Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:26 - ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರನು ನಮ್ಮನ್ನು ಉದ್ಧರಿಸುವನೆಂದು ಎದುರುನೋಡುತ್ತಾ ತಾಳ್ಮೆಯಿಂದಿರುವುದು ಒಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವದು ಒಳ್ಳೇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮನುಷ್ಯನು ಮೌನವಾಗಿ ಯೆಹೋವ ದೇವರ ರಕ್ಷಣೆಗೆ ಕಾಯುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:26
24 ತಿಳಿವುಗಳ ಹೋಲಿಕೆ  

ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II


ಪ್ರಭುವನು ನಂಬಿ ನಡೆ ಆತನ ಪಥದಲೇ I ಉದ್ಧಾರವಾಗುವೆ, ನಾಡಿಗೊಡೆಯನಾಗುವೆ I ದುಷ್ಟರ ವಿನಾಶವನು ಕಣ್ಣಾರೆ ಕಾಣುವೆ II


ಪ್ರಭುವಿಗಾಗಿ ಎನ್ನ ಮನ ಕಾದಿದೆ I ಆತನ ವಾಕ್ಯದಲಿ ನಂಬಿಕೆ ನನಗಿದೆ II


ಆ ದೃಢ ನಂಬಿಕೆಯನ್ನು ಕಳೆದುಕೊಳ್ಳಬೇಡಿ; ಅದರ ಪ್ರತಿಫಲ ಮಹತ್ತಾದುದು.


ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.


ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ : “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.


ರಕ್ಷಣೆಯನು ಪ್ರಭು, ನಿರೀಕ್ಷಿಸುತ್ತಿರುವೆ I ನಿನ್ನ ಆಜ್ಞೆಗಳನು ನಾನು ಕೈಗೊಂಡಿರುವೆ II


ನನಗೆ ಇಷ್ಟ ನೀನು ನೀಡುವ ಜೀವೋದ್ಧಾರ I ನಿನ್ನ ಧರ್ಮಶಾಸ್ತ್ರ ಎನಗೆ ಸಂತೋಷಕರ II


ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.


ಸರ್ವಾಪತ್ತುಗಳಿಂದ ತಪ್ಪಿಸಿದೆ ಪ್ರಭು, ನನ್ನನು I ಕಂಡಿವೆ ನನ್ನ ಕಣ್ಗಳೇ ಶತ್ರುಗೊದಗಿದ ಸೋಲನು II


ನಿನ್ನುಪಕಾರವನು ಹೇ ದೇವಾ, ನಾ ಸದಾ ಸ್ಮರಿಸುವೆನು I ನಿನ್ನ ಶ್ರೇಷ್ಠ ನಾಮವನು ಭಕ್ತರ ಮುಂದೆ ಸ್ತುತಿಸುವೆನು II


ನಿನ್ನ ಸಾನ್ನಿಧ್ಯ ಸ್ವಾಮಿದೇವಾ, ನನಗೆಂಥ ಸೌಭಾಗ್ಯ I ನಿನ್ನ ಸತ್ಕಾರ್ಯಗಳ ಸಾರಲೆಂದೆ ನಿನ್ನನಾಶ್ರಯಿಸಿಕೊಂಡೆನಯ್ಯಾ II


ನಾನು ನಿಮ್ಮ ಬಳಿ ಇರಲಿ, ಇಲ್ಲದಿರಲಿ, ಬೇರೆಯವರು ನಿಮ್ಮಲ್ಲಿ ಅಷ್ಟು ಆಸಕ್ತರಾಗಿರುವುದು ಒಳ್ಳೆಯದೇ. ಆದರೆ ಅಂಥ ಆಸಕ್ತಿ ಸದುದ್ದೇಶದಿಂದ ಕೂಡಿರಬೇಕು.


ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.


ಹೇ ಪ್ರಭೂ, ನಿನ್ನ ಗುಣಗಾನ ಮಂಗಳಕರ I ಪರಾತ್ಪರನೆ, ನಿನ್ನ ನಾಮಭಜನೆ ಹಿತಕರ II


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಯೌವನದಿಂದಲೆ ನೊಗ ಹೊತ್ತರೆ ಮಾನವನಿಗೆ ಅದು ಹಿತಕರ.


ಸರ್ವೇಶ್ವರ ಸ್ವಾಮಿಯೇ ನಿಮ್ಮ ಪರವಾಗಿ ಯುದ್ಧಮಾಡುವರು. ನೀವು ನೆಮ್ಮದಿಯಿಂದಿರಿ,” ಎಂದು ಹೇಳಿದನು.


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು