Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:16 - ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರನ ದೃಷ್ಟಿ ಅವರನ್ನು ಚದರಿಸಿದೆ ಇನ್ನು ಆತ ತೋರನು ಅವರಿಗೆ ಕರುಣೆ. ಯಾಜಕರಾದರೂ ಅವರಿಗೆ ಮರ್ಯಾದೆ ತಪ್ಪಿಹೋಗಿದೆ ಹಿರಿಯರಾದರೂ ಅವರಿಗೆ ಆದರಣೆ ಇಲ್ಲದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನ ಉಗ್ರದೃಷ್ಟಿಯು ಅವರನ್ನು ಚದರಿಸಿದೆ; ಆತನು ಇನ್ನು ಕಟಾಕ್ಷಿಸನು. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ತಾನೇ ಆ ಜನರನ್ನು ನಾಶಮಾಡಿದನು. ಅವರ ಪರಿಪಾಲನೆ ಮಾಡುವುದನ್ನು ನಿಲ್ಲಿಸಿದನು. ಆತನು ಯಾಜಕರನ್ನು ಗೌರವಿಸಲಿಲ್ಲ. ಆತನು ಯೆಹೂದದ ಹಿರಿಯರೊಂದಿಗೆ ಕರುಣೆಯಿಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರ ಕೋಪವು ಅವರನ್ನು ಚದುರಿಸಿತು. ಅವರು ಇನ್ನು ಅವರನ್ನು ಲಕ್ಷಿಸುವುದಿಲ್ಲ. ಅವರು ಯಾಜಕರನ್ನು ಗೌರವಿಸಲಿಲ್ಲ. ಅವರು ಹಿರಿಯರಿಗೆ ದಯೆ ತೋರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:16
20 ತಿಳಿವುಗಳ ಹೋಲಿಕೆ  

ನಮ್ಮ ನಾಯಕರ ಕೈಗಳನ್ನು ನೇತುಹಾಕಿದ್ದಾರೆ ಗಲ್ಲಿಗೆ ನಮ್ಮ ಹಿರಿಯರನ್ನು ಗುರಿಪಡಿಸಿದ್ದಾರೆ ಮಾನಭಂಗಕ್ಕೆ.


ಈ ಒಡಂಬಡಿಕೆ, ನಾನು ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕೈಹಿಡಿದು ಕರೆತಂದಾಗ ಮಾಡಿದ ಒಡಂಬಡಿಕೆಯಂತಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ; ಎಂದೇ, ನಾನು ಅವರನ್ನು ಲಕ್ಷಿಸಲೂ ಇಲ್ಲ, ಎಂದರು ಸರ್ವೇಶ್ವರ.


ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.”


ನೋಡಿದನಾತ ಅವರ ಕಷ್ಟಕಾರ್ಪಣ್ಯವನು I ಗಮನಿಸಿದನು ಅವರ ಆರ್ತನಾದವನು II


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ಅವರ ಕೋಪ ಭೀಕರ, ಅದಕ್ಕಿರಲಿ ಧಿಕ್ಕಾರ! ಅವರ ರೌದ್ರ - ಕ್ರೂರ, ಅದಕ್ಕಿರಲಿ ಧಿಕ್ಕಾರ! ವಿಭಾಗಿಸುವೆನವರನು ಯಕೋಬ ಕುಲದಲಿ ಚದರಿಸುವೆನವರನು ಇಸ್ರಯೇಲರಲಿ.


ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಮಹಾಯಾಜಕ ಸೆರಾಯನು, ಎರಡನೇ ದರ್ಜೆಯ ಯಾಜಕ ಜೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.


ತನ್ನ ಗರ್ಭಗುಡಿಯನ್ನೂ ಉತ್ಸವಸ್ಥಾನವನ್ನೂ ಹಾಳುಮಾಡಿದ ತೋಟದ ಗುಡಿಸಲನ್ನೋ ಎಂಬಂತೆ. ಮಹೋತ್ಸವಗಳನ್ನೂ ಸಬ್ಬತ್‍ದಿನಗಳನ್ನೂ ಅಳಿಸಿಬಿಟ್ಟ ನೆನಪಿಗೂ ಬಾರದಂತೆ. ರಾಜರನ್ನೂ ಯಾಜಕರನ್ನೂ ಸರ್ವೇಶ್ವರ ಧಿಕ್ಕರಿಸಿದ ಅತಿ ರೋಷಾವೇಷಗೊಂಡವನಂತೆ.


ಚದರಿಸುವೆನು ನಿಮ್ಮ ಸಂತಾನವನು ಹೊರನಾಡುಗಳಲಿ I ಅಳಿದು ಹೋಗುವರವರು ಅನ್ಯಜನಾಂಗಗಳ ಮಧ್ಯೆಯಲಿ” I


ಪ್ರಜೆಗೆ ಹೇಗೋ ಹಾಗೆ ಯಾಜಕನಿಗೆ, ದಾಸನಿಗೆ ಹೇಗೋ ಹಾಗೆ ದಣಿಗೆ , ದಾಸಿಗೆ ಹೇಗೋ ಹಾಗೆ ಯಜಮಾನಿಗೆ, ಕೊಳ್ಳುವವನಿಗೆ ಹೇಗೋ ಹಾಗೆ ಕೊಡುವವನಿಗೆ, ಸಾಲ ಕೊಡುವವನಿಗೆ ಹೇಗೋ ಹಾಗೆ ಸಾಲ ಪಡೆಯುವವನಿಗೆ, ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆ ಬಡ್ಡಿ ತೆರುವವನಿಗೆ, ಬರುವುದು ಒಂದೇ ಗತಿ ಇವರೆಲ್ಲರಿಗೆ.


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?


ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು