Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:18 - ಕನ್ನಡ ಸತ್ಯವೇದವು C.L. Bible (BSI)

18 ಶತ್ರು ನಮ್ಮನ್ನು ಹೆಜ್ಜೆಹೆಜ್ಜೆಗೂ ಹುಡುಕುತ್ತಿದ್ದುದರಿಂದ ಹಾದಿಬೀದಿಗಳಲ್ಲಿ ಸಂಚಾರಮಾಡಲೂ ಆಗುತ್ತಿರಲಿಲ್ಲ. ನಮಗೆ ಕಾಲವು ತೀರಿತು, ಅಂತ್ಯವು ಸಮೀಪಿಸಿತು; ಹೌದು, ನಮ್ಮ ಅಂತ್ಯವು ಬಂದೇಬಿಟ್ಟಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು; ಹೌದು, ನಮಗೆ ಅಂತ್ಯವು ಬಂದೇ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿ ಮಾಡಿಕೊಂಡಿರುವದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು, ಹೌದು, ನಮಗೆ ಅಂತ್ಯವು ಬಂದೇ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಮ್ಮ ವೈರಿಗಳು ನಮ್ಮನ್ನು ಸತತವಾಗಿ ಬೇಟೆಯಾಡುತ್ತಿದ್ದುದರಿಂದ ನಾವು ಬೀದಿಗಳಿಗೆ ಹೋಗಲೂ ಸಾಧ್ಯವಾಗಲಿಲ್ಲ. ನಮ್ಮ ಅಂತ್ಯವು ಸಮೀಪಿಸಿತು. ನಮ್ಮ ಕಾಲವು ಮುಗಿಯಿತು; ನಮ್ಮ ಕೊನೆಯು ಬಂದಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಶತ್ರುಗಳು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ. ನಮ್ಮ ಅಂತ್ಯವು ಸಮೀಪಿಸಿತು, ನಮ್ಮ ದಿನಗಳು ತೀರಿದವು. ಏಕೆಂದರೆ ನಮ್ಮ ಅಂತ್ಯವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:18
16 ತಿಳಿವುಗಳ ಹೋಲಿಕೆ  

ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು.


“ಹಕ್ಕಿಯನ್ನು ಬೇಟೆಯಾಡುವವರೋ ಎಂಬಂತೆ ನಿಷ್ಕಾರಣ ವೈರಿಗಳು ಬೆನ್ನಟ್ಟಿ ಓಡಿಬಂದರು ನನ್ನ ಹಿಂದೆ.


ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.


“ನರಪುತ್ರನೇ, ಇಗೋ, ಇಸ್ರಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನ ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ.


ಬಾಬಿಲೋನ್ ನಗರವು ತುಳಿದು ತುಳಿದು ಸರಿಮಾಡಿದ ಕಣದಂತಿದೆ. ಇಷ್ಟರಲ್ಲೆ ಕೊಯ್ಲುಕಾಲ ಅದಕ್ಕೆ ಸಂಭವಿಸಲಿದೆ; ಇದು ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರನ ನುಡಿ.”


ಆಗ ಸ್ವಾಮಿ ನನಗೆ, “ಸರಿಯಾಗಿ ನೋಡಿದೆ; ನನ್ನ ಮಾತನ್ನು ನೆರವೇರಿಸುವುದಕ್ಕೆ ಎಚ್ಚರಗೊಂಡಿದ್ದೇನೆಂದು ತಿಳಿದುಕೊ” ಎಂಬುದಾಗಿ ಹೇಳಿದರು.


ಉಳಿಯದಿರಲಿ ನಾಡೊಳು ಚಾಡಿಕೋರರು I ಕೇಡಿಂದ ನಾಶವಾಗಲಿ ಹಿಂಸಕರು II


ನಾನು ತಲೆಯೆತ್ತಿದರೆ ಬೇಟೆಯಾಡುವೆ ನನ್ನನ್ನು ಸಿಂಹದಂತೆ ಮತ್ತೆ ನಿನ್ನ ಶಕ್ತಿ ಸಾಮರ್ಥ್ಯವನ್ನು ನನ್ನ ಮೇಲೆ ಪ್ರಯೋಗಿಸುವೆ.


ಇಸ್ರಯೇಲರ ಅರಸರೇ, ಯಾರನ್ನು ಹಿಂದಟ್ಟಿ ಹೊರಟಿದ್ದೀರಿ? ಯಾರನ್ನು ಹಿಡಿಯಬೇಕೆಂದಿರುತ್ತೀರಿ? ಸತ್ತ ನಾಯಿಯನ್ನೇ? ಒಂದು ಬಡ ಸೊಳ್ಳೆಯನ್ನೇ?


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಬೆನ್ಯಾಮೀನನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆ ಕುಳಿತಿದ್ದನು. ಅವನು ಪ್ರವಾದಿ ಯೆರೆಮೀಯನನ್ನು, “ನೀನು ಬಾಬಿಲೋನಿಯರನ್ನು ಮರೆಹೋಗಲು ಹೋಗುತ್ತಿರುವೆ,” ಎಂದು ಹೇಳಿ ಅವನನ್ನು ಬಂಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು