Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:17 - ಕನ್ನಡ ಸತ್ಯವೇದವು C.L. Bible (BSI)

17 ಸಿಯೋನ್ ನಗರಿ ಕೈಚಾಚಿ ಕೂಗಿಕೊಂಡರೂ ಸಂತೈಸುವವರಾರೂ ಇಲ್ಲ. ನೆರೆಹೊರೆಯವರೇ ಆಕೆಯ ವಿರೋಧಿಗಳಾಗಲೆಂದು ಸರ್ವೇಶ್ವರ ತೀರ್ಮಾನಿಸಿದ್ದಾನಲ್ಲಾ ! ಅವರ ನಡುವೆ ಹೊಲೆಯಾದ ಹೆಣ್ಣಿನಂತೆ ಜೆರುಸಲೇಮ್ ಬಿದ್ದಿದ್ದಾಳಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಚೀಯೋನು ತನ್ನ ಕೈಗಳನ್ನು ಚಾಚಿದಳು. ಅವಳನ್ನು ಸಂತೈಸುವವರೇ ಇರಲಿಲ್ಲ. ಯಾಕೋಬನಿಗೆ ವೈರಿಗಳಾಗಬೇಕೆಂದು ಅವನ ನೆರೆಹೊರೆಯವರಿಗೆ ಯೆಹೋವನು ಆಜ್ಞಾಪಿಸಿದ್ದನು. ಜೆರುಸಲೇಮ್ ಒಂದು ಹೊಲಸು ವಸ್ತುವಾಗಿದ್ದಾಳೆ. ಆ ವೈರಿಗಳ ಮಧ್ಯದಲ್ಲಿ ಅವಳು ಒಂದು ಹೊಲಸು ವಸ್ತುವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ. ಅವಳನ್ನು ಆದರಿಸುವವನು ಒಬ್ಬನೂ ಇಲ್ಲ. ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ. ಯೆರೂಸಲೇಮ್ ಅವರ ಮಧ್ಯದಲ್ಲಿ ಅಶುದ್ಧ ವಸ್ತುವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:17
29 ತಿಳಿವುಗಳ ಹೋಲಿಕೆ  

ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.


“ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು.


“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.


ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ದಂಗೆ ಎದ್ದನು. ಇವನು‍ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದನು. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದನು.


ಇಸ್ರಯೇಲನ್ನು ಕಬಳಿಸಲಾಗಿದೆ. ಈಗದು ಅನ್ಯಜನಾಂಗಗಳ ಮಧ್ಯೆ ಯಾರಿಗೂ ಬೇಡವಾದ ಮಡಕೆಯಂತಿದೆ.


“ನರಪುತ್ರನೇ, ಇಸ್ರಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು. ಅವರ ನಡತೆ ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.


ಅವರನ್ನು ನೋಡುವವರೂ “ತೊಲಗಿರಿ, ನೀವು ಅಶುದ್ಧರು ನಡೆಯಿರಿ, ನಡೆಯಿರಿ, ಮುಟ್ಟಬೇಡಿ” ಎಂದು ಕೂಗುತ್ತಿರುವರು. ಅವರು ಓಡಿ ಅನ್ಯನಾಡುಗಳಲ್ಲಿ ಅಲೆಯುತ್ತಿರಲು “ಇವರು ಇನ್ನು ಇಲ್ಲಿ ತಂಗಕೂಡದು” ಎನ್ನುತಿಹರು ಅಲ್ಲಿನ ನಾಡಿಗರು.


ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.


ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !


ಸರ್ವೇಶ್ವರನಾದ ನನ್ನ ಗುರಿಯನ್ನು ಗಮನಿಸಿರಿ - ನಾನು ಅಪ್ಪಣೆಕೊಟ್ಟು, ಶತ್ರುಗಳು ಈ ನಗರಕ್ಕೆ ಮತ್ತೆ ಬರುವಂತೆ ಮಾಡುವೆನು. ಅವರು ಇದರ ವಿರುದ್ಧ ಯುದ್ಧಮಾಡಿ, ಇದನ್ನು ಆಕ್ರಮಿಸಿಕೊಂಡು, ಬೆಂಕಿಯಿಂದ ಸುಟ್ಟುಹಾಕುವರು. ನಾನು ಜುದೇಯದ ನಗರಗಳನ್ನು ನಿರ್ಜನವಾದ ಪಾಳುಭೂಮಿಯನ್ನಾಗಿಸುವೆನು.


ಈ ನಾಡಿನಲ್ಲಿ ದೊಡ್ಡವರು ಹಾಗುಚಿಕ್ಕವರು ಸಾಯುವರು. ಅವರನ್ನು ಯಾರು ಹೂಣಿಡುವುದಿಲ್ಲ. ಅವರಿಗಾಗಿ ಯಾರೂ ಗೋಳಾಡುವುದಿಲ್ಲ. ದೇಹವನ್ನು ಹುಣ್ಣಾಗಿಸಿಕೊಳ್ಳುವುದಿಲ್ಲ. ತಲೆ ಬೋಳಿಸಿಕೊಳ್ಳುವುದಿಲ್ಲ.


ವೈರಿಗಳಾದ ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರ ಎದುರಿಗೆ ಹಾಗೂ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು. ಪ್ರತಿಯೊಬ್ಬನೂ ತನಗೆ ಇಷ್ಟಬಂದ ಸ್ಥಳದಲ್ಲೇ ಮೇಯಿಸಿಬಿಡುವನು.


ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ


ಬಳಿಕ ಸೊಲೊಮೋನನು ಇಸ್ರಯೇಲರೆಲ್ಲರ ಎದುರಿನಲ್ಲಿ ಸರ್ವೇಶ್ವರನ ಬಲಿಪೀಠದ ಮುಂದೆ ನಿಂತು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು:


ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.


ನನ್ನ ಸೊತ್ತಾದ ಜನತೆ ನನ್ನ ದೃಷ್ಟಿಗೆ ಚಿತ್ರವರ್ಣದ ಪಕ್ಷಿಯಂತೆ ಅದರ ಸುತ್ತ ರಣಹದ್ದುಗಳ ಕೂಟ ಸೇರಿದೆ ಕಾಡುಮೃಗಗಳನ್ನೆಲ್ಲ ಕರೆದುತನ್ನಿ ಅದನ್ನು ತಿಂದುಬಿಡಲಿಕ್ಕೆ.


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


“ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ.


“ಜೆರುಸಲೇಮೆ, ನಿನಗೆ ಕರುಣೆ ತೋರುವವರಾರು? ನಿನ್ನ ಪರಿಸ್ಥಿತಿಯನ್ನು ಕಂಡು ಪ್ರಲಾಪಿಸುವವರಾರು? ತಿರುಗಿ ನೋಡಿ ನಿನ್ನ ಕ್ಷೇಮವನ್ನು ವಿಚಾರಿಸುವವರಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು