Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:22 - ಕನ್ನಡ ಸತ್ಯವೇದವು C.L. Bible (BSI)

22 “ಅವರು ಗೈದ ಕೆಡುಕೆಲ್ಲಾ ಬಟ್ಟಬಯಲಾಗಲಿ ನಿನ್ನ ದೃಷ್ಟಿಗೆ. ನನ್ನ ದ್ರೋಹಕ್ಕೆ ಪ್ರತಿಯಾಗಿ ನನಗೆ ಮಾಡಿರುವಂತೆ ನೀ ಮಾಡು ಅವರಿಗೆ. ನನ್ನ ನರಳಾಟ ಹೆಚ್ಚಿದೆ; ನನ್ನ ಎದೆ ಕುಂದಿಹೋಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ನನ್ನ ಶತ್ರುಗಳು ಎಷ್ಟು ದುಷ್ಟರಾಗಿದ್ದಾರೆ ನೋಡು. ನನ್ನ ಎಲ್ಲ ಪಾಪಗಳ ನಿಮಿತ್ತ ನೀನು ನನಗೆ ಮಾಡಿದಂತೆ ಅವರಿಗೂ ಮಾಡಲು ನಿನಗೆ ಸಾಧ್ಯವಾಗುವುದು. ನಾನು ಪದೇಪದೇ ನರಳಾಡುತ್ತಿರುವುದರಿಂದ ನೀನು ಇದನ್ನು ಮಾಡಬೇಕು. ನನ್ನ ಹೃದಯವು ಅಸ್ವಸ್ಥಗೊಂಡಿರುವುದರಿಂದ ನೀನು ಇದನ್ನು ಮಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರ ಎಲ್ಲಾ ಕೆಟ್ಟತನವು ನಿನ್ನ ಮುಂದೆ ಇರಲಿ. ನನ್ನ ಎಲ್ಲಾ ದ್ರೋಹಗಳ ನಿಮಿತ್ತ, ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು. ಏಕೆಂದರೆ ನನ್ನ ನರಳಾಟವು ಅನೇಕವಾಗಿವೆ. ನನ್ನ ಹೃದಯವು ಮೂರ್ಛೆಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:22
16 ತಿಳಿವುಗಳ ಹೋಲಿಕೆ  

ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.


ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


ಆದುದರಿಂದ ನಿಮಗಾಗಿ ನಾನು ಸಹಿಸುತ್ತಿರುವ ಸಂಕಟಗಳನ್ನು ನೆನೆದು ಎದೆಗುಂದದಿರಿ. ಇದೆಲ್ಲವೂ ನಿಮ್ಮ ಯಶಸ್ವಿಗಾಗಿಯೇ ಎಂಬುದನ್ನು ಮರೆಯದಿರಿ.


ಹಸಿಮರಕ್ಕೇ ಇಷ್ಟೆಲ್ಲಾ ಮಾಡಿದರೆ ಒಣಮರಕ್ಕಾಗುವ ಗತಿಯಾದರೂ ಏನು!” ಎಂದರು.


ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.


“ಆಕಾಶದಿಂದ ಆತ ಸುರಿಸಿದ್ದಾನೆ ಅಗ್ನಿಯನ್ನೆ ಅದು ದಹಿಸುತ್ತಿದೆ ನನ್ನೊಳಗಿನ ಎಲುಬುಗಳನ್ನೆ ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ ಅದು ನನ್ನನ್ನೆಳೆಯುತ್ತಿದೆ ನೆಲಕ್ಕೆ ಹಾಳುಬಿದ್ದ ನಾನು ಸದಾ ಬಳಲುತ್ತಿದ್ದೇನೆ.”


‘ನಮ್ಮ ಪ್ರಾಣವನ್ನು ಹಿಂಡಿದ ದೋಷ ಬಾಬಿಲೋನಿಗೆ ತಟ್ಟಲಿ’ ಎನ್ನುತ್ತದೆ ಸಿಯೋನ್. ‘ನಮ್ಮ ರಕ್ತವನ್ನು ಸುರಿಸಿದ ಅಪರಾಧ ಅದರ ಕಸ್ದೀಯರಿಗೆ ಬಡಿಯಲಿ!’ ಎನ್ನುತ್ತದೆ ಜೆರುಸಲೇಮ್.


ಸರ್ವೇಶ್ವರಾ, ನನ್ನನ್ನು ಕೊಲ್ಲಲು ಅವರು ಮಾಡಿಕೊಂಡಿರುವ ಸಂಚು ನಿಮಗೆ ತಿಳಿದಿದೆ. ಅವರ ಅಪರಾಧವನ್ನು ಕ್ಷಮಿಸಬೇಡಿ, ಅವರ ಪಾಪವನ್ನು ಅಳಿಸಬೇಡಿ, ಅದು ನಿಮ್ಮ ಕಣ್ಣೆದುರಿಗೇ ಇರಲಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪ ವ್ಯಕ್ತವಾಗುವಾಗ ಅವರಿಗೆ ತಕ್ಕುದನ್ನು ಮಾಡಿ.”


ಸರ್ವೇಶ್ವರಾ, ನಿಮ್ಮನ್ನು ಅರಿತುಕೊಳ್ಳದವರ ಮೇಲೆ ನಿಮ್ಮ ನಾಮವನ್ನು ಉಚ್ಚರಿಸದವರ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದುಬಿಡಿ. ಅವರು ಯಕೋಬ್ಯರನ್ನು ಕಬಳಿಸಿದ್ದಾರೆ ಹೌದು, ಪೂರ್ತಿಯಾಗಿ ಕಬಳಿಸಿಬಿಟ್ಟಿದ್ದಾರೆ ಅವರ ನಿವಾಸಗಳನ್ನು ನಾಶಮಾಡಿದ್ದಾರೆ.


ಈ ಕಾರಣ ಜೋಲುಬೀಳುವುವು ಎಲ್ಲರ ಕೈಗಳು; ಕರಗಿ ನೀರಾಗುವುವು ಎಲ್ಲರ ಹೃದಯಗಳು.


ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II


“ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II


ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು