Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:19 - ಕನ್ನಡ ಸತ್ಯವೇದವು C.L. Bible (BSI)

19 ರಾತ್ರಿಯ ಒಂದೊಂದು ಜಾವದಲ್ಲೂ ಎದ್ದು ಗೋಳಾಡಿರಿ. ನಿಮ್ಮ ಹೃದಯ ಕರಗಿ, ನೀರಾಗಿ ಸ್ವಾಮಿಯ ಮುಂದೆ ಹರಿಯಲಿ. ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈ ಮುಗಿದು ಪ್ರಾರ್ಥನೆಮಾಡಿ. ಹಸಿವಿನಿಂದ ಅವು ಮೂರ್ಛೆಹೋಗಿವೆ, ಬೀದಿಯ ಮೂಲೆಮೂಲೆಗಳಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದು ಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದುಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಎದ್ದೇಳು, ರಾತ್ರಿಯಲ್ಲಿ ಕೂಗು. ನಿನ್ನ ಹೃದಯವನ್ನು ಕರ್ತದೇವರ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ ನೀರಿನಂತೆ ಹೊಯ್ದುಬಿಡಿರಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಏಕೆಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:19
31 ತಿಳಿವುಗಳ ಹೋಲಿಕೆ  

ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.


ಬಿಚ್ಚುವೆನು ಆತನ ಮುಂದೆ ಚಿಂತೆಯ ಕಟ್ಟನು I ಅರಿಕೆ ಮಾಡುವೆನು ನನ್ನ ಕಷ್ಟ ಸಂಕಟವನು II


ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.


ಆಕೆ, “ಇಲ್ಲ ಸ್ವಾಮಿ, ನಾನು ಕುಡಿದಿಲ್ಲ, ನಾನು ಬಹಳ ದುಃಖಪೀಡಿತಳು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಸರ್ವೇಶ್ವರನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.


ಸಮರ್ಪಕವಾಗಲಿ ನನ್ನ ಪ್ರಾರ್ಥನೆ ಧೂಪಾರತಿಯಂತೆ I ಕೈಮುಗಿದು ಮಾಡುವ ವಂದನೆ ಸಂಧ್ಯಾಬಲಿಯರ್ಪಣೆಯಂತೆ II


ಮಧ್ಯರಾತ್ರಿ ಪ್ರಾರಂಭವಾಗುತ್ತಿದ್ದಂತೆ ಮೊದಲ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನು ಮತ್ತು ಅವನ ಸಂಗಡ ಇದ್ದ ನೂರುಮಂದಿ (ಶತ್ರುಗಳ) ಪಾಳೆಯದ ಅಂಚಿಗೆ ಬಂದು ಕೊಂಬುಗಳನ್ನು ಊದಿ, ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.


ಹಗಲಲಿ ಪ್ರೀತಿಯನುಗ್ರಹಿಸಲಿ ದೇವನೆನಗೆ I ಇರುಳಲಿ ಎನ್ನಯ ಬಾಯಲ್ಲಿರಲಿ ಆತನ ಗೀತೆ I ಪ್ರಾರ್ಥನೆ ಸಲ್ಲಲಿ ಎನ್ನ ಜೀವಾಧಾರ ದೇವಗೆ II


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.


ಯಜಮಾನನು ಸಂಜೆಯಲ್ಲೋ ಮಧ್ಯರಾತ್ರಿಯಲ್ಲೋ ಕೋಳಿ ಕೂಗುವಾಗಲೋ ಬೆಳಕು ಹರಿಯುವಾಗಲೋ, ಯಾವಾಗ ಬರುವನೆಂಬುದು ನಿಮಗೆ ತಿಳಿಯದು.


ಆಗ ರಾತ್ರಿಯ ಕಡೇ ಜಾವದ ಸಮಯ. ಯೇಸು ಸರೋವರದ ಮೇಲೆ ನಡೆದುಕೊಂಡೇ ಶಿಷ್ಯರ ಬಳಿಗೆ ಬಂದರು.


ರಾತ್ರಿಯೊಳೂ ಮಾಡಿದೆ ನಿನ್ನ ನಾಮಸ್ಮರಣೆಯನು I ಕೈಗೊಂಡೆನು ಹೇ ಪ್ರಭೂ, ನಿನ್ನ ಧರ್ಮಶಾಸ್ತ್ರವನು II


ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II


ನಿನ್ನ ಮಕ್ಕಳು ಬಿದ್ದರು ಬೀದಿ ಚೌಕಗಳಲಿ ಬಲೆಗೆ ಬಿದ್ದ ಜಿಂಕೆಮರಿಯಂತಿಹರು ಪ್ರಜ್ಞೆತಪ್ಪಿ. ನಿನ್ನ ದೇವರನು ಮೂದಲಿಸಿಹರು ಸರ್ವೇಶ್ವರನ ರೋಷವನ್ನನುಭವಿಸಿಹರು.


ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣಬಾಣಗಳನ್ನು ನಿನ್ನ ಮೇಲೆ ಬಿಡುವನು. ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.


ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.’


ಭಜಿಸಿರಿ ಪ್ರಭುವನು ಕರಗಳನೆತ್ತಿ I ಪವಿತ್ರಾಲಯದಲಿ ಕೈಗಳನೆತ್ತಿ II


ನಿನ್ನ ಸ್ತುತಿಸುವೆ ಜೀವಮಾನ ಪರಿಯಂತ I ಕೈ ಮುಗಿವೆ ನಿನ್ನ ನಾಮದ ಸ್ಮರಣಾರ್ಥ II


ನಿಟ್ಟುಸಿರೇ ನನ್ನ ಮುಂದಿರುವ ಊಟ ಜಲಧಾರೆಯಂತಿದೆ ನನ್ನ ನರಳಾಟ.


ಅಂತೆಯೇ ಅವರು ಅಲ್ಲಿ ಕೂಡಿಬಂದು, ನೀರು ಸೇದಿ ಸರ್ವೇಶ್ವರನ ಮುಂದೆ ಹೊಯ್ದು, ಆ ದಿವಸ ಉಪವಾಸವಿದ್ದು, ದ್ರೋಹಿಗಳಾಗಿದ್ದೇವೆಂದು ಸರ್ವೇಶ್ವರನಿಗೆ ಅರಿಕೆಮಾಡಿದರು. ಸಮುವೇಲನು ಮಿಚ್ಪೆಯಲ್ಲಿ ಇಸ್ರಯೇಲರ ವ್ಯಾಜ್ಯಗಳನ್ನು ತೀರಿಸಿದನು.


ಆದರೂ ತೇಬೆಸ್ ನಗರವು ಗಡೀಪಾರಾಗಿ ಸೆರೆಹೋಯಿತು. ಅದರ ಮಕ್ಕಳನ್ನು ಬೀದಿಬೀದಿಯ ಮೂಲೆಗಳಲ್ಲಿ ಬಂಡೆಗಳಿಗೆ ಅಪ್ಪಳಿಸಲಾಯಿತು. ಅದರ ಪ್ರಮುಖರನ್ನು ಬಂಧಿಸಿ ಕೊಂಡೊಯ್ದು, ಚೀಟುಹಾಕಿ ಹಂಚಿಕೊಳ್ಳಲಾಯಿತು.


“ಎಲ್ಲಿ? ನಿನ್ನ ದೇವನೆಲ್ಲಿ?” ಎಂದು ಜನ ಜರೆಯುತಿರಲು I ಕಂಬನಿಯೆ ನನಗನ್ನಪಾನವಾಗಿಹುದು ಹಗಲಿರುಳು II


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಉರುಲೊಡ್ಡಿಹರು ನಾ ನಡೆಯುವ ಮಾರ್ಗದಲೆ I ನಾ ಮನಗುಂದಿರೆ, ಪರಿಹಾರವನು ನೀ ಬಲ್ಲೆ II


ನಾನು : “ಮಹಿಳೆಯರೇ, ಸರ್ವೇಶ್ವರ ಸ್ವಾಮಿಯ ನುಡಿಯನ್ನು ಕೇಳಿರಿ ಅವರ ಬಾಯಿಂದ ಹೊರಟ ಮಾತಿಗೆ ಕಿವಿ ತೆಗೆಯಿರಿ ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ ಪ್ರತಿಯೊಬ್ಬಳೂ ತನ್ನ ನೆರೆಯವಳಿಗೆ ಶೋಕಗೀತೆಯನ್ನು ಹೇಳಿಕೊಡಲಿ.


ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”


ಜುದೇಯದ ನಿವಾಸಿಗಳೇ, ನಿಮ್ಮ ಮಕ್ಕಳು ಅಗಲಿ ಸೆರೆಹೋಗಿದ್ದಾರೆ. ನಿಮ್ಮ ಮುದ್ದು ಮಕ್ಕಳಿಗಾಗಿ ತಲೆಬೋಳಿಸಿಕೊಳ್ಳಿ, ಮುಂಡನ ಮಾಡಿಸಿಕೊಳ್ಳಿ. ನಿಮ್ಮ ಬೋಳುತಲೆಯು ರಣಹದ್ದಿನಂತೆ ನುಣ್ಣಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು