Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:6 - ಕನ್ನಡ ಸತ್ಯವೇದವು C.L. Bible (BSI)

6 ಆಂಥ ದಿನಗಳಲ್ಲಿ ಮನುಷ್ಯರು ಮರಣವನ್ನು ಅಪೇಕ್ಷಿಸುವರು. ಆದರೆ ಅದು ಅವರಿಗೆ ಪ್ರಾಪ್ತವಾಗುವುದಿಲ್ಲ. ಸತ್ತರೆ ಸಾಕೆಂದು ಬಯಸುವರು; ಪ್ರಯತ್ನಿಸುವರು. ಆದರೆ ಮೃತ್ಯು ಅವರಿಂದ ದೂರ ಸರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವದಿಲ್ಲ; ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ದಿನಗಳಲ್ಲಿ ಜನರು ಸಾಯುವುದಕ್ಕೆ ಮಾರ್ಗವನ್ನು ಹುಡುಕಿದರೂ ಅವರಿಗೆ ಸಿಕ್ಕುವುದಿಲ್ಲ. ಅವರು ಮರಣವನ್ನು ಬಯಸಿದರೂ ಮರಣವು ಅವರಿಗೆ ಮರೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ದಿನಗಳಲ್ಲಿ ಜನರು ಮರಣವನ್ನು ಹುಡುಕುವರು, ಆದರೆ ಅದನ್ನು ಯಾವ ರೀತಿಯಿಂದಲೂ ಕಾಣರು; ಅವರು ಸಾಯಲು ಹಾರೈಸುವರು, ಆದರೆ ಮರಣವು ಅವರಿಂದ ಓಡಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತ್ಯಾ ಪಾಚ್ ಮ್ಹಯಿನ್ಯಾತ್ನಿ ತೆನಿ ಮರಾನ್ ಮಾಗ್ತ್ಯಾತ್, ಖರೆ ತೆ ತೆಂಕಾ ಯೆಯ್ನಾ; ತೆನಿ ಮರಾನ್ ಯೆಲ್ಯಾರ್ ಫಿರೆ ಮನ್‍ತ್ಯಾತ್, ಖರೆ ಮರಾನ್ ತೆಂಚೆಕ್ನಾ ಧುರ್ ಪಳುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:6
9 ತಿಳಿವುಗಳ ಹೋಲಿಕೆ  

ಈ ಕೆಟ್ಟ ವಂಶದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ಅದೇ ಸಮಯದಲ್ಲಿ ‘ಪರ್ವತಗಳೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ, ನಮ್ಮನ್ನು ನುಂಗಿಬಿಡಿ,’ ಎಂದು ಕೂಗಿಕೊಳ್ಳುವರು.


ಅವರು ಆ ಬೆಟ್ಟಗಳನ್ನೂ ಬಂಡೆಗಳನ್ನೂ ಉದ್ದೇಶಿಸಿ, “ನಮ್ಮ ಮೇಲೆ ಬೀಳಿ; ಸಿಂಹಾಸನದಲ್ಲಿ ಆಸೀನರಾಗಿರುವವರ ಸಮ್ಮುಖದಿಂದಲೂ ಯಜ್ಞದ ಕುರಿಮರಿಯಾದಾತನ ಕೋಪಾಗ್ನಿಯಿಂದಲೂ ನಮ್ಮನ್ನು ಮರೆಮಾಡಿ;


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”


ಆಗ ಅವರು, “ನೀನು ಮನಸ್ಸುಮಾಡಿ ಹತ್ತಿರ ಬಂದು ನನ್ನನ್ನು ಕೊಂದುಹಾಕು; ಏಕೆಂದರೆ, ನನ್ನಲ್ಲಿ ಇನ್ನೂ ಪೂರ್ಣಶಕ್ತಿಯಿದ್ದರೂ ಪ್ರಾಣಸಂಕಟಕ್ಕೆ ಸಿಕ್ಕಿಕೊಂಡಿದ್ದೇನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು