Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:7 - ಕನ್ನಡ ಸತ್ಯವೇದವು C.L. Bible (BSI)

7 ಸ್ವಾಮಿ ತಿರಸ್ಕರಿಸಿಬಿಟ್ಟಿದ್ದಾನೆ ತನ್ನ ಬಲಿಪೀಠವನ್ನೇ ಅಸಹ್ಯಗೊಂಡು ತೊರೆದುಬಿಟ್ಟಿದ್ದಾನೆ ತನ್ನ ಪವಿತ್ರಸ್ಥಾನವನ್ನೇ ಸಿಯೋನ್ ಅರಮನೆಯ ಗೋಡೆಗಳನ್ನು ಕೆಡವಲು ಬಿಟ್ಟಿದ್ದಾನೆ ಹಗೆಗಳನ್ನೇ. ಹಬ್ಬಹರಿದಿನಗಳ ಜಯಘೋಷವೋ ಎಂಬಂತೆ ಘೋಷಣೆ ಹಾಕುತ್ತಿದ್ದಾರಲ್ಲಾ ಶತ್ರುಗಳು ಸರ್ವೇಶ್ವರನ ಮಂದಿರದಲ್ಲೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ, ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು, ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕರ್ತದೇವರು ತನ್ನ ಬಲಿಪೀಠವನ್ನು ತಳ್ಳಿಬಿಟ್ಟಿದ್ದಾರೆ. ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯ ಪಡಿಸಿದ್ದಾನೆ. ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ, ಅವರು ಯೆಹೋವ ದೇವರು ಆಲಯದಲ್ಲಿ ಶಬ್ದ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:7
31 ತಿಳಿವುಗಳ ಹೋಲಿಕೆ  

ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಆದಕಾರಣ ನಾನು ಜುದೇಯದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಜೆರುಸಲೇಮಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.”


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಆಗ ಯೇಸು, “ಇವುಗಳನ್ನೆಲ್ಲಾ ನೀವು ನೋಡುತ್ತಾ ಇದ್ದೀರಲ್ಲವೆ? ನಾನು ನಿಮಗೆ ಹೇಳುತ್ತೇನೆ ಕೇಳಿ: ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವರು,” ಎಂದರು.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಹೀಗಿರಲು ನಾನು ಅತಿ ದುಷ್ಟಜನಾಂಗಗಳನ್ನು ಬರಮಾಡುವೆನು; ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವುವು;


ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.


ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !


ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬಾಬಿಲೋನಿಯದವರು ಬೆಂಕಿಯಿಂದ ಸುಟ್ಟು ಜೆರುಸಲೇಮಿನ ಸುತ್ತಣವಿದ್ದ ಗೋಡೆಗಳನ್ನು ಕೆಡವಿದರು.


ಈ ನಗರಕ್ಕೆ ಮುತ್ತಿಗೆಹಾಕಲಿರುವ ಬಾಬಿಲೋನಿಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕುವರು. ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳ್‍ದೇವತೆಗೆ ಧೂಪಾರತಿ ಎತ್ತಿದ್ದಾರೋ, ಅನ್ಯದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದ್ದಾರೋ, ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ನಗರವನ್ನು ಸುಟ್ಟುಬಿಡುವರು.


“ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”


ಅವನ ಜನರು ಜೆರುಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿದರು; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.


ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ. ತಾತ್ಸಾರ ಮಾಡುವುದಿಲ್ಲ, ನಾನು ಅವರಿಗೆ ಮಾಡಿದ ವಾಗ್ದಾನವನ್ನು ಮೀರುವುದಿಲ್ಲ. ನಾನು ಅವರ ದೇವರಾದ ಸರ್ವೇಶ್ವರನಲ್ಲವೆ?


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.


ಭಂಗಪಡಿಸಿರುವೆ ದಾಸನೊಡನೆ ಮಾಡಿದ ಒಡಂಬಡಿಕೆಯನು I ಮಣ್ಣುಪಾಲಾಗಿಸಿರುವೆ ಅವನ ಪಟ್ಟದ ಆ ಕಿರೀಟವನು II


ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು.


“ಇಗೋ, ಬಾಬಿಲೋನಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಸರ್ವೇಶ್ವರನು ತನ್ನ ಆಲಯವನ್ನುನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾರೆ ಎಂಬ ಸಮಾಚಾರವನ್ನು ಸಿಯೋನಿನಲ್ಲಿ ಸಾರಲು ಧಾವಿಸುತ್ತಿದ್ದಾರೆ ಆ ಜನ.


ಬಿಕೋ ಎನ್ನುತ್ತಿವೆ ಸಿಯೋನಿಗೆ ತೆರಳುವ ಮಾರ್ಗಗಳು ಮಹೋತ್ಸವಕ್ಕೆ ಇನ್ನು ಬರುತ್ತಿಲ್ಲ ಯಾತ್ರಿಕರಾರು ಪಾಳುಬಿದ್ದಿವೆ ಅದರ ಬಾಗಿಲುಗಳು ನಿಟ್ಟುಸಿರಿಡುತ್ತಿರುವರು ಅದರ ಯಾಜಕರು ವ್ಯಥೆಪಡುತ್ತಿರುವರು ಅದರ ಯುವತಿಯರು ನಗರಕ್ಕೆ ನಗರವೇ ದುಃಖದಲ್ಲಿ ಮುಳುಗಿರುವುದು.


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಸ್ವಾಮಿ, ನಮ್ಮ ಮೇಲೆ ಅತಿಕೋಪಗೊಳ್ಳದಿರಿ. ಸದಾ ನಮ್ಮ ಅಕ್ರಮಗಳನ್ನು ನೆನೆಸದಿರಿ, ಇಗೋ ನೋಡಿ, ಬೇಡುತ್ತಿದ್ದೇವೆ, ನಾವೆಲ್ಲರೂ ನಿಮ್ಮ ಜನರು.


ಇನ್ನೂ ನೋಡಿದೆ - ಸೊಂಪಾದ ನಾಡು ಈಗ ಸುಡುಗಾಡು ಅಕಟಾ ! ಸರ್ವೇಶ್ವರನ ಮುಂದೆ, ಅವರ ಕೋಪಾಗ್ನಿಯ ಮುಂದೆ ಊರುಗಳೆಲ್ಲವು ಪಾಳುಬಿದ್ದಿದ್ದವು.


ಸರ್ವೇಶ್ವರ ಸ್ವಾಮಿ ಹೀಗೆಂದಿದ್ದಾರೆ : ನಾಡೆಲ್ಲ ಬಟ್ಟಬರಿದಾಗುವುದು; ಆದರೆ ನಾನು ಅದನ್ನು ಸಂಪೂರ್ಣವಾಗಿ ಲಯಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು