Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:1 - ಕನ್ನಡ ಸತ್ಯವೇದವು C.L. Bible (BSI)

1 ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ಪುರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂವಿುಗೆ ತಳ್ಳಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕರ್ತದೇವರು ಹೇಗೆ ತಮ್ಮ ಕೋಪದ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದರು. ತನ್ನ ಕೋಪದ ದಿನದಲ್ಲಿ, ತನ್ನ ಪಾದಪೀಠವನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:1
28 ತಿಳಿವುಗಳ ಹೋಲಿಕೆ  

ಹೋಗೋಣ ಬನ್ನಿರಿ ಆತನ ಮಂದಿರಕೆ I ಅಡ್ಡಬೀಳೋಣ ಆತನ ಪಾದಪೀಠಕೆ II


ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.


ಅದಕ್ಕೆ ಯೇಸು, “ಸೈತಾನನು ಆಕಾಶದಿಂದ ಸಿಡಿಲಿನಂತೆ ಬೀಳುವುದನ್ನು ಕಂಡೆನು.


ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು.


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


ಈಜಿಪ್ಟ್ ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವುದು. ಕಾರ್ಮುಗಿಲು ಅದನ್ನು ಆವರಿಸುವುದು. ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.


ಪರಮ ಪಾವನನು ನಮ್ಮೀ ಸ್ವಾಮಿ ದೇವನು I ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು II


ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೇ ಇಳಿಯುವೆ,” ಎಂದರು ಯೇಸುಸ್ವಾಮಿ.


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಅಕಟಕಟಾ! ಎಷ್ಟು ಮಸುಕಾಗಿದೆ ಬಂಗಾರ ಎಷ್ಟು ಕಾಂತಿಹೀನವಾಗಿಬಿಟ್ಟಿವೆ ಅಪ್ಪಟ ಚಿನ್ನ! ಪವಿತ್ರಾಲಯದ ಕಲ್ಲುಗಳೂ ಬಿದ್ದಿವೆ ಚೆಲ್ಲಾಪಿಲ್ಲಿಯಾಗಿ ಬೀದಿಬೀದಿಗಳ ಬದಿಯಲ್ಲಿ ರಾಶಿರಾಶಿಯಾಗಿ!


ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !


ನಮ್ಮ ಪಿತೃಗಳು ನಿಮ್ಮನ್ನು ಕೀರ್ತಿಸುತ್ತಿದ್ದ ಆ ಸ್ಥಳವೇ, ಆ ನಮ್ಮ ಚೆಲುವ ಪವಿತ್ರಾಲಯವೇ, ಬೆಂಕಿಯ ಪಾಲಾಗಿದೆ. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾಗಿವೆ.


ಮಣ್ಣುಪಾಲಾಗಿದೆ, ಓ ಇಸ್ರಯೇಲರೇ, ನಿಮ್ಮ ವೈಭವ ಆ ಗುಡ್ಡಗಳ ಮೇಲೆ ನೀವು ಮಡಿದದ್ದು ಹೇಗೆ, ಓ ಯುದ್ಧವೀರರೇ?


ದೇವರ ಮಂಜೂಷ ಶತ್ರುವಶವಾದುದರಿಂದಲು ಹಾಗೂ ಮಾವನೂ ಗಂಡನೂ ಮೃತರಾಗಿದ್ದರಿಂದಲು, “ದೈವಮಹಿಮೆಯು ಇಸ್ರಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿ ಆ ಕೂಸಿಗೆ ‘ಈಕಾಬೋದ್’ ಎಂದು ಹೆಸರು ಇಟ್ಟಳು.


ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !


ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.


ದೇವರ ಮಂಜೂಷ ಶತ್ರುವಶವಾದ್ದರಿಂದಲೇ ಇಸ್ರಯೇಲರ ಮಹಿಮೆ ಮಾಯವಾಯಿತೆಂದು ಹೇಳಿದಳು.


ಮುಪ್ಪಾಗಿಸಿರುವೆ ಅವನನು ಕಾಲಕ್ಕೆ ಮುಂಚೆ I ನಿನ್ನ ನಿಮಿತ್ತ ಅವನನು ಆವರಿಸಿದೆ ಲಜ್ಜೆ II


ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನು ಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ.


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


ಸುರಿಸಿದ್ದಾನೆ ಸರ್ವೇಶ್ವರ ತನ್ನ ರೋಷಾಗ್ನಿಯನ್ನು ತೀರಿಸಿಕೊಂಡಿದ್ದಾನೆ ತನ್ನ ಉಗ್ರಕೋಪವನ್ನು. ಆತ ಹೊತ್ತಿಸಿದ ಬೆಂಕಿಗೆ ಸಿಯೋನಿನ ಅಸ್ತಿವಾರ ಆಹುತಿಯಾಗಿದೆ.


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಕೆಡವಿಹಾಕುವೆನು; ಅದನ್ನು ನಾಶಮಾಡಲು ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು; ರೋಷದಿಂದ ಆನೆಕಲ್ಲುಗಳು ಸುರಿಯುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು