Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:1 - ಕನ್ನಡ ಸತ್ಯವೇದವು C.L. Bible (BSI)

1 ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕೂತು ಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಬಿಟ್ಟಿಯಾಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:1
38 ತಿಳಿವುಗಳ ಹೋಲಿಕೆ  

ನಿನ್ನ ಪುರದ್ವಾರಗಳಲ್ಲಿ ದುಃಖ ಪ್ರಲಾಪ ತುಂಬಿರುವುದು. ನೀನು ನಗ್ನಳಂತೆ ನೆಲದ ಮೇಲೆ ಕುಳಿತುಬಿಡುವೆ.


ದಂಗೆಯೆಬ್ಬಿಸುತ್ತಾ ಬಂದಿದ್ದಾರೆ; ಇದಲ್ಲದೆ ಜೆರುಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ನದಿಯಾಚೆಯ ಎಲ್ಲ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.


ಯೂಫ್ರೆಟಿಸ್ ನದಿ ಮೊದಲ್ಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟಿಯರ ದೇಶಗಳವರೆಗೂ ಇರುವ ಎಲ್ಲ ರಾಜ್ಯಗಳ ಪ್ರಜೆಗಳನ್ನು ಸೊಲೊಮೋನನು ಆಳುತ್ತಿದ್ದನು. ಆ ದೇಶದವರು, ತಮ್ಮ ಜೀವಮಾನದಲ್ಲೆಲ್ಲಾ ಅಧೀನರಾಗಿದ್ದು, ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.


ಅಂಜಬೇಡ, ನಿನಗಾಗುವುದಿಲ್ಲ ಅವಮಾನ ನಾಚಬೇಡ, ನಿನಗಾಗದು ಆಶಾಭಂಗ. ಮರೆವೆ ಯೌವನದಲ್ಲಿ ನಿನಗಾದ ಅವಮಾನವನು ವೈಧವ್ಯದಲ್ಲಾದ ನಿಂದೆ ನೆನಪಿಗೆ ಬಾರದಿನ್ನು.


“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ.


ಊರಿಗೆ ಊರೇ ಆರ್ಭಟಿಸುತ್ತಿರುವಂತಿದೆ ! ಯುದ್ಧದಲ್ಲಿ ಸತ್ತ ನಿಮ್ಮ ಯೋಧರೆಲ್ಲ ಕಾದಾಟದಿಂದ ಮಡಿದವರಲ್ಲ.


ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ನಾಡಿನಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆ ಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿಬಂಗಾರವನ್ನು ನಾಡಿನ ಜನರಿಂದ ಕೂಡಿಸಿ ಫರೋಹನಿಗೆ ತಂದೊಪ್ಪಿಸಿದನು.


ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


ಆಗ ಸಮುದ್ರದ ಸುತ್ತುಮುತ್ತಲಿನ ಎಲ್ಲ ಒಡೆಯರು ತಮ್ಮ ಸಿಂಹಾಸನಗಳಿಂದಿಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ಕಸೂತಿ ವಸ್ತ್ರಗಳನ್ನು ಕಿತ್ತೆಸೆದು, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಕ್ಕರಿಸಿ, ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿಬೆರಗಾಗುವರು.


ಅಕಟಕಟಾ! ಎಷ್ಟು ಮಸುಕಾಗಿದೆ ಬಂಗಾರ ಎಷ್ಟು ಕಾಂತಿಹೀನವಾಗಿಬಿಟ್ಟಿವೆ ಅಪ್ಪಟ ಚಿನ್ನ! ಪವಿತ್ರಾಲಯದ ಕಲ್ಲುಗಳೂ ಬಿದ್ದಿವೆ ಚೆಲ್ಲಾಪಿಲ್ಲಿಯಾಗಿ ಬೀದಿಬೀದಿಗಳ ಬದಿಯಲ್ಲಿ ರಾಶಿರಾಶಿಯಾಗಿ!


ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸೊಂಟಕ್ಕೆ ಸುತ್ತಿಕೊಂಡು ಕುಕ್ಕರಿಸಿಹರು ಸಿಯೋನ್ ನಗರಿಯ ಪ್ರಮುಖರು ತಲೆ ತಗ್ಗಿಸಿಹರು ಜೆರುಸಲೇಮಿನ ಯುವತಿಯರು.


ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !


ಲೋಕವನ್ನೆಲ್ಲ ಬಡಿದ ಕೊಡಲಿಯಂಥ ಬಾಬಿಲೋನ್ ಈಗ ಮುರಿದು ಚೂರುಚೂರಾಗಿದೆ! ಆ ರಾಜ್ಯವು ರಾಷ್ಟ್ರಗಳ ನಡುವೆ ಹಾಳಾಗಿ ಬಿದ್ದಿದೆ.


ಇವರಿಗೂ ಇವರ ಜನರಿಗೂ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, “ಬಾಬಿಲೋನಿಯರಿಗೆ ಅಧೀನರಾಗಿರಲು ಹೆದರಬೇಡಿ, ಬಾಬಿಲೋನಿನ ಅರಸನಿಗೆ ಅಧೀನರಾಗಿ ಅಲ್ಲಿಯೇ ವಾಸಮಾಡಿ. ಆಗ ನಿಮಗೆ ಒಳ್ಳೆಯದಾಗುವುದು.


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


ಖೈದಿಯಾಗಿ ಬಿದ್ದಿರುವ ಸಿಯೋನ್ ಕನ್ಯೆಯೆ, ಕಿತ್ತುಬಿಡು ಬಂಧನವನು ನಿನ್ನ ಕುತ್ತಿಗೆಯಿಂದ ಸಿಂಹಾಸನಾರೂಢಳಾಗು ಜೆರುಸಲೇಮೆ ಝಾಡಿಸಿ ಎದ್ದುನಿಂತು ದುಂಬುಧೂಳಿನಿಂದ!


ಮುಂಜಾನೆಯ ನಕ್ಷತ್ರವೆ, ಉದಯ ಕುಮಾರನೆ, ಆಗಸದಿಂದ ಹೇಗೆ ಬಿದ್ದೆ? ರಾಷ್ಟ್ರಗಳನ್ನು ಗೆದ್ದ ನೀನು, ನೆಲಕ್ಕೆ ಅದು ಹೇಗೆ ಉರುಳಿದೆ?


ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ I ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ I ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ II


ನಮ್ಮ ಪಾಪದ ನಿಮಿತ್ತ ಅಧೀನರಾಗಿಸಿದಿರಿ ಅನ್ಯರಾಜರಿಗೆ ಈ ನಾಡಿನ ಸಿರಿಸಂಪತ್ತು ಹರಿದುಹೋಗುತ್ತಿದೆ ಆ ಅರಸರಿಗೆ ನಮ್ಮೊಡಲು, ದನಕರುಗಳು, ಈಡಾಗಿವೆ ಅವರ ದಬ್ಬಾಳಿಕೆಗೆ ಅಕಟಕಟ, ನಾವು ಸಿಕ್ಕಿಕೊಂಡಿದ್ದೇವೆ, ಮಹಾಸಂಕಟಕೆ!”


ಮತ್ತೆ ಕೆಲವರು “ಸರಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಮ್ಮ ಹೊಲ, ತೋಟಗಳ ಮೇಲೆ ಸಾಲ ತೆಗೆದುಕೊಳ್ಳಬೇಕಾಯಿತು;


ಫರೋಹ ನೆಕೋವನು ಇವನನ್ನು ಜೆರುಸಲೇಮಿನಲ್ಲಿ ಬಹುದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ದಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.


ತೆರೆದಿಹನು ಸ್ವಾಮಿ ಸರ್ವೇಶ್ವರ ನನ್ನ ಕಿವಿಯನು ಎಂದೇ ವಿಮುಖನಾಗಲಿಲ್ಲ ನಾನು, ಪ್ರತಿಭಟಿಸಲಿಲ್ಲ ಆತನನು.


ಅವನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟರ ದೇಶಗಳವರೆಗೂ ಇರುವ ಎಲ್ಲ ರಾಜರನ್ನು ಆಳುತ್ತಿದ್ದನು.


ಆಗ ನೀನು ಹೀಗೆಂದುಕೊಳ್ಳುವೆ ಮನದೊಳು : “ನಾನೋ ಮಕ್ಕಳನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇಷ್ಟೊಂದು ಮಕ್ಕಳನು ಕೊಟ್ಟವರಾರು ನನಗೆ? ಇವರನ್ನು ಪೋಷಿಸಿದವರಾರು ಹೀಗೆ? ಇವರೆಲ್ಲಿದ್ದರು? ನಾನೋ ಒಬ್ಬಂಟಿಗಳಾಗಿದ್ದೆ!”


ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ.


“ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.


ಸರ್ವೇಶ್ವರನಾದ ದೇವರು ಹೀಗೆಂದರು: “ನಾನಾ ದೇಶಗಳ ನಡುವೆ, ನಾನಾ ಜನಾಂಗಗಳ ಮಧ್ಯೆ ನಾನು ಸ್ಥಾಪಿಸಿದ ಜೆರುಸಲೇಮ್ ಪಟ್ಟಣ ಈ ಮನೆ.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: ‘ನಾನು ಜೆರುಸಲೇಮಿಗು ಹಾಗುಜುದೇಯದ ಎಲ್ಲ ಊರುಗಳಿಗು ಬರಮಾಡಿದ ಕೇಡನ್ನು ನೀವೇ ನೋಡಿದ್ದೀರಿ.


ಆದಕಾರಣ, ನನ್ನ ರೌದ್ರಕೋಪಾಗ್ನಿ ಸುರಿದು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಧಗಧಗಿಸಿತು. ಅವು ಈಗಲೂ ಹಾಳುಪಾಳಾಗಿವೆ.’


“ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು.


“ನರಪುತ್ರನೇ, ಜೆರುಸಲೇಮಿನ ವಿಷಯವಾಗಿ ಟೈರ್ ನಗರವು ‘ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿದ್ದಿದೆ; ಜೆರುಸಲೇಮ್ ಹಾಳಾದ ಕಾರಣ ನಾನು ವೃದ್ಧಿಗೊಳ್ಳುವೆನು’ ಎಂದುಕೊಂಡಿತು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು