹೇಳಿದನು.


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ಹೊತ್ತು ಮುಳುಗಿ ಕಾರ್ಗತ್ತಲಾದಾಗ ಇಗೋ, ಹೊಗೆಯಾಡುವ ಒಲೆಯೊಂದು ಹಾಗು ಉರಿಯುವ ದೀವಿಟಿಗೆಯೊಂದು ಕಾಣಿಸಿಕೊಂಡು ಆ ತುಂಡುಗಳ ನಡುವೆ ಹಾದುಹೋದವು.


ನಾಲ್ಕನೆಯ ದೇವದೂತನು ತುತೂರಿಯನ್ನು ಊದಿದನು. ಸೂರ್ಯಚಂದ್ರ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗಕ್ಕೆ ಧಕ್ಕೆ ಉಂಟಾಯಿತು. ಅವುಗಳ ಮೂರನೆಯ ಒಂದು ಭಾಗ ಕಾಂತಿಹೀನವಾಯಿತು. ಇದರಿಂದಾಗಿ ಹಗಲಿನಲ್ಲೂ ರಾತ್ರಿಯಲ್ಲೂ ಮೂರನೆಯ ಒಂದು ಭಾಗದಷ್ಟು ಬೆಳಕು ಕಡಿಮೆಯಾಯಿತು.


ಹೀಗೆ ಕುದುರೆಗಳನ್ನೂ ಅವುಗಳ ಮೇಲೆ ಕುಳಿತ ಸವಾರರನ್ನೂ ನಾನು ದರ್ಶನದಲ್ಲಿ ಕಂಡೆ. ಆ ಸವಾರರು ಬೆಂಕಿಯ, ನೀಲಮಣಿಯ ಹಾಗೂ ಗಂಧಕ ವರ್ಣಗಳ ಕವಚಗಳನ್ನು ಧರಿಸಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಇದ್ದವು. ಅವುಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬರುತ್ತಿದ್ದವು.


ಯಾರು ಅಡ್ಡಬಿದ್ದು ಆರಾಧಿಸುವುದಿಲ್ಲವೋ ಅಂಥವರನ್ನು ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು,” ಎಂದು ಸಾರಿದನು.


ಐದನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಆಕಾಶದಿಂದ ಭೂಮಿಗೆ ಬಿದ್ದಿದ್ದ ಒಂದು ನಕ್ಷತ್ರವನ್ನು ಕಂಡೆ. ಪಾತಾಳಕೂಪದ ಬೀಗದ ಕೈಯನ್ನು ಅವನಿಗೆ ಕೊಡಲಾಗಿತ್ತು.


ಪಾತಾಳಕೂಪದ ದೂತನೇ ಅವುಗಳನ್ನು ಆಳುವ ಅರಸು. ಅವನಿಗೆ ಹಿಬ್ರಿಯ ಭಾಷೆಯಲ್ಲಿ, ‘ಅಬದ್ದೋನ್’ ಎಂದೂ ಗ್ರೀಕ್ ಭಾಷೆಯಲ್ಲಿ, ‘ಅಪೊಲ್ಲುವೋನ್’ ಎಂದೂ ಹೆಸರು.


ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಸುರಿದನು. ಕೂಡಲೇ ಆ ಮೃಗ ರಾಜ್ಯದ ಮೇಲೆ ಅಂಧಕಾರ ಕವಿಯಿತು. ಜನರು ತಮಗೆ ಬಂದೆರಗಿದ ಬಾಧೆಯನ್ನು ತಾಳಲಾರದೆ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು