Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:14 - ಕನ್ನಡ ಸತ್ಯವೇದವು C.L. Bible (BSI)

14 “ನನ್ನ ದ್ರೋಹಗಳನ್ನು ನನಗೆ ಬಿಗಿದಿದ್ದಾನೆ ನೊಗದ ಕಣ್ಣುಗಳಂತೆ. ಅವು ಹುರಿಗೊಂಡು, ಸುತ್ತಿಕೊಂಡು ಕುತ್ತಿಗೆಗೆ, ನನ್ನ ಶಕ್ತಿಯನ್ನು ಹೀರುತ್ತಿವೆ. ಸಿಕ್ಕಿಸಿದನಲ್ಲಾ ಸ್ವಾಮಿ, ನನ್ನಿಂದ ಎದುರಿಸಲಾಗದಂಥವರ ಕೈಗೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನ ಕೈ ನನ್ನ ದ್ರೋಹಗಳನ್ನು ನೊಗದ ಕಣ್ಣಿಗಳನ್ನೋ ಎಂಬಂತೆ ನನಗೆ ಬಿಗಿದಿದೆ. ಅವು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನನ್ನ ಪಾಪಗಳನ್ನೆಲ್ಲ ಒಟ್ಟುಗೂಡಿಸಿ ನೊಗದಂತೆ ಕಟ್ಟಲಾಗಿದೆ. ಯೆಹೋವನು ತನ್ನ ಕೈಗಳಿಂದ ನನ್ನ ಪಾಪಗಳನ್ನು ಒಟ್ಟಿಗೆ ಕಟ್ಟಿದ್ದಾನೆ. ಯೆಹೋವನ ಆ ನೊಗವು ನನ್ನ ಕತ್ತಿನ ಮೇಲೆ ಇದೆ. ಯೆಹೋವನು ನನ್ನನ್ನು ದುರ್ಬಲಗೊಳಿಸಿದ್ದಾನೆ. ನಾನು ಎದುರಿಸಲಾಗದ ಜನರ ಕೈಗೆ ಯೆಹೋವನು ನನ್ನನ್ನು ಒಪ್ಪಿಸಿಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಪಾಪಗಳು ನನಗೆ ನೊಗವಾಗಿ, ನನ್ನ ಕುತ್ತಿಗೆಯ ಮೇಲೆ ಅವು ಬಂದಿವೆ. ಕರ್ತದೇವರು ನನ್ನ ಶಕ್ತಿಯನ್ನು ಕುಂದಿಸಿದ್ದಾರೆ. ಯೆಹೋವ ದೇವರು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ, ಅವರನ್ನು ನಾನು ಎದುರಿಸಲಾರದಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:14
21 ತಿಳಿವುಗಳ ಹೋಲಿಕೆ  

“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;


ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ಸುಲಿಗೆಗಾಗಿ ನಿನ್ನನ್ನು ಮ್ಲೇಚ್ಛರಿಗೆ ವಶಪಡಿಸುವೆನು. ಜನಾಂಗಗಳಿಂದ ಕಿತ್ತು, ದೇಶಗಳಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರ ವಶವಾಗುವಂತೆ ಮಾಡುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿನ್ನುವರು; ನಿನ್ನ ಹಾಲನ್ನು ಕುಡಿಯುವರು,


ಏಕೆಂದರೆ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತಿವು: ಈ ಎಲ್ಲ ರಾಷ್ಟ್ರಗಳು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಗೆ ಸೇವೆಮಾಡಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ. ಅವು ಅವನಿಗೆ ಸೇವೆ ಸಲ್ಲಿಸೇತೀರಬೇಕು; ಕಾಡುಮೃಗಗಳು ಕೂಡ ಸೇವೆಸಲ್ಲಿಸುವಂತೆ ಅವನಿಗೆ ಅವುಗಳನ್ನು ಒಪ್ಪಿಸಿದ್ದೇನೆ, ಎಂದು ಹೇಳು.”


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ ಯಾರ ಬಗ್ಗೆ ಅಸಹ್ಯಪಡುತ್ತಿಯೋ


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.


ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.


ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.


ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರುವ ತನಕ ಅಲ್ಲೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಸರ್ವೇಶ್ವರನ ನುಡಿ’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.


ಜುದೇಯದ ಅರಸನಾದ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.


“ಆದರೆ ಯಾವುದಾದರು ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲುಕೊಡಲು ಒಪ್ಪದೆಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೆ ಅದನ್ನು ನಿರ್ಮೂಲಮಾಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.


“ ನೀನು ಹೋಗಿ ಹನನ್ಯನಿಗೆ: ‘ಸರ್ವೇಶ್ವರ ಇಂತೆನ್ನುತ್ತಾರೆ - ನೀನು ಮರದ ನೊಗಗಳನ್ನು ಮುರಿದುಬಿಟ್ಟಿರುವೆ. ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಮಾಡು.


ಜುದೇಯದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಸರ್ವೇಶ್ವರನೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ಆಕ್ರಮಿಸುವನು.


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತೇನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು