Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:19 - ಕನ್ನಡ ಸತ್ಯವೇದವು C.L. Bible (BSI)

19 “ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ನನ್ನ ಪ್ರಿಯತಮರನ್ನು ಕೂಗಿ ಕರೆದೆ. ಆದರೆ ಅವರು ನನಗೆ ಮೋಸ ಮಾಡಿದರು. ನನ್ನ ಯಾಜಕರು ಮತ್ತು ಹಿರಿಯರು ನಗರದಲ್ಲಿ ಸತ್ತುಹೋದರು. ಅವರು ತಮಗಾಗಿ ಆಹಾರವನ್ನು ಹುಡುಕುತ್ತಿದ್ದರು. ಅವರು ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳ ಬಯಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ನನ್ನ ಪ್ರಿಯರನ್ನು ಕರೆದೆನು. ಆದರೆ ಅವರು ನನ್ನನ್ನು ಮೋಸಗೊಳಿಸಿದರು. ನನ್ನ ಯಾಜಕರು, ನನ್ನ ಹಿರಿಯರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ರೊಟ್ಟಿಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:19
15 ತಿಳಿವುಗಳ ಹೋಲಿಕೆ  

ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?


ಅಡ್ಡಾಡುತ್ತಿರುವರು ಆಕೆಯ ಜನರು ಅನ್ನಕ್ಕಾಗಿ ಮಾರುತಿರುವರು ಅಮೂಲ್ಯವಾದುದನ್ನೆ ಆಹಾರಕ್ಕಾಗಿ. “ಸರ್ವೇಶ್ವರಾ, ನೋಡು, ಕಟಾಕ್ಷಿಸು, ನನ್ನ ತುಚ್ಛತೆಯನ್ನು” ಎಂದು ಹೇಳಿ ಆಕೆ ಪ್ರಲಾಪಿಸುತ್ತಿರುವಳು.


ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !


ನಮ್ಮ ನಾಯಕರ ಕೈಗಳನ್ನು ನೇತುಹಾಕಿದ್ದಾರೆ ಗಲ್ಲಿಗೆ ನಮ್ಮ ಹಿರಿಯರನ್ನು ಗುರಿಪಡಿಸಿದ್ದಾರೆ ಮಾನಭಂಗಕ್ಕೆ.


ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.


ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನು ಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ.


“ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!


ಎಲೈ ಜೆರುಸಲೇಮ್, ಸೂರೆಯಾಗುವಾಗ ಏನು ಮಾಡುವೆ? ಪಟ್ಟದ ಬಟ್ಟೆಗಳನ್ನು ಉಟ್ಟುಕೊಂಡು ಚಿನ್ನದ ಒಡವೆಗಳನ್ನು ತೊಟ್ಟುಕೊಂಡು ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೆ ಏನು ಪ್ರಯೋಜನ? ಎಲ್ಲವೂ ವ್ಯರ್ಥ ! ನಿನ್ನ ಮಿಂಡರೇ ನಿನ್ನನ್ನು ತಿರಸ್ಕರಿಸಿ ನಿನ್ನ ಪ್ರಾಣಹುಡುಕುವರು.


ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು