Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:21 - ಕನ್ನಡ ಸತ್ಯವೇದವು C.L. Bible (BSI)

21 ‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಯುವತಿಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ [ರೋಷಪಾನದ] ಪಾತ್ರೆಯು ನಿನ್ನ ಪಾಲಿಗೂ ಬರುವದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಎದೋಮಿನ ಜನರೇ, ಸಂತೋಷವಾಗಿರಿ. ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಆ ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಎದೋಮಿನ ಪುತ್ರಿಯೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು ಮತ್ತು ಸಂತೋಷಪಡು; ಆದರೆ ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವುದು. ನೀನು ಕುಡಿದು, ಬೆತ್ತಲೆಯಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:21
24 ತಿಳಿವುಗಳ ಹೋಲಿಕೆ  

“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”


ಸರ್ವೇಶ್ವರ ಇಂತೆನ್ನುತ್ತಾರೆ: ಎದೋಮ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ಸೋದರ ನಾಡಿನವರಾದ ಇಸ್ರಯೇಲರನ್ನು ಓಡಿಸಿದರು. ಅವರಿಗೆ ಕರುಣೆತೋರದೆ, ಕೊನೆಯವರೆವಿಗೂ ರೋಷವನ್ನೇ ಸಾಧಿಸಿದರು.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II


ಶಾಫೀರಿನವರೇ, ಬೆತ್ತಲೆಯಾಗಿ ಲಜ್ಜೆಗೆಟ್ಟು ತೊಲಗಿರಿ. ಚಾನಾನಿನವರಿಗೆ ಹೊರಬರಲು ಧೈರ್ಯವಿಲ್ಲ. ಬೇತೇಲಿನವರ ಗೋಳಾಟ ಕೇಳಿಬಂದಾಗ, ಅಲ್ಲಿ ನಿಮಗೆ ಆಶ್ರಯವಿಲ್ಲವೆಂದು ಗೊತ್ತಾಗುವುದು.


ಓಬದ್ಯನು ಕಂಡ ದೈವದರ್ಶನ: ಎದೋಮ್ ನಾಡಿನ ವಿಷಯವಾಗಿ ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಹೊರಡಿರಿ, ಎದೋಮಿನ ಮೇಲೆ ಯುದ್ಧಮಾಡಲು ತೆರಳೋಣ” ಹೀಗೆಂದು ತಮ್ಮ ದೂತನ ಮುಖಾಂತರ ಸರ್ವೇಶ್ವರ ರಾಷ್ಟ್ರಗಳಿಗೆ ಹೇಳಿಕಳುಹಿಸಿದ್ದಾರೆ. ಅವರಿಂದ ಬಂದ ಈ ಸಮಾಚಾರವನ್ನು ನಾವು ಕೇಳಿದ್ದೇವೆ.


“ನರಪುತ್ರನೇ, ಜೆರುಸಲೇಮಿನ ವಿಷಯವಾಗಿ ಟೈರ್ ನಗರವು ‘ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿದ್ದಿದೆ; ಜೆರುಸಲೇಮ್ ಹಾಳಾದ ಕಾರಣ ನಾನು ವೃದ್ಧಿಗೊಳ್ಳುವೆನು’ ಎಂದುಕೊಂಡಿತು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಆಹಾ, ಯೆಹೂದವಂಶ ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು ಎಂದು ಮೋವಾಬ ಹಾಗೂ ಸೇಯೀರ ಹೇಳಿಕೊಂಡರು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಒದೆದು, ಇಸ್ರಯೇಲ್ ನಾಡನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದಕ್ಕೆ ಬಂದ ಗತಿಗೆ ಹಿಗ್ಗಿಕೊಂಡೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಕಷ್ಟವೆಂಬ ಕೊಡದಿಂದ ಕುಡಿಸಲು ಯಾರ ಪಾಲಿಗೆ ಬರಲಿಲ್ಲವೋ ಅಂಥವರೇ ಕುಡಿಯಬೇಕಾಗಿರುವಲ್ಲಿ ನೀನು ಅದರಿಂದ ತಪ್ಪಿಸಿಕೊಳ್ಳುವೆಯಾ? ಇಲ್ಲ, ಅದು ಸಾಧ್ಯವಿಲ್ಲ, ನೀನು ಕುಡಿದೇ ತೀರಬೇಕು.


ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ ಸರ್ವೇಶ್ವರನಿಗೆ ದ್ರೋಹಮಾಡಿದ ಇಸ್ರಯೇಲ ಅರಸ ಅಹಾಜನ ನಿಮಿತ್ತ ಸರ್ವೇಶ್ವರ ಯೆಹೂದ್ಯರನ್ನು ಈ ಪ್ರಕಾರ ತಗ್ಗಿಸಿದ್ದರು.


ದೀಶಾನನ ಮಕ್ಕಳು ಊಚ್ ಮತ್ತು ಅರಾನ್.


ನೀನು ಸನ್ಮಾನದಿಂದಲ್ಲ, ಅವಮಾನದಿಂದ ತುಂಬಿರುವೆ; ನೀನೂ ಕುಡಿ; ಕುಡಿದು ನಗ್ನನಾಗು. ಸರ್ವೇಶ್ವರಸ್ವಾಮಿಯ ಬಲಗೈಯಲ್ಲಿರುವ ಕೋಪದ ಕೊಡ ನಿನ್ನ ಪಾಲಿಗೂ ಬರುವುದು. ಅವಮಾನವೇ ನಿನ್ನ ಸನ್ಮಾನವನ್ನು ಆವರಿಸಿಬಿಡುವುದು.


ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು