Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:7 - ಕನ್ನಡ ಸತ್ಯವೇದವು C.L. Bible (BSI)

7 ಜೆರುಸಲೇಮ್ ದಿಕ್ಕುಪಾಲಾಗಿ ಕಷ್ಟಪಡುವಾಗ ನೆನಸಿಕೊಳ್ಳುತ್ತಾಳೆ ತನ್ನ ಪ್ರಾಚೀನ ವೈಭವಗಳನ್ನೆಲ್ಲಾ. ತನ್ನ ಜನತೆ ವೈರಿಗಳ ವಶವಾದಾಗ ಆಕೆಗೆ ಸಿಗಲಿಲ್ಲ ಯಾರೊಬ್ಬರ ಬೆಂಬಲ. ಆಕೆಯಾ ಹೀನಸ್ಥಿತಿ ನೋಡಿ ವೈರಿಗಳು ಮಾಡಿದರು ಪರಿಹಾಸ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ಭೋಗ್ಯ ವಸ್ತುಗಳನ್ನು ಜ್ಞಾಪಿಸಿಕೊಳ್ಳುತ್ತಾಳೆ; ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆರೂಸಲೇಮು ಕಷ್ಟದ ಮತ್ತು ಸಂಕಟದ ದಿನಗಳಲ್ಲಿ ಪೂರ್ವದಿನಗಳಲ್ಲಿ ತನಗಿದ್ದ ಸಂಪತ್ತೆಲ್ಲವನ್ನು ಜ್ಞಾಪಕ ಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ, ಅವಳಿಗೆ ಯಾರೂ ಸಹಾಯ ಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ನಾಶನದ ವಿಷಯವಾಗಿ ಅಪಹಾಸ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:7
23 ತಿಳಿವುಗಳ ಹೋಲಿಕೆ  

ನಿಂದಾಸ್ಪದರಾದೆವು ನೆರೆಹೊರೆಯ ಜನಾಂಗಗಳಿಗೆ I ಗುರಿಯಾದೆವು ಸುತ್ತಣವರ ಹಾಸ್ಯಕುಚೋದ್ಯಗಳಿಗೆ II


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


ಆಗ ಅವನಿಗೆ ಬುದ್ಧಿ ಬಂದಿತು. ನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆ.


ಹಲವು ರಾಷ್ಟ್ರಗಳು ನಿನಗೆ ವಿರುದ್ಧ ಕೂಡಿಬಂದು: “ಜೆರುಸಲೇಮನ್ನು ಹೊಲಸುಮಾಡೋಣ, ‘ಸಿಯೋನಿನ ನಾಶವನ್ನು ಕಣ್ಣಾರೆ ನೋಡೋಣ’ ಎನ್ನುತ್ತಿವೆ.


ಅವಳು ತನ್ನ ನಲ್ಲರನ್ನು ಹಿಂದಟ್ಟಿ ಹೋದರೂ ಅವರನ್ನು ಸಂಧಿಸಲಾರಳು; ಅವರನ್ನು ಹುಡುಕಿದರೂ ಕಂಡುಹಿಡಿಯಲಾರಳು. ಆಗ ಅವಳು: ‘ನನ್ನನ್ನು ಮದುವೆಯಾದ ಪತಿಯ ಬಳಿಗೆ ಹಿಂತಿರುಗುವೆನು. ಈಗಿನ ಸ್ಥಿತಿಗಿಂತ ಆಗಿನ ಸ್ಥಿತಿಯೇ ಉತ್ತಮವಾಗಿತ್ತು’ ಎಂದುಕೊಳ್ಳುವಳು.


ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.


“ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ - ನನ್ನ ಅಭಿಪ್ರಾಯವನ್ನು ವಿಚಾರಿಸಲು ನಿಮ್ಮನ್ನು ನನ್ನ ಬಳಿಗೆ ಕಳಿಸಿದ ಜುದೇಯದ ಅರಸನಿಗೆ ಹೀಗೆಂದು ಹೇಳಿರಿ: ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶಕ್ಕೆ ಹಿಂದಿರುಗುವುದು.


ದೇವರನು ಸ್ಮರಿಸಿ ನಿಟ್ಟುಸಿರಿಡುತಿಹೆನು I ಹಂಬಲಿಸಿ ಮನದಲೇ ನಾ ಮರುಗುತಿಹೆನು II


ಕಳೆದುಹೋದ ದಿನಗಳಲಿ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತಲ್ಲವೆ! ಆಗ ದೇವರು ನನ್ನನ್ನು ಕಾಪಾಡುತ್ತಿದ್ದನಲ್ಲವೆ?


ನಮ್ಮ ಪಿತೃಗಳು ನಿಮ್ಮನ್ನು ಕೀರ್ತಿಸುತ್ತಿದ್ದ ಆ ಸ್ಥಳವೇ, ಆ ನಮ್ಮ ಚೆಲುವ ಪವಿತ್ರಾಲಯವೇ, ಬೆಂಕಿಯ ಪಾಲಾಗಿದೆ. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾಗಿವೆ.


ಮೋವಾಬೇ, ನೀನು ಇಸ್ರಯೇಲನ್ನು ಕುರಿತು ಗೇಲಿಮಾಡುತ್ತಿದ್ದೆಯಲ್ಲವೆ? ಕಳ್ಳರ ಗುಂಪಿಗೆ ಸೇರಿ ಅದು ಸಿಕ್ಕಿಕೊಂಡಂತೆ ನಿನಗೆ ಕಾಣುತ್ತಿತ್ತೇ? ಇಸ್ರಯೇಲಿನ ಪ್ರಸ್ತಾಪ ಎತ್ತಿದಾಗಲೆಲ್ಲ ನೀನು ತಲೆಯಾಡಿಸಿ ಹಿಯ್ಯಾಳಿಸುತ್ತಿಯಲ್ಲವೆ?


ನಿಮ್ಮ ಪವಿತ್ರ ಪಟ್ಟಣಗಳು ಕಾಡಾಗಿವೆ. ಸಿಯೋನ್ ಪಾಳುಬಿದ್ದಿದೆ. ಜೆರುಸಲೇಮ್ ಹಾಳಾಗಿಹೋಗಿದೆ.


ಸರ್ವೇಶ್ವರನಾದ ದೇವರ ವಾಕ್ಯವನ್ನು ಕೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದುದ್ದನ್ನು, ಇಸ್ರಯೇಲ್ ನಾಡು ಪಾಳುಬಿದ್ದುದನ್ನು, ಯೆಹೂದ್ಯವಂಶದವರು ಗಡೀಪಾರಾದುದನ್ನು ನೋಡಿ ನೀನು ಹಿರಿಹಿರಿ ಹಿಗ್ಗಿಹೋದೆ.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಒದೆದು, ಇಸ್ರಯೇಲ್ ನಾಡನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದಕ್ಕೆ ಬಂದ ಗತಿಗೆ ಹಿಗ್ಗಿಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು