Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:9 - ಕನ್ನಡ ಸತ್ಯವೇದವು C.L. Bible (BSI)

9 ಹೂತುಹೋಗಿವೆ ಸಿಯೋನ್ ಹೆಬ್ಬಾಗಿಲುಗಳು ಚೂರುಚೂರಾಗಿ ಬಿದ್ದಿವೆ ಅದರ ಅಗುಳಿಗಳು. ಅರಸರೂ ಪಾಲಕರೂ ಸೇರಿಹೋದರು ಅನ್ಯಜನಾಂಗಗಳೊಳು. ನಿಂತುಹೋಗಿವೆ ಧರ್ಮಶಾಸ್ತ್ರ ಬೋಧನೆಗಳು. ಸರ್ವೇಶ್ವರನಿಂದ ಪ್ರವಾದಿಗಳಿಗೆ ಆಗುತ್ತಿದ್ದ ದಿವ್ಯದರ್ಶನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಸರದಾರರೂ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಧರ್ಮೋಪದೇಶವೇ ಕಾಣೆ; ಅದರ ಪ್ರವಾದಿಗಳಿಗೆ ಕೂಡಾ ಯೆಹೋವನಿಂದ ಯಾವ ದರ್ಶನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ. ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಅವಳ ಪ್ರಭುಗಳು ಇತರ ಜನಾಂಗಗಳ ಮಧ್ಯೆ ಇರುವರು. ಇನ್ನು ದೈವನಿಯಮವು ನಿಂತುಹೋಗಿವೆ. ಆಕೆಯ ಪ್ರವಾದಿಗಳು ಸಹ ಯೆಹೋವ ದೇವರಿಂದ ದರ್ಶನವನ್ನು ಕಂಡುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:9
27 ತಿಳಿವುಗಳ ಹೋಲಿಕೆ  

ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ. ಜೆರುಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.


ಇಸ್ರಯೇಲರಿಗೆ ಬಹುಕಾಲದವರೆಗೆ ನಿಜವಾದ ದೇವರು, ಬೋಧಿಸುವ ಯಾಜಕರು ಹಾಗೂ ಧರ್ಮಶಾಸ್ತ್ರ ಇರಲಿಲ್ಲ.


ಬಾಬಿಲೋನಿಯದ ಶೂರರು ಯುದ್ಧಕ್ಕೆ ಹಿಂಜರಿದು ಹೆಂಗಸರಂತೆ, ಹೇಡಿಗಳಂತೆ ತಮ್ಮ ಕೋಟೆಗಳಲ್ಲೆ ನಿಂತಿದ್ದಾರೆ. ಅದರ ಹೆಬ್ಬಾಗಿಲುಗಳು ಮುರಿದುಬಿದ್ದಿವೆ. ಅದರ ಮನೆಗೆ ಬೆಂಕಿಯಿಕ್ಕಲಾಗಿದೆ.


ಆರಾಧನಾ ಚಿಹ್ನೆಗಳಿಲ್ಲ, ಪ್ರವಾದಿಗಳು ನಮಗಿಲ್ಲ I ಈ ಪರಿಸ್ಥಿತಿ ಎಲ್ಲಿಯತನಕ? ಬಲ್ಲವರಾರೂ ಇಲ್ಲ II


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ನಿಮ್ಮನ್ನೂ ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯಿಸುವರು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು; ನಾನು ಹಾಕಿದ ಉರುಳಿನಲ್ಲಿ ಸಿಕ್ಕಿಬೀಳುವನು. ಅವನನ್ನು ಬಾಬಿಲೋನಿಗೆ ತಂದು, ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು: ಬಾಬಿಲೋನಿಯಾ ದೇಶದ ಬಾಬಿಲೋನ್ ನಗರಕ್ಕೆ ಅವನನ್ನು ಒಯ್ಯುವೆನು; ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.


ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


ಅವರನ್ನು ನೋಡುವವರೂ “ತೊಲಗಿರಿ, ನೀವು ಅಶುದ್ಧರು ನಡೆಯಿರಿ, ನಡೆಯಿರಿ, ಮುಟ್ಟಬೇಡಿ” ಎಂದು ಕೂಗುತ್ತಿರುವರು. ಅವರು ಓಡಿ ಅನ್ಯನಾಡುಗಳಲ್ಲಿ ಅಲೆಯುತ್ತಿರಲು “ಇವರು ಇನ್ನು ಇಲ್ಲಿ ತಂಗಕೂಡದು” ಎನ್ನುತಿಹರು ಅಲ್ಲಿನ ನಾಡಿಗರು.


ಘೋರಸೇವೆ ಶ್ರಮೆಗಳಿಂದ ತಪ್ಪಿಸಿಕೊಳ್ಳಲಿಕೆ ವಲಸೆಹೋಗಿರುವಳಲ್ಲಾ ‘ಯೆಹೂದಿ’ ಎಂಬಾಕೆ ! ಮ್ಲೇಚ್ಛರ ಮಧ್ಯೆ ವಾಸಮಾಡುತ್ತಿರುವಳಲ್ಲಾ ನೆಮ್ಮದಿಯಿಲ್ಲದೆ ಹಿಮ್ಮೆಟ್ಟಿ ಹಿಡಿದರು ಹಿಂಸಕರೆಲ್ಲಾ ಆಕೆ ಇಕ್ಕಟ್ಟಿಗೆ ಸಿಕ್ಕಿರುವಾಗಲೆ !


ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತ ಗೋಡೆಗಳನ್ನೆಲ್ಲ ಕೆಡವಿದರು.


ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬಾಬಿಲೋನಿಯದವರು ಬೆಂಕಿಯಿಂದ ಸುಟ್ಟು ಜೆರುಸಲೇಮಿನ ಸುತ್ತಣವಿದ್ದ ಗೋಡೆಗಳನ್ನು ಕೆಡವಿದರು.


ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿನದಲ್ಲಿ ನಗರದ ಪೌಳಿಗೋಡೆ ಒಡಕುಬಿದ್ದು ಜೆರುಸಲೇಮ್ ಶತ್ರುವಶವಾಯಿತು.


ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.


ಇವನ ಇಬ್ಬರು ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿ, ಅವನಿಗೆ ಬೇಡಿಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.


ತಮ್ಮ ಇಚ್ಛಾನುಸಾರ ಅವರು ನಡೆದ ಕಾರಣ, ಅವರ ಪಟ್ಟಣಗಳಲ್ಲಿ ಕತ್ತಿಯ ಕಾಳಗ ನಡೆಯುವುದು. ಅವರ ಪುರದ್ವಾರದ ಕತ್ತಿಯ ಕಬ್ಬಿಣದ ಅಗುಳಿಗಳನ್ನು ಮುರಿದು ಕೋಟೆಯಲ್ಲೇ ಅವರನ್ನು ಕಡಿದುಹಾಕುವರು.


ದಮಸ್ಕದ ಮಹಾದ್ವಾರಗಳನ್ನು ಕೆಡವಿಹಾಕುವೆನು. ಆವೇನಿನ ಕಣಿವೆಯಲ್ಲಿ ಸಿಂಹಾಸನಾರೂಢನಾಗಿರುವವನನ್ನು ಮತ್ತು ಬೆತ್ - ಏದೆನ್‍ನಿಂದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು. ಸಿರಿಯದ ಜನರು ಕೀರ್ ಪ್ರಾಂತ್ಯಕ್ಕೆ ಸೆರೆಯಾಳುಗಳಾಗಿ ಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು.


ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.


ಪಾಳುಬಿದ್ದಿದೆ ನಗರ, ಮುರಿದು ಬಿದ್ದಿದೆ ಪುರದ್ವಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು