Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:14 - ಕನ್ನಡ ಸತ್ಯವೇದವು C.L. Bible (BSI)

14 ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಿಹರು ಆ ಯಾಜಕರು ಮತ್ತು ಪ್ರವಾದಿಗಳು. ಅವರ ಬಟ್ಟೆಯನ್ನೂ ಯಾರೂ ಮುಟ್ಟರು ಏಕೆಂದರೆ ರಕ್ತದಿಂದ ಅವರು ಕಳಂಕಿತರಾಗಿಹರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಹಾ, ಆ ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಹಾ, ಆ ಯಾಜಕಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಆ ಪ್ರವಾದಿಗಳು ಮತ್ತು ಯಾಜಕರು ಕುರುಡರಂತೆ ಬೀದಿಗಳಲ್ಲಿ ಅಲೆದಾಡಿದರು. ಅವರು ರಕ್ತದಿಂದ ಹೊಲಸಾಗಿದ್ದರು. ಅವರು ಹೊಲಸಾಗಿದ್ದದರಿಂದ ಅವರ ಬಟ್ಟೆಯನ್ನು ಮುಟ್ಟುವುದಕ್ಕೂ ಯಾರಿಗೂ ಸಾಧ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು. ಅವರು ರಕ್ತದಿಂದ ತಮ್ಮನ್ನು ತಾವೇ ಕಲುಷಿತಗೊಳಿಸಿಕೊಂಡರು. ಆದ್ದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೇ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:14
15 ತಿಳಿವುಗಳ ಹೋಲಿಕೆ  

ಇದಲ್ಲದೆ, ನಿರ್ದೋಷಿಗಳಾದ ದೀನದಲಿತರ ಪ್ರಾಣರಕ್ತ ನಿಮ್ಮ ಬಟ್ಟೆಗೆ ಅಂಟಿಕೊಂಡಿದೆ! ‘ಇವರು ಕನ್ನ ಕೊರೆಯುವುದನ್ನು ಕಂಡೆವು’ ಎಂದು ನೀವು ನೆವ ಹೇಳುವಂತಿಲ್ಲ. ನಿಮ್ಮ ಈ ಎಲ್ಲ ದುರಭ್ಯಾಸಗಳ ನಿಮಿತ್ತ ದಂಡಿಸುವೆನು.


ಈ ಕಾವಲುಗಾರರು ಕುರುಡರು, ಇವರಿಗೆ ತಿಳುವಳಿಕೆಯಿಲ್ಲ. ಇವರೆಲ್ಲರೂ ಬೊಗಳಲಾರದ ಮೂಕನಾಯಿಗಳು, ಮಲಗಿಕೊಂಡು ಕನವರಿಸುವ ನಿದ್ದೆಕೋರ ನಾಯಿಗಳು.


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಹೊರಗೆ ಬಯಲಿನಲ್ಲಿರುವ ಯಾವನಿಗಾದರೂ ಶಸ್ತ್ರಹತನ ಶವವಾಗಲಿ, ಬೇರೆ ಯಾವ ಮಾನುಷ್ಯ ಶವವಾಗಲಿ, ಮನುಷ್ಯನ ಎಲುಬಾಗಲಿ ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಮಡಿಗೆಟ್ಟವನಾಗಿರಬೇಕು.


ಅವರ ಮನಸ್ಸಿಗೆ ಕತ್ತಲು ಕವಿದಿದೆ. ಅವರು ಅಜ್ಞಾನಿಗಳೂ ಕಠಿಣ ಹೃದಯಿಗಳೂ ಆಗಿರುವುದರಿಂದ ದೇವರು ಕೊಡುವ ಜೀವಕ್ಕೆ ಹೊರತಾಗಿದ್ದಾರೆ.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಜನರಿಗೆ ತಿಳಿಸಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಸುತ್ತುಗಟ್ಟಿದರು.


ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಹರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ.”


ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು